Bengaluru Airport; ವಾಹನ ಸವಾರರಿಗೆ ಖಡಕ್ ಎಚ್ಚರಿಕೆ
ಬೆಂಗಳೂರು, ಮೇ 14: ಬೆಂಗಳೂರು ನಗರದ ಹೊರವಲಯದ ದೇವನಹಳ್ಳಿಯಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವಿದೆ. ಪ್ರತಿನಿತ್ಯ ಲಕ್ಷಾಂತರ ಜನರು, ಸಾವಿರಾರು ವಾಹನಗಳು ನಗರದಿಂದ ಏರ್ಪೋರ್ಟ್ಗೆ ಸಾಗುತ್ತವೆ.
ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯ ನಿರ್ವಹಣೆ ಹೊಣೆ ಹೊತ್ತಿರುವ ಸಂಚಾರಿ ಪೊಲೀಸರು ವಿಮಾನ ನಿಲ್ದಾಣದ ವಾಹನ ಸವಾರರಿಗೆ ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ. ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಪೊಲೀಸರ ಪ್ರಕಟಣೆ: ಬೆಂಗಳೂರು ನಗರದ ಸಂಚಾರಿ ಪೊಲೀಸರು ಮಂಗಳವಾರ ಪ್ರಕಟಣೆ ಮೂಕ ಮಾಹಿತಿಯೊಂದನ್ನು ನೀಡಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಅದರಲ್ಲೂ ಮುಖ್ಯವಾಗಿ ಚಾಲಕರು/ ವಾಹನ ಸವಾರರ ಅತಿವೇಗದ ಚಾಲನೆ ಈ ಅಪಘಾತಗಳು ಉಂಟಾಗುವಲ್ಲಿ ಅತ್ಯಂತ ಪ್ರಮುಖವಾದ ಪಾತ್ರ ವಹಿಸುತ್ತಿರುವುದನ್ನು ಗಮನಿಸಿಸಲಾಗಿದೆ ಎಂದು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ವಿಮಾನ ನಿಲ್ದಾಣ ರಸ್ತೆಯಲ್ಲಿ ಅತಿವೇಗದ ಚಾಲನೆಯನ್ನು ಪತ್ತೆ ಹಚ್ಚುವ ಕ್ಯಾಮೆರಾಗಳನ್ನು ಅಳವಡಿಸಿದ್ದು, ಸದರಿ ಕ್ಯಾಮೆರಾಗಳು ಸ್ವಯಂ ಚಾಲಿತವಾಗಿ ಅತಿವೇಗದ ಚಾಲನೆಯನ್ನು ಕಂಡು ಹಿಡಿಯುವ ಸಾಮರ್ಥ್ಯವನ್ನು ಹೊಂದಿವೆ ಎಂದು ತಿಳಿಸಿದ್ದಾರೆ.
ಈ ಕ್ಯಾಮರಾಗಳು ಕಾನೂನಾತ್ಮಕವಾಗಿ ನಿಗದಿಪಡಿಸಲಾಗಿರುವ ಪ್ರತಿ ಗಂಟೆಗೆ 80 ಕಿ. ಮೀ. ಗಿಂತ ವೇಗವಾಗಿ ಚಲಿಸುವ ವಾಹನಗಳ ವಿರುದ್ಧ ಅತಿವೇಗದ ಚಾಲನೆಯ ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.
ಬೆಂಗಳೂರು ನಗರದಿಂದ ಪ್ರತಿನಿತ್ಯ ಸಾವಿರಾರು ವಾಹನಗಳು ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುತ್ತವೆ. ಹಲವು ಬಾರಿ ಸಂಚಾರ ದಟ್ಟಣೆಗೆ ಸಿಲುಕಿ ಪ್ರಯಾಣಿಕರು ಪರದಾಡುತ್ತಾರೆ. ಸರಣಿ ಅಪಘಾತಗಳು ನಡೆಯುತ್ತವೆ. ಆದ್ದರಿಂದ ಪೊಲೀಸರು ವಾಹನ ಸವಾರರ ಮೇಲೆ ಕಣ್ಣಿಡಲಾಗಿದೆ.
ಬೆಂಗಳೂರು ನಗರದಲ್ಲಿ ಸಂಚಾರಿ ಪೊಲೀಸರು ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಂ (ಐಟಿಎಂಎಸ್) ಅಡಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಕ್ಯಾಮೆರಾಗಳನ್ನು ಹಾಕಿದ್ದಾರೆ. ಹೆಲ್ಮೆಟ್ ರಹಿತ ಪ್ರಯಾಣ, ಸಿಗ್ನಲ್ ಜಂಪ್ ಸೇರಿದಂತೆ ವಿವಿಧ ಸಂಚಾರ ನಿಯಮ ಉಲ್ಲಂಘನೆಯನ್ನು ಈ ಕ್ಯಾಮರಾ ಮೂಲಕ ಪತ್ತೆ ಹಚ್ಚಿ ದಂಡವನ್ನು ವಿಧಿಸುತ್ತಿದ್ದಾರೆ.
ಈ ಸುಧಾರಿತ ಕ್ರಮಗಳಿಂದ, ಕ್ಯಾಮೆರಾಗಳಿಂದ ಪತ್ತೆಯಾದ ಸಂಚಾರಿ ನಿಯಮ ಉಲ್ಲಂಘನೆಗಳಿಗೆ ದಂಡ ವಿಧಿಸುತ್ತಿರುವುದರಿಂದ ಸಂಚಾರಿ ನಿಯಮ ಉಲ್ಲಂಘನೆ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಪೊಲೀಸರು ಎಐ ಕ್ಯಾಮರಾಗಳನ್ನು ಅಳವಡಿಕೆ ಮಾಡಿದ್ದರು. ಅಲ್ಲಿ ಅತಿ ವೇಗದ ವಾಹನ ಸವಾರರನ್ನು ಗುರುತಿಸಿ ಅವರಿಗೆ ದಂಡ ವಿಧಿಸಲಾಗುತ್ತಿತ್ತು. ಈಗ ಇದೇ ಮಾದರಿಯನ್ನು ಬೆಂಗಳೂರು ಏರ್ಪೋರ್ಟ್ ರಸ್ತೆಯಲ್ಲಿ ಅಳವಡಿಕೆ ಮಾಡಲಾಗಿದೆ.
ದಿನದಿಂದ ದಿನಕ್ಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಸಂಚಾರ ನಡೆಸುವ ಪ್ರಯಾಣಿಕರ, ವಾಹನಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಕ್ಯಾಬ್, ಬಸ್, ಖಾಸಗಿ ವಾಹನ ಸೇರಿದಂತೆ ಹಲವು ವಾಹನಗಳು ಏರ್ಪೋರ್ಟ್ಗೆ ಸಂಚಾರ ನಡೆಸುತ್ತವೆ. ಇವುಗಳ ಸುಗಮ ಸಂಚಾರಕ್ಕೆ ಅನುಕೂಲವಾಗಲು ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
-
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
Bengaluru Airport: ಮಳೆ ಅಬ್ಬರಕ್ಕೆ 30 ವಿಮಾನಗಳ ಮಾರ್ಗ ಬದಲು, ಏರ್ಪೋರ್ಟ್ ಟರ್ಮಿನಲ್ನಲ್ಲಿ ನೀರು ಸೋರಿಕೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ












Click it and Unblock the Notifications