Bengaluru Police Extortion: ಆಸ್ಪತ್ರೆಗೆ ಹೋಗುತ್ತಿದ್ದ ದಂಪತಿಗೆ ಕಿರುಕುಳ ನೀಡಿ ಹಣ ಸುಲಿಗೆ ಆರೋಪ
ಬೆಂಗಳೂರು ಪೊಲೀಸರ ಮೇಲೆ ಪದೇ ಪದೆ ಹಣ ವಸೂಲಿ ಆರೋಪಗಳು ಕೇಳಿ ಬರುತ್ತಿವೆ. ಜಯನಗರದಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದ ದಂಪತಿಯಿಂದ ಹಣ ವಸೂಲಿ ಮಾಡಲಾಗಿದೆ ಎಂದು ಅವರು ಪುತ್ರ ಆರೋಪಿಸಿ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು, ಫೆಬ್ರವರಿ 07: ಬೆಂಗಳೂರರುಪೊಲೀಸರ ಮೇಲೆ ಪದೇ ಪದೆ ಹಣ ವಸೂಲಿ ಆರೋಪಗಳು ಕೇಳಿ ಬರುತ್ತಿವೆ. ಇತ್ತೀಚಿನ ದಿನಗಳಲ್ಲಿ ಕೆಲವು ಪೊಲೀಸರ ವರ್ತನೆ ನಾಗರಿಕರಿಗೆ ತಲೆನೋವಾಗಿ ಪರಿಣಮಿಸುತ್ತಿದೆ. ಜಯನಗರದಲ್ಲಿ ಪೊಲೀಸರ ವಿರುದ್ಧ ಮತ್ತೆ ಹಣ ವಸೂಲಿ ಆರೋಪ ಮಾಡಲಾಗಿದೆ.
ಅನಾರೋಗ್ಯ ಕಾರಣಕ್ಕೆ ಆಸ್ಪತ್ರೆಗೆ ಹೊರಟ್ಟಿದ್ದ ದಂಪತಿಯಿಂದ ಪೊಲೀಸರು ದಂಡ ವಸೂಲಿ ಮಾಡಿದ್ದಾರೆ. ಇಂತದ್ದೊಂದು ಘಟನೆ ಜಯನಗರ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ದಂಪತಿ ಪುತ್ರ ರಾಕೇಶ್ ಎಂಬುವವರು ಟ್ವೀಟ್ ಮೂಲಕ ಅಸಮಾಧಾನ ತೋಡಿಕೊಂಡಿದ್ದಾರೆ.
ಟ್ವೀಟ್ನಲ್ಲಿ, ನಾವು ಜೆಪಿ ನಗರದ ನಿವಾಸಿಗಳು. 47 ವರ್ಷದ ನನ್ನ ತಾಯಿ ಮಂಗಳ ಅವರಿಗೆ ಸಕ್ಕರೆ ಖಾಯಿಲೆ ಇದ್ದು, ಅವರನ್ನು ತಂದೆಯವರು ಜಯನಗರದ 8ನೇ ಬ್ಲಾಕ್ ನಲ್ಲಿರುವ ಮಧುಮೇಹ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಈ ವೇಳೆ ಬೈಕ್ ತಪಾಸಣೆ ನಡೆಸುತ್ತಿದ್ದ ಸಂಚಾರಿ ಪೊಲೀಸರು ತಡೆದಿದ್ದಾರೆ. ನಂತರ ಏಕವಚನದಲ್ಲಿ ತಂದೆಯನ್ನು ನಿಂದಿಸಿ ಕಿರುಕುಳ ನೀಡಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ನಂತರ ಸಂಚಾರ ಪೊಲೀಸ್ ಸಿಬ್ಬಂದಿಎಂಬುವವರು ಐದು ಸಾವಿರ ರೂಪಾಯಿ ಪಾವತಿಸುವಂತೆ ತಂದೆಗೆ ಸೂಚಿಸಿದ್ದಾರೆ. ಪತ್ನಿಗೆ ಕಾಯಿಲೆ ಇದ್ದು, ಆಸ್ಪತ್ರೆಗೆ ಕರೆದೊಯ್ಯವುದಾಗಿ ತಿಳಿಸಿದರು ಬಿಟ್ಟುಕಳುಹಿಸಿಲ್ಲ. ನನ್ನ ಬಳಿ ಕೇವಲ 1000 ರೂಪಾಯಿ ಇದೆ ಎಂದು ಹೇಳಿದರು ಅದಕ್ಕೆ ಪೊಲೀಸರು ಒಪ್ಪಿಲ್ಲ. ಐದು ಸಾವಿರ ಹಣ ಕಟ್ಟುವಂತೆ ಪೊಲೀಸರು ಪಟ್ಟು ಹಿಡಿದ ಕಾರಣ, ವಾಹನ ಅಲ್ಲೇ ಬಿಟ್ಟು ಸುಮಾರು 2 ಕಿಲೋ ಮೀಟರ್ ನಡೆದುಕೊಂಡೇ ಮನಗೆ ಬಂದಿದ್ದಾರೆ. ಮನೆಗೆ ಬಂದು ಹಣ ತೆಗೆದುಕೊಂಡು ಹೋಗಿ ಕೇಳಿದಷ್ಟು ಹಣ ಪಾವತಿಸಿದ್ದಾರೆ ಎಂದು ಪುತ್ರ ರಾಕೇಶ್ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರು ಸಂಚಾರಿ ಪೋಲಿಸರಿಗೆ ಟ್ಯಾಗ್ ಮಾಡಿ, ದೂರು ನೀಡಿದ್ದಾರೆ. ಇತ್ತೀಚೆಗಷ್ಟೇ ಮಾನ್ಯತಾ ಟೆಕ್ ಪಾರ್ಕ್ ಬಳಿ ದಂಪತಿಯಿಂದ ಹಣ ಸುಲಿಗೆ ಮಾಡಿದ್ದರು. ಅವರಿಗೆ ಓಟಾಟಕ್ಕೆ ನಿರ್ಬಂಧ ವಿದೆ ಎಂದು ಹೇಳಿ ಹಣ ಸುಲಿಗೆ ಮಾಡಲಾಗಿತ್ತು. ನಂತರ ಇಬ್ಬರು ಸಿಬ್ಬಂದಿ ಅಮಾನತುಗೊಂಡಿದ್ದರು. ಇದೀಗ ಮತ್ತೆ ಅಂತದ್ದೆ ಘಟನೆ ನಡೆದಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
ಆರೋಗ್ಯ ವಿಮಾ ಕ್ಷೇತ್ರದಲ್ಲಿ ಭರ್ಜರಿ ಪ್ರಗತಿ: 1.2 ಲಕ್ಷ ಕೋಟಿ ರೂ ದಾಟಿದ ಪ್ರೀಮಿಯಂ ಸಂಗ್ರಹ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications