Bengaluru Traffic Police: ಇನ್ಮುಂದೆ ಈ ಟ್ರಾಫಿಕ್ ನಿಯಮ ಉಲ್ಲಂಘಿಸಿದರೆ ಎಫ್ಐಆರ್ ದಾಖಲು!
ಬೆಂಗಳೂರಿನಲ್ಲಿ ಸಂಚಾರ ನಿಯಮಗಳ (ಟ್ರಾಫಿಕ್ ರೂಲ್ಸ್ ಬ್ರೇಕ್) ಉಲ್ಲಂಘನೆ ಕಡಿಮೆಯಾಗುತ್ತಿಲ್ಲ. ಇತ್ತೀಚಿನ ದಿನಗಳಲ್ಲಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವವರು ಹಾಗೂ ಕುಡಿದು ವಾಹನ ಚಲಾಯಿಸುವವರಿಗೆ ಬುದ್ಧಿ ಕಲಿಸಲು ಬೆಂಗಳೂರು ಟ್ರಾಫಿಕ್ ಪೊಲೀಸರು ಮುಂದಾಗಿದ್ದಾರೆ. ಬೆಂಗಳೂರಲ್ಲಿ ಇತ್ತೀಚಿನ ದಿನಗಳಲ್ಲಿ ಟ್ರಾಫಿಕ್ ಜಾಮ್ ಸಹ ಹೆಚ್ಚಾಗುತ್ತಲ್ಲೇ ಇದೆ. ಟ್ರಾಫಿಕ್ ಜಾಮ್ಗೆ ಟ್ರಾಫಿಕ್ ನಿಯಮ ಉಲ್ಲಂಘನೆಯೂ ಪ್ರಮುಖ ಕಾರಣವಾಗಿದೆ. ಹೀಗಾಗಿ, ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲು ಬೆಂಗಳೂರು ಟ್ರಾಫಿಕ್ ಪೊಲೀಸರು ಮುಂದಾಗಿದ್ದಾರೆ.
ಬೆಂಗಳೂರಲ್ಲಿ ಇತ್ತೀಚಿನ ದಿನಗಳಲ್ಲಿ ಫೀಕ್ ಅವರ್ಗಳಲ್ಲಿ ಮಾತ್ರವಲ್ಲ ಮಧ್ಯಾಹ್ನದ ಸಮಯದಲ್ಲೂ ನಗರದ ಕೆಲವು ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗುತ್ತಿದ್ದು, ಟ್ರಾಫಿಕ್ ಪೊಲೀಸರಿಗೆ ಇದನ್ನು ನಿಭಾಯಿಸುವುದು ಸವಾಲಾಗಿದೆ. ಹೀಗಾಗಿ, ಬೆಂಗಳೂರಲ್ಲಿ ಸಂಚಾರ ನಿಯಮ ಉಲ್ಲಂಘನೆ ಹಾಗೂ ಡ್ರಿಂಕ್ & ಡ್ರೈವ್ ಮಾಡುವವರಿಗೆ ಕಡಿವಾಣ ಹಾಕುವ ನಿಟ್ಟಿನಲ್ಲೂ ಪ್ಲಾನ್ ಮಾಡಿಕೊಳ್ಳಲಾಗುತ್ತಿದೆ.

ನಿಯಮ ಉಲ್ಲಂಘಿಸಿದರೆ ಎಫ್ಐಆರ್: ಇನ್ನು ಬೆಂಗಳೂರಲ್ಲಿ ಇತ್ತೀಚಿನ ದಿನಗಳಲ್ಲಿ ಡ್ರಿಂಕ್ & ಡ್ರೈವ್ ಕೇಸ್ಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕುವುದಕ್ಕೆ ಬೆಂಗಳೂರು ಸಂಚಾರ ಪೊಲೀಸರು ಮುಂದಾಗಿದ್ದಾರೆ. ನಿಯಮ ಉಲ್ಲಂಘನೆ ಮಾಡಿ ವಾಹನ ಚಲಾಯಿಸುವವರಿಗೆ ಪಾಠ ಕಲಿಸಲು ನಿರ್ಧರಿಸಲಾಗಿದೆ. ಈ ರೀತಿ ನಿಯಮ ಉಲ್ಲಂಘನೆ ಮಾಡುವವರ ಲೈಸೆನ್ಸ್ ಇನ್ಮುಂದೆ ಕ್ಯಾನ್ಸಲ್ ಆಗಲಿದೆ!
ಇನ್ನು ಡಿಎಲ್ ಇಲ್ಲದೆ ಇರುವವರು (ಡ್ರೈವಿಂಗ್ ಲೈಸೆನ್ಸ್) ಡ್ರಿಂಕ್ & ಡ್ರೈವ್ ಮಾಡುವವರ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಇನ್ಮುಂದೆ ಡ್ರಿಂಕ್ & ಡ್ರೈವ್ ಮಾಡುವ ವಾಹನ ಸವಾರರು ತಪಾಸಣೆ ಮಾಡುವಾಗ ಸಿಕ್ಕಿ ಬಿದ್ದರೆ ಅವರ ಮೇಲೆ ಎಫ್ಐಆರ್ ದಾಖಲಾಗಲಿದೆ. ಹೌದು ನಗರದಲ್ಲಿ ಡ್ರಿಂಕ್ & ಡ್ರೈವ್ ಪ್ರಕರಣಗಳನ್ನು ತಪ್ಪಿಸುವ ಉದ್ದೇಶದಿಂದ ಕಠಿಣ ಕ್ರಮ ತೆಗೆದುಕೊಳ್ಳಲು ರಾಜ್ಯ ಸಂಚಾರ ಪೊಲೀಸರು ಮುಂದಾಗಿದ್ದಾರೆ.
ಡ್ರಿಂಕ್ & ಡ್ರೈವ್ಗೆ ಮಾತ್ರ ದಂಡವಲ್ಲ: ಬೆಂಗಳೂರಿನಲ್ಲಿ ಟ್ರಾಫಿಕ್ ಪೊಲೀಸರು ಇಲ್ಲಿಯವರೆಗೆ ಡ್ರಿಂಕ್ & ಡ್ರೈವ್ ಪರೀಕ್ಷೆ ಮಾಡುತ್ತಿದ್ದರು. ಅಲ್ಲದೇ ಈ ರೀತಿ ನಿಯಮ ಉಲ್ಲಂಘಿಸುವವರಿಗೆ ಕೇವಲ ದಂಡವನ್ನು ಮಾತ್ರ ಕಟ್ಟಿಸಿಕೊಂಡು ಬಿಡಲಾಗುತ್ತಿತ್ತು. ಆದರೆ, ಇದೀಗ ಡ್ರಿಂಕ್ & ಡ್ರೈವ್ ತಪಾಸಣೆಯ ವೇಳೆ ಡ್ರೈವಿಂಗ್ ಲೈಸೆನ್ಸ್ ಸಹ ಪರಿಶೀಲನೆ ಮಾಡಲಾಗುತ್ತಿದೆ. ಒಂದೊಮ್ಮೆ ಇದು ಇಲ್ಲದೆ ಇದ್ದರೆ ಎಫ್ಐಆರ್ ದಾಖಲಿಸಿಕೊಂಡು, ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಲಾಗುತ್ತದೆ. ಹೀಗಾಗಿ, ವಾಹನ ಸವಾರರು ನಿಯಮ ಉಲ್ಲಂಘನೆ ಮಾಡುವ ಮುಂಚೆ ನೋಡಿಕೊಳ್ಳಿ.
ವಿಶೇಷ ಅಭಿಯಾನ ನಡೆಸಿದ್ದ ಪೊಲೀಸರು: ಬೆಂಗಳೂರಿನಲ್ಲಿ ಮದ್ಯ ಸೇವಿಸಿ ವಾಹನ ಚಲಾಯಿಸುವವರನ್ನು ಪತ್ತೆ ಮಾಡುವ ಉದ್ದೇಶದಿಂದ ಬೆಂಗಳೂರು ಟ್ರಾಫಿಕ್ ಪೊಲೀಸರು ವಿಶೇಷ ಅಭಿಯಾನವನ್ನು ನಡೆಸಿದ್ದರು. ಈಚೆಗೆ ನಿರಂತರವಾಗಿ ಈ ಕಾರ್ಯಾಚರಣೆಗಳು ನಡೆದಿದ್ದು, ನಿಯಮ ಉಲ್ಲಂಘನೆ ಮಾಡುವವರ ಮೇಲೆ ದಂಡ ವಿಧಿಸಲಾಗುತ್ತಿದೆ. ಆದರೆ, ಕೆಲವರು ಮದ್ಯ ಸೇವಿಸಿ ಬೇರೆಯವರ ವಾಹನ ಬಳಸುವುದು ಹಾಗೂ ಲೈಸನ್ಸ್ ಇಲ್ಲದೆ ವಾಹನ ಚಲಾಯಿಸುವ ಪ್ರಕರಣಗಳ ಬಗ್ಗೆಯೂ ಅನುಮಾನ ಹಾಗೂ ಕೆಲವು ನಿರ್ದಿಷ್ಟ ಪ್ರಕರಣಗಳಲ್ಲಿ ಇದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಹೊಸ ಕ್ರಮಗಳನ್ನು ಪೊಲೀಸರು ಅನುಸರಿಸುತ್ತಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications