Bengaluru Traffic Issue: ನಾಳೆ ಟ್ರಾಫಿಕ್ ಪೊಲೀಸರಿಂದ 'ನಾಗರಿಕ ಸಂಚಾರ ವೇದಿಕೆ ಸಭೆ', ನೀವು ಭಾಗವಹಿಸಿ
ಬೆಂಗಳೂರು, ಮಾರ್ಚ್ 10: ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿವಾರಣೆಗೆ ನಗರ ಸಂಚಾರ ಪೊಲೀಸ್ ಒಂದು ಹೆಜ್ಜೆ ಮುಂದೇ ಹೋಗಿದ್ದಾರೆ. ಟ್ರಾಫಿಕ್ ಸಂಬಂಧ ಸಾರ್ವಜನಿಕರ ಸಮಸ್ಯೆಗಳನ್ನು ಖುದ್ದು ಪೊಲೀಸರೇ ಭೇಟಿ ಮಾಡಿ ಆಲಿಸಲಿದ್ದಾರೆ.
ಬೆಂಗಳೂರು ಸಂಚಾರ ಪೊಲೀಸ್ ವಿಶೇಷ ಆಯುಕ್ತ ಸಲೀಂ ಅವರು ಈ ಕುರಿತು ಟ್ವೀಟ್ ಮಾಡಿದ್ದಾರೆ. ಶನಿವಾರ ಮಾರ್ಚ್ 11ರಂದು ರಂದು ನಡೆಯಲಿರುವ ಸಭೆ ಕುರಿತು ನಗರ ಸಂಚಾರ ಪೊಲೀಸ್ ಇಲಾಖೆ ಹೊರಡಿಸಿದ ಸುತ್ತೋಲೆಯನ್ನು ಅವರು ಪೋಸ್ಟ್ ಮಾಡಿದ್ದಾರೆ.

ಬೆಂಗಳೂರಿನ 48 ಟ್ರಾಫಿಕ್ ಪೊಲೀಸ್ ಠಾಣೆಗಳಲ್ಲಿ ಶನಿವಾರ ನಡೆಯಲಿರುವ ನಾಗರಿಕ ಸಂಚಾರ ವೇದಿಕೆ ಸಭೆಯಲ್ಲಿ ಬೆಂಗಳೂರಿನ ಟ್ರಾಫಿಕ್ ಪೊಲೀಸರು ನಿವಾಸಿಗಳನ್ನು ಭೇಟಿ ಮಾಡಿ, ಅವರ ಸಮಸ್ಯೆಗಳನ್ನು ಕೇಳಲಿದ್ದಾರೆ. ಈ ಸಭೆ ಬೆಳಗ್ಗೆ 11.30 ರಿಂದ ಮಧ್ಯಾಹ್ನ 1.30ರವರೆಗೆ ಸಭೆ ನಡೆಯಲಿದೆ, ನಗರದಲ್ಲಿ ಹೆಚ್ಚುರುತ್ತಿರುವ ಸಂಚಾರ ದಟ್ಟಣೆ ಸಮಸ್ಯೆಯ ನಿವಾರಣೆಗೆ ಪ್ರಯಾಣಿಕರು ಭಾಗವಹಿಸುವಂತೆ ಇಲಾಖೆ ಮನವಿ ಮಾಡಿದೆ.
ಸಂಚಾರ ದಟ್ಟಣೆ ಸೇರಿದಂತೆ ಟ್ರಾಫಿಕ್ ಸಂಬಂಧಿ ಸಮಸ್ಯೆಗಳ ನಿವಾರಣೆಗೆ ಸಾರ್ವಜನಿಕರು/ವಾಹನ ಸವಾರರು/ರಸ್ತೆ ಬಳಕೆದಾರರನ್ನು ತೊಡಗಿಸಿಕೊಳ್ಳಲು ಪ್ರತಿ ತಿಂಗಳು 2ನೇ ಶನಿವಾರ ಈ ಸಭೆ ನಡೆಯುತ್ತದೆ. ಅದರಂತೆ ಈ ಭಾರಿಯು ಎಲ್ಲ 48 ಟ್ರಾಫಿಕ್ಗಳಲ್ಲಿ ನಾಗರಿಕ ಸಂಚಾರ ವೇದಿಕೆ ಸಭೆ ಆಯೋಜಿಸಲಾಗಿದೆ ಎಂದು ಸಲೀಂ ಅವರು ತಿಳಿಸಿದ್ದಾರೆ.
ಸಭೆ ವೇಳೆ ಸಾರ್ವಜನಿಕರು ಸಂಚಾರ ಕುರಿತಾದ ತಮಗಾದ ಅನುಭವ, ಸಮಸ್ಯೆಗಳನ್ನು ಹೇಳಿಕೊಳ್ಳಬಹುದು. ಪಟ್ಟಣದಲ್ಲಿ ಸಂಚಾರ ನಿರ್ವಹಣೆ ಸುಧಾರಣೆಗೆ ಸಲಹೆ ನೀಡಬಹುದು. ಈ ಸದಾವಕಾಶವನ್ನು ಎಲ್ಲರೂ ಸಂಪೂರ್ಣವಾಗಿ ಬಳಸಿಕೊಳ್ಳುವಂತೆ ನಾಗರಿಕರು ಹತ್ತಿರದ ಟ್ರಾಫಿಕ್ ಪೊಲೀಸ್ ಠಾಣೆಗೆ ಭೇಟಿ ನೀಡಿ ಸಭೆಯಲ್ಲಿ ಭಾಗವಹಿಸಬೇಕು. ಸಮಸ್ಯೆ ವಿವರಿಸಿದ ಬಳಿಕ ಪೊಲೀಸ್ ಸಾಧ್ಯವಾದಲ್ಲಿ ಸಭೆಯಲ್ಲೇ ಕೆಲವು ಪರಿಹಾರಗಳನ್ನು ನೀಡುತ್ತಾರೆ.

ಆದ್ದರಿಂದ ಬೆಂಗಳೂರಿನ ನಿವಾಸಿಗಳು/ನಾಗರಿಕರು ನಿಮ್ಮ ಮನೆ ಹತ್ತಿರದ ಸಂಚಾರ ಪೊಲೀಸ್ ಠಾಣೆಗಳಲ್ಲಿ ಸ್ವಯಂ ಪ್ರೇರಣೆಯಿಂದ ಸಂವಾದಾತ್ಮಕ ಸಮಾರಂಭದಲ್ಲಿ ಭಾಗವಹಿಸಬೇಕು. ಆ ಮೂಲಕ ನಿಮಗೆ ಸಹಾಯ ಮಾಡಲಿರುವ ಸಂಚಾರ ಪೊಲೀಸರಿಗೆ ನೀವು ಸಹಕರಿಸಬೇಕು.
-
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ











Click it and Unblock the Notifications