Bengaluru Traffic: ನಗರದ ಈ ಭಾಗದಲ್ಲಿ ಕಚೇರಿಗಳ ಸಮಯ ಬದಲಾವಣೆಗೆ ಪ್ಲಾನ್: ಬೆಂಗಳೂರು ಪೊಲೀಸರು
ಬೆಂಗಳೂರು: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಟ್ರಾಫಿಕ್ ಜಾಮ್ ಸಮಸ್ಯೆ ಹೆಚ್ಚಾಗುತ್ತಿದ್ದು, ಇದೀಗ ಟ್ರಾಫಿಕ್ ಜಾಮ್ ಸಮಸ್ಯೆ ಪರಿಹಾರಕ್ಕೆ ಬೆಂಗಳೂರು ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಕೈಜೋಡಿಸಿವೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ಟ್ರಾಫಿಕ್ ಜಾಮ್ ಆಗುವ ಪ್ರದೇಶಗಳಲ್ಲಿ ಹೊಸ ಬದಲಾವಣೆ ಮಾಡುವುದಕ್ಕೆ ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ಇದರಲ್ಲಿ ಕಚೇರಿಗಳ ಸಮಯ ಬದಲಾವಣೆಯೂ ಸೇರಿದೆ.
ಬೆಂಗಳೂರಿನಲ್ಲಿ ಹೆಚ್ಚು ಟ್ರಾಫಿಕ್ ಜಾಮ್ ಆಗುವ ಪ್ರದೇಶಗಳಲ್ಲಿ ಸಿಲ್ಕ್ ಬೋರ್ಡ್ ಜಂಕ್ಷನ್ ಮತ್ತು ಕೆ.ಆರ್ ಪುರಂ ನಡುವಿನ 17 ಕಿ.ಮೀ. ಉದ್ದದ ಬೆಂಗಳೂರು ಹೊರ ವರ್ತುಲ ರಸ್ತೆ ಸೇರಿದೆ. ಈ ಭಾಗದಲ್ಲಿ ಸೋಮವಾರ ಭಾರೀ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿತ್ತು. ಸೋಮವಾರ ಕಚೇರಿ, ಶಾಲಾ - ಕಾಲೇಜು ಹಾಗೂ ವಿವಿಧ ಕೆಲಸಗಳಿಗೆ ಹೋಗುವ ಸಾವಿರಾರು ಜನ ಈ ಮಾರ್ಗದಲ್ಲಿ ಸಂಚರಿಸುವಾಗ ಭಾರೀ ಟ್ರಾಫಿಕ್ ಜಾಮ್ ಸೃಷ್ಟಿಯಾಗಿತ್ತು. ಈ ಪ್ರದೇಶದಲ್ಲಿ ಟ್ರಾಫಿಕ್ ಜಾಮ್ ಕಂಟ್ರೋಲ್ ಮಾಡುವುದಕ್ಕೆ ಕಾರಿಡಾರ್ ಅಭಿವೃದ್ಧಿಪಡಿಸಲಾಗುತ್ತಿದ್ದು, ಅಂದಾಜು 450 ಕೋಟಿ ರೂ. ವೆಚ್ಚದಲ್ಲಿ ಪುನರಾಭಿವೃದ್ಧಿ ಕೆಲಸ ನಡೆಯಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಬೆಂಗಳೂರಿನ ಈ ಪ್ರದೇಶದಲ್ಲಿ ಹೆಚ್ಚು ಟ್ರಾಫಿಕ್ ಜಾಮ್ ಆಗುವುದನ್ನು ತಪ್ಪಿಸುವ ಉದ್ದೇಶದಿಂದ ಬೆಂಗಳೂರು ನಗರ ಪೊಲೀಸರು ಈಗ ಇರುವ ಬ್ಯಾರಿಕೇಡ್ಗಳನ್ನು ತೆಗೆದು ವಾಹನ ಸವಾರರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಮುಂದಾಗಿದೆ. ಸಾಧ್ಯವಿರುವ ಪ್ರದೇಶಗಳಲ್ಲಿ ಮುಖ್ಯವಾಗಿ ಎರಡು ಅಥವಾ ಎರಡಕ್ಕಿಂತ ಹೆಚ್ಚು ಪಥ ಇರುವ ಹಾಗೂ ಸರ್ವಿಸ್ ರಸ್ತೆಗಳನ್ನು ಅಗಲಗೊಳಿಸುವ / ಹೆಚ್ಚು ವಾಹನಗಳು ಸಂಚರಿಸುವಂತೆ ಮಾಡಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ರಸ್ತೆಯ ಉದ್ದಕ್ಕೂ ಬ್ಯಾರಿಕೇಡ್ಗಳನ್ನು ಸ್ಥಳಾಂತರಿಸಲು ಮುಂದಾಗಿರುವುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ತಿಳಿಸಿದ್ದಾರೆ.
ಇಬ್ಲೂರು ಜಂಕ್ಷನ್, ಹೆಬ್ಬಾಳ ಮತ್ತು ಕೃಷ್ಣರಾಜಪುರ ಸೇರಿದಂತೆ ಹೆಚ್ಚು ಟ್ರಾಫಿಕ್ ಜಾಮ್ ಆಗುತ್ತಿರುವ ಪ್ರದೇಶಗಳಲ್ಲಿ ಬ್ಯಾರಿಕೇಡ್ಗಳ ತೆರವು ಹಾಗೂ ಲೈನ್ಗಳ ಬದಲಾವಣೆಗಳಿಂದಾಗಿ ವಾಹನ ಸವಾರರಿಗೆ ಅನುಕೂಲವಾಗಲಿದ್ದು, ಟ್ರಾಫಿಕ್ ಜಾಮ್ ಇಳಿಕೆ ಆಗಲಿದೆ ಎಂದು ನಿರೀಕ್ಷೆ ಮಾಡಲಾಗಿದೆ. ಕೆಲವು ಪ್ರದೇಶಗಳಲ್ಲಿ ಪ್ರಾಯೋಗಿಕ ಕೆಲಸ ಪ್ರಾರಂಭವಾಗಿದೆ ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಕಚೇರಿಗಳ ಸಮಯ ಬದಲಾವಣೆ
ಬೆಂಗಳೂರಿನಲ್ಲಿ ಪೀಕ್ ಅವರ್ಗಳಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಹೆಚ್ಚಾಗುತ್ತಿದೆ. ಏಕಕಾಲದಲ್ಲಿ ಲಕ್ಷಾಂತರ ವಾಹನಗಳು ರಸ್ತೆಗೆ ಇಳಿಯುತ್ತಿವೆ. ಹೀಗಾಗಿ, ಬೆಂಗಳೂರಿನಲ್ಲಿ ಪೀಕ್ ಅವರ್ಗಳಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ತಪ್ಪಿಸುವುದಕ್ಕೆ ಕಚೇರಿಗಳ ಸಮಯ ಬದಲಾವಣೆ ಪ್ಲಾನ್ ಮತ್ತೆ ಜಾರಿ ಮಾಡುವುದಕ್ಕೆ ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. 2026 ರಲ್ಲಿಯೂ ಸಹ ಕಚೇರಿ ಸಮಯಗಳನ್ನು ಬದಲಾಯಿಸಲು ಮತ್ತು ಸಾರ್ವಜನಿಕ ಸಾರಿಗೆ ಮತ್ತು ಕಾರ್ಪೂಲಿಂಗ್ ಅನ್ನು ಉತ್ತೇಜಿಸಲು ಪ್ರಯತ್ನಗಳನ್ನು ನಾವು ಮುಂದುವರಿಸಲಿದ್ದೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಹೇಳಿದ್ದಾರೆ.
ಶೀಘ್ರದಲ್ಲೇ ಬೆಂಗಳೂರು ಹೊರ ವರ್ತುಲ ರಸ್ತೆಯ / ಪ್ರದೇಶದ ಕಂಪನಿ ಪ್ರತಿನಿಧಿಗಳನ್ನು ಭೇಟಿ ಮಾಡಲು ನಿರ್ಧರಿಸಲಾಗಿದೆ. ಕಚೇರಿಗಳ ಸಮಯ ಬದಲಾವಣೆ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಅವರೊಂದಿಗೆ ಚರ್ಚೆ ಮಾಡಲಿದ್ದೇವೆ ಎಂದು ಬೆಂಗಳೂರು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಕ್ರಮಗಳನ್ನು ಅನುಸರಿಸುವಂತೆ ಒತ್ತಾಯಿಸುವುದಕ್ಕೆ ಸಾಧ್ಯವಿಲ್ಲ. ಆದರೆ ಟ್ರಾಫಿಕ್ ಜಾಮ್ ಕಡಿಮೆ ಮಾಡಲು ಪರಿಹಾರಗಳನ್ನು ಸೂಚಿಸಲಿದ್ದೇವೆ ಎಂದಿದ್ದಾರೆ.
-
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
South India: ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಭಾವ: ತಮಿಳುನಾಡು ಮುನ್ನಡೆ, ಕರ್ನಾಟಕದಲ್ಲಿ ಏಕೆ ಹಿನ್ನಡೆ












Click it and Unblock the Notifications