ಹೆಬ್ಬಾಳ ಫ್ಲೈಓವರ್ ಮೇಲೆ ಸರಕು ವಾಹನಗಳ ನಿರ್ಬಂಧದಿಂದ ಟ್ರಾಫಿಕ್ ನಿಯಂತ್ರಣ
ಬೆಂಗಳೂರು, ನವೆಂಬರ್ 24: ಭಾರೀ ಟ್ರಾಫಿಕ್ ಜಾಮ್ ಉಂಟಾಗುವ ಸಿಲಿಕಾನ್ ಸಿಟಿಯ ಪ್ರಮುಖ ಪ್ರದೇಶಗಳಲ್ಲಿ ಏರ್ಪೋರ್ಟ್ ರಸ್ತೆಯು ಒಂದು. ಇಲ್ಲಿ ಒಮ್ಮೆ ಟ್ರಾಫಿಕ್ ಜಾಮ್ ಉಂಟಾದರೇ ಕನಿಷ್ಠ 20 ರಿಂದ 25 ನಿಮಿಷಗಳಾದರೂ ಬೇಕಾಗುತ್ತದೆ.
ಹೀಗಾಗಿ ಬೆಂಗಳೂರು ಸಂಚಾರ ಪೊಲೀಸರು ಹೊಸ ಯೋಜನೆ ಮಾಡಿದ್ದು, ಪ್ರತಿ ದಿನ ಬೆಳಗ್ಗೆ 8.30 ರಿಂದ 10.30ರವರೆಗೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಕು ಸಾಗಣೆ ವಾಹನಗಳ ಸಂಚಾರವನ್ನು ನಿಷೇಧಿಸಿದ್ದರು. ಈ ಕ್ರಮವನ್ನು ಪ್ರಾಯೋಗಿಕವಾಗಿ ಒಂದು ತಿಂಗಳ ಮಟ್ಟಿಗೆ ಆದೇಶಿಸಲಾಗಿದೆ.
ಈ ಕ್ರಮದಿಂದ ಹೆಬ್ಬಾಳ ಮೇಲ್ಸೇತುವೆಯಲ್ಲಿ ಸಂಚಾರ ದಟ್ಟಣೆ ಗಮನಾರ್ಹವಾಗಿ ನಿಯಂತ್ರಣವಾಗಿದೆ ಎಂದು ಬೆಂಗಳೂರು ಟ್ರಾಫಿಕ್ ವಿಶೇಷ ಪೊಲೀಸ್ ಆಯುಕ್ತ ಡಾ.ಎಂ.ಎ.ಸಲೀಂ ಮಾಹಿತಿ ಹಂಚಿಕೊಂಡಿದ್ದಾರೆ.
"ವಾಹನ ಚಾಲಕರು ಈ ಹಿಂದೆ ಎಸ್ಟೀಮ್ ಮಾಲ್ನಿಂದ ಹೆಬ್ಬಾಳ ಫ್ಲೈಓವರ್ಗೆ ತಲುಪಲು 20 ನಿಮಿಷಗಳನ್ನು ತೆಗೆದುಕೊಂಡರೆ, ಕೆಲವೊಮ್ಮೆ ಸುಮಾರು 25 ನಿಮಿಷಗಳನ್ನು ತೆಗೆದುಕೊಳ್ಳುತ್ತಿದ್ದರು. ಈಗ ಗೂಡ್ಸ್ ವಾಹನಗಳ ಮೇಲೆ ನಿರ್ಬಂಧ ವಿಧಿಸಿದ ನಂತರ ಪ್ರಯಾಣದ ಸಮಯವು ಆರರಿಂದ ಎಂಟು ನಿಮಿಷಗಳಿಗೆ ಇಳಿದಿದೆ" ಎಂದು ಟ್ವೀಟ್ ಮಾಡಿದ್ದಾರೆ.

ಸಂಚಾರ ದಟ್ಟಣೆ ಗಮನಾರ್ಹವಾಗಿ ಕಡಿಮೆಯಾಗಿದೆ ಎಂದಿರುವ ಅವರು ಪ್ರತಿನಿತ್ಯ ಹೆಬ್ಬಾಳ ಮೇಲ್ಸೇತುವೆಗೆ ಭೇಟಿ ನೀಡಿ ಜನಸಂದಣಿ ಇರುವ ಸಮಯದಲ್ಲಿ ವಾಹನಗಳ ಓಡಾಟವನ್ನು ಪರಿಶೀಲಿಸುತ್ತಿದ್ದಾರೆ. ಇನ್ನು, ಅಗತ್ಯವಿದ್ದರೇ ಒಂದು ತಿಂಗಳು ವಿಧಿಸಿರುವ ನಿರ್ಬಂಧವನ್ನು ಮತ್ತಷ್ಟು ವಿಸ್ತರಣೆ ಮಾಡುವ ಬಗ್ಗೆಯೂ ಯೋಚಿಸುವುದಾಗಿ ತಿಳಿಸಿದ್ದಾರೆ.
ಕಳೆದ ವಾರ ಸಂಚಾರಿ ಪೊಲೀಸರು ಸಾದಹಳ್ಳಿ ಗೇಟ್ನಿಂದ ಹೆಬ್ಬಾಳದ ನಡುವೆ ಬೆಳಗ್ಗೆ ಬೆಳಗ್ಗೆ 8.30 ರಿಂದ 10.30ರ ವರೆಗೆ ಎಲ್ಲಾ ರೀತಿಯ ಸರಕು ಸಾಗಾಟ ವಾಹನಗಳನ್ನು ನಿಷೇಧಿಸಿರುವ ಕುರಿತು ಆದೇಶ ಹೊರಡಿಸಿದ್ದರು.
ಇತ್ತಿಚೆಗೆ ಬೆಂಗಳೂರಿನ 10 ಪ್ರಮುಖ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ಗೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
-
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications