ಹೆಬ್ಬಾಳ ಫ್ಲೈ ಓವರ್ ಕಾಮಗಾರಿ; ವಾಹನ ಸವಾರರಿಗೆ ಪ್ರಮುಖ ಮಾಹಿತಿ
ಬೆಂಗಳೂರು, ಮೇ 14: ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯ ನಿರ್ವಹಣೆ ಹೊಣೆ ಹೊತ್ತಿರುವ ಸಂಚಾರಿ ಪೊಲೀಸರು ಹೆಬ್ಬಾಳ ಫ್ಲೈ ಓವರ್ ಕಡೆ ಸಾಗುವ ವಾಹನ ಸವಾರರಿಗೆ ಮಾಹಿತಿಯೊಂದನ್ನು ನೀಡಿದ್ದಾರೆ. ಜನರು ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಹೆಬ್ಬಾಳ ಮೇಲುಸೇತುವೆಗೆ ಎರಡು ಹೊಸ ಟ್ರ್ಯಾಕ್ಗಳನ್ನು ಸೇರಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕಾಮಗಾರಿಯನ್ನು ಆರಂಭಿಸಿರುವುದರಿಂದ ಈಗಾಗಲೇ ದಿನಾಂಕ 17/04/2024ರಿಂದ ಕೆ. ಆರ್. ಪುರ ಲೂಪ್ ಸೇರುವ ಟ್ರ್ಯಾಕ್ನಲ್ಲಿ ದ್ವಿಚಕ್ರ ವಾಹನಗಳನ್ನು ಹೊರತುಪಡಿಸಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿತ್ತು ಎಂದು ಹೇಳಿದ್ದಾರೆ.

ದಿನಾಂಕ 14/05/2024ರಿಂದ ಕೆ. ಆರ್. ಪುರಂ ಕಡೆಯಿಂದ ಬರುವ ಲೂಪ್ ಹೆಬ್ಬಾಳ ಫ್ಲೈ ಓವರ್ನ ಮುಖ್ಯ ಟ್ರ್ಯಾಕ್ಗೆ ಸೇರಿಸುವ ಎರಡು ಲಿಂಕ್ ಸ್ಪ್ಯಾನ್ಗಳನ್ನು ತೆಗೆದುಹಾಕಲಾಗುತ್ತಿರುವುದರಿಂದ ramp ಮತ್ತು ಮುಖ್ಯ ಟ್ರ್ಯಾಕ್ಗೆ ಸಂಪರ್ಕ ಇಲ್ಲದಾಗುವುದರಿಂದ ಯಾವುದೇ ರೀತಿಯ ವಾಹನ ಸಂಚಾರವು ಸಾಧ್ಯವಿರದ ಹಿನ್ನಲೆಯಲ್ಲಿ, ಕಾಮಗಾರಿ ಮುಕ್ತಾಯವಾಗುವವರೆಗೆ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಸಂಚಾರ ವಿಭಾಗದಿಂದ ಈ ಮಾರ್ಪಾಡುಗಳನ್ನು ಮಾಡಲಾಗಿದೆ ಎಂದು ತಿಳಿಸಿದೆ.
ಸಂಚಾರ ನಿರ್ಬಂಧ, ಪರ್ಯಾಯ ವ್ಯವಸ್ಥೆ: ದಿನಾಂಕ 14/05/2024ರಿಂದ ಹೆಬ್ಬಾಳ ಫ್ಲೈಓವರ್ನ ಕೆ. ಆರ್. ಪುರಂ ramo ಅನ್ನು ಮುಚ್ಚಲಾಗುತ್ತಿರುವುದರಿಂದ ನಾಗವಾರ ಕಡೆಯಿಂದ ಹೆಬ್ಬಾಳ ಮೇಲುಸೇತುವೆ ಕಡೆಗೆ ಬರುವ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ಫ್ಲೈ ಓವರ್ ಮೇಲೆ ನಿರ್ಬಂಧಿಸಲಾಗಿದೆ.
ನಿರ್ಬಂಧಿಸಲಾದ ವಾಹನಗಳು ನಾಗವಾರ (ಔಟರ್ರಿಂಗ್ ರಸ್ತೆ) ಕಡೆಯಿಂದ ನಗರದ ಒಳಗೆ ಮೇಖ್ರಿ ಸರ್ಕಲ್ ಮುಖಾಂತರ ಸಂಚರಿಸುವ ವಾಹನಗಳು ಹೆಬ್ಬಾಳ ಸರ್ಕಲ್ನಲ್ಲಿ ಫೈ ಓವರ್ ಕೆಳಗಿನಿಂದ ಬಲ ತಿರುವು ಪಡೆದು ಕೊಡಿಗೇಹಳ್ಳಿ ಜಂಕ್ಷನ್ ಬಳಿ ಯೂ ಟರ್ನ್ ಪಡೆದು ಸರ್ವಿಸ್ ರಸ್ತೆಯಿಂದ ಹೆಬ್ಬಾಳ ಫೈಓವರ್ನ ramp ಮುಖೇನ ನಗರದ ಕಡೆಗೆ ಚಲಿಸಬಹುದಾಗಿರುತ್ತದೆ.
ಕೆ. ಆರ್. ಪುರಂ, ನಾಗವಾರ ಕಡೆಯಿಂದ ನಗರದ ಕಡೆಗೆ ಬರುವ ವಾಹನಗಳು ಐ.ಓ.ಸಿ.-ಮುಕುಂದ ಥಿಯೇಟರ್ ರಸ್ತೆ, ಲಿಂಗರಾಜಪುರ ಮೇಲುಸೇತುವೆ ಮಾರ್ಗ, ನಾಗವಾರ ಟ್ಯಾನರಿ ರಸ್ತೆ ಮಾರ್ಗವಾಗಿ ಸಂಚಾರ ನಡೆಸಬಹುದು.
ಹೆಗಡೆ ನಗರ-ಥಣಿಸಂದ್ರ ಕಡೆಯಿಂದ ಬರುವ ವಾಹನಗಳು ಜಿಕೆವಿಕೆ-ಜಕ್ಕೂರು ರಸ್ತೆ ಮೂಲಕ ನಗರ ಪ್ರವೇಶಿಸಬಹುದಾಗಿದೆ.
ಕೆ. ಆರ್. ಪುರಂ ಕಡೆಯಿಂದ ಹೆಬ್ಬಾಳ ಮಾರ್ಗವಾಗಿ ಯಶವಂತಪುರ ಕಡೆಗೆ ಚಲಿಸುವ ವಾಹನಗಳು ಹೆಬ್ಬಾಳ ಫ್ಲೈ ಓವರ್ ಕೆಳಗಡೆ ನೇರವಾಗಿ ಬಿ.ಇ.ಎಲ್. ಸರ್ಕಲ್ ತಲುಪಿ ಎಡತಿರುವು ಪಡೆದು ಸದಾಶಿವನಗರ ಜಂಕ್ಷನ್ನಲ್ಲಿ ಬಲತಿರುವು ಪಡೆದು ಐ.ಐ.ಎಸ್.ಸಿ. ಮುಖಾಂತರ ಚಲಿಸಬಹುದಾಗಿದೆ.
ಕೆ.ಆರ್.ಪುರಂ, ಹೆಣ್ಣೂರು, ಹೆಚ್.ಆರ್.ಬಿ.ಆರ್. ಲೇಔಟ್, ಕೆ.ಜಿ.ಹಳ್ಳಿ, ಬಾಣಸವಾಡಿ ಕಡೆಯಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆ ಸಂಚರಿಸುವ ವಾಹನಗಳು ಹೆಣ್ಣೂರು-ಬಾಗಲೂರು ರಸ್ತೆಯ ಮುಖಾಂತರ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪಬಹುದಾಗಿದೆ.
ಹೆಬ್ಬಾಳ ಮೇಲ್ಸೇತುವೆಗಾಗಿ ಎರಡು ಹೊಸ ಲೇನ್ಗಳನ್ನು ಬಿಡಿಎ ನಿರ್ಮಾಣ ಮಾಡುತ್ತಿದೆ. ಸಂಚಾರ ದಟ್ಟಣೆ ನಿವಾರಣೆ ಮಾಡಲು ಎರಡು ಹೊಸ ಲೇನ್ಗಳನ್ನು ಸೇರಿಸುವ ಪ್ರಸ್ತಾಪವನ್ನು ಬಿಡಿಎ ಮಾಡಿತ್ತು. ಬಳಿಕ ತಜ್ಞರ ಜೊತೆ ಚರ್ಚೆ ನಡೆಸಿ ಯೋಜನೆ ಅಂತಿಮಗೊಳಿಸಿ ಕಾಮಗಾರಿಯನ್ನು ಆರಂಭಿಸಲಾಗಿದೆ.
-
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications