Railway Alert: ಚನ್ನಸಂದ್ರ ನಿಲ್ದಾಣದಲ್ಲಿ ಕಾಮಗಾರಿ, ವಿವಿಧ ರೈಲುಗಳ ಮಾರ್ಗ ಬದಲಾವಣೆ, ಸಂಚಾರ ರದ್ದು
Bengaluru Train Alert: ಬೆಂಗಳೂರು ವಿಭಾಗದ ಚನ್ನಸಂದ್ರ ನಿಲ್ದಾಣದಲ್ಲಿ ಯಾರ್ಡ್ ರಿಮಾಡೆಲಿಂಗ್ ಕಾಮಗಾರಿಯನ್ನು ನೈಋತ್ಯ ರೈಲ್ವೆ (SWR) ಕೈಗೊಳ್ಳಲಿದೆ. ಈ ಸಂಬಂಧ ಮುಂದಿನ ಏಪ್ರಿಲ್ 15 ರಿಂದ ಮೇ 02 ರವರೆಗೆ ವಿವಿಧ ರೈಲುಗಳ ಸಂಚಾರದಲ್ಲಿ ಬದಲಾವಣೆ, ಕೆಲ ರೈಲುಗಳ ಭಾಗಶಃ ರದ್ದುಗೊಳಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮೆಮು ರೈಲುಗಳ ಸಂಚಾರ ರದ್ದು
ಕಾಮಗಾರಿ ನಡೆಯುವ ಸದರಿ ಅವಧಿಯಲ್ಲಿ ಕೆಎಸ್ಆರ್ ಬೆಂಗಳೂರು-ಕೋಲಾರ ಮೆಮು (66591) ರೈಲು, ಕೋಲಾರ-ಬಂಗಾರಪೇಟೆ ಮೆಮು (66593) ರೈಲು, ಬಂಗಾರಪೇಟೆ-ಕೋಲಾರ ಮೆಮು (66594) ರೈಲು, ಕೋಲಾರ-ಬೆಂಗಳೂರು ಕಂಟೋನ್ಮೆಂಟ್ ಮೆಮು (66592) ರೈಲುಗಳನ್ನು ಏಪ್ರಿಲ್ 29 ರಿಂದ ಮೇ 02 ಸಂಚಾರ ರದ್ದುಗೊಳಿಸಲಾಗಿದೆ.

ಮೇ 01 ರಂದು ಬೆಂಗಳೂರು ಸರ್ ಎಂ.ವಿಶ್ವೇಶ್ವರ ಟರ್ಮಿನಲ್ (ಎಸ್ಎಂವಿಟಿ) -ಬೀದರ್ ಎಕ್ಸ್ಪ್ರೆಸ್ ವಿಶೇಷ ರೈಲು (06539) ರೈಲು ಹಾಗೂ ಮೇ 02 ರಂದು ಬೀದರ್-ಎಸ್ಎಂಟಿ ಬೆಂಗಳೂರು ವಿಶೇಷ ಎಕ್ಸ್ಪ್ರೆಸ್ (06540) ರೈಲುಗಳು ರದ್ದಗೊಂಡಿವೆ. ಪ್ರಯಾಣಿಕರು ರದ್ದಾಗ ರೈಲುಗಳ ಮಾಹಿತಿ ಆಧಾರದಲ್ಲಿ ಸಂಚಾರಕ್ಕೆ ಪ್ಲ್ಯಾನ್ ಮಾಡಿಕೊಳ್ಳಬೇಕೆಂದು ಅಧಕಾರಿಗಳು ತಿಳಿಸಿದ್ದಾರೆ.
ಭಾಗಶಃ ರದ್ದಾದ ರೈಲುಗಳ ಪಟ್ಟಿ (ಏ.29 ಮೇ2)
* ಮುಂಬೈ ಸಿಎಸ್ಎಂಟಿ-ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್ ರೈಲು (11301) ಯಲಹಂಕ ಮತ್ತು ಕೆಎಸ್ಆರ್ ಬೆಂಗಳೂರು ನಡುವೆ ರದ್ದಾಗಲಿದೆ.
* ಕೆಎಸ್ಆರ್ ಬೆಂಗಳೂರು-ಮುಂಬೈ ಸಿಎಸ್ಎಂಟಿ ಎಕ್ಸ್ಪ್ರೆಸ್ ರೈಲು (11302) ಅದೇ ಅವಧಿಯಲ್ಲಿ ಯಲಹಂಕದಿಂದಲೇ ತನ್ನ ಪ್ರಯಾಣ ಆರಂಭಿಸಲಿದೆ.
* ಹುಬ್ಬಳ್ಳಿ-ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್ ರೈಲು (20687) ಯಶವಂತಪುರ ಮತ್ತು ಕೆಎಸ್ಆರ್ ಬೆಂಗಳೂರು ನಡುವೆ ಸಂಚಾರ ರದ್ದುಗೊಂಡಿದೆ.
* ಕೆಎಸ್ಆರ್ ಬೆಂಗಳೂರು-ಹುಬ್ಬಳ್ಳಿ ಎಕ್ಸ್ಪ್ರೆಸ್ ರೈಲು (20688) ಏಪ್ರಿಲ್ 30 ರಿಂದ ಮೇ 02 ರವರೆಗೆ ಯಶವಂತಪುರದಿಂದಲೇ ಸಂಚಾರ ಆರಂಭಿಸುತ್ತದೆ. ಭುವನೇಶ್ವರ-ಕೆಎಸ್ಆರ್ ಬೆಂಗಳೂರು ಪ್ರಶಾಂತಿ ಎಕ್ಸ್ಪ್ರೆಸ್ ರೈಲು (18463) ಏಪ್ರಿಲ್ 30 ಮತ್ತು ಮೇ 01 ರಂದು ಯಲಹಂಕ ಹಾಗೂ ಕೆಎಸ್ಆರ್ ಬೆಂಗಳೂರು ನಡುವೆ ಸಂಚರಿಸುವುದಿಲ್ಲ.
* ಕೆಎಸ್ಆರ್ ಬೆಂಗಳೂರು-ಭುವನೇಶ್ವರ ಪ್ರಶಾಂತಿ ಎಕ್ಸ್ಪ್ರೆಸ್ ರೈಲು (18464) ಮೇ 01 ಮತ್ತು 02 ರಂದು ಯಲಹಂಕದಿಂದಲೇ ಪ್ರಯಾಣ ಆರಂಭಿಸುತ್ತದೆ.
* ಮಾರ್ಗ ಬದಲಾವಣೆಯ ವಿಷಯದಲ್ಲಿ ಕೆಎಸ್ಆರ್ ಬೆಂಗಳೂರು-ನಾಂದೇಡ್ ಎಕ್ಸ್ಪ್ರೆಸ್ (16593) ಏಪ್ರಿಲ್ 15ರಿಂದ ಮೇ 02ರವರೆಗೆ ಯಶವಂತಪುರ ಮತ್ತು ಯಲಹಂಕ ಮಾರ್ಗವಾಗಿ ಸಂಚರಿಸಲಿದೆ. ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣದ ನಿಲುಗಡೆಯನ್ನು ರದ್ದುಗೊಳಿಸಲಾಗಿದೆ.
ಈ ರೈಲುಗಳ ಮಾರ್ಗ ಬದಲಾವಣೆ
ಏಪ್ರಿಲ್ 19 ಮತ್ತು 26 ರಂದು ಕೊಯಮತ್ತೂರು-ನಿಜಾಮುದ್ದೀನ್ ಎಕ್ಸ್ಪ್ರೆಸ್ ರೈಲು (12647) ಕೃಷ್ಣರಾಜಪುರಂ, ಎಸ್ಎಂವಿಟಿ ಬೆಂಗಳೂರು, ಯಶವಂತಪುರ, ಯಲಹಂಕ ಮತ್ತು ಧರ್ಮಾವರಂ ಮಾರ್ಗವಾಗಿ ಸಂಚಾರ ಮಾಡುತ್ತದೆ.
ಏಪ್ರಿಲ್ 29 -ಮೇ 02 ರವರೆಗೆ ಅದೇ ರೀತಿ ಕಾಚೆಗುಡ-ಅಶೋಕಪುರಂ ಎಕ್ಸ್ಪ್ರೆಸ್ (12785) ರೈಲು ಮತ್ತು ಅಶೋಕಪುರಂ-ಕಾಚೆಗುಡ ಎಕ್ಸ್ಪ್ರೆಸ್ (12786) ರೈಲಿನ ಮಾರ್ಗ ಬದಲಾವಣೆ ಆಗಿದೆ. ಈ ರೈಲುಗಳು ಬೆಂಗಳೂರು ಪೂರ್ವ ಹಾಗೂ ಕಂಟೋನ್ಮೆಂಟ್ ನಿಲ್ದಾಣಗಳಲ್ಲಿ ನಿಲುಗಡೆ ನೀಡುವುದಿಲ್ಲ. ಕೆಎಸ್ಆರ್ ಬೆಂಗಳೂರು-ನಾಂದೇಡ್ ಎಕ್ಸ್ಪ್ರೆಸ್ ರೈಲಿನ(16593) ವೇಳಾಪಟ್ಟಿಯನ್ನು ಏಪ್ರಿಲ್ 15 ರಿಂದ ಮೇ 02 ರವರೆಗೆ 75 ನಿಮಿಷಗಳ ಕಾಲ ಮುಂದೂಡಲಾಗಿದೆ. ಈ ಮೇಲಿನ ಎಲ್ಲ ಅಡಚಣೆಗೆ ಪ್ರಯಾಣಿಕರು ಸಹಕರಿಸಬೇಕು. ಜೊತೆಗೆ ವೇಳಾಪಟ್ಟಿ, ಮಾರ್ಗ ಬದಲಾವಣೆ, ಸಮಯ ನೋಡಿಕೊಂಡು ಪ್ರಯಾಣಕ್ಕೆ ಪ್ಲ್ಯಾನ್ ಮಾಡಿಕೊಳ್ಳುವಂತೆ ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ: ಏ.5ರಂದು ಈ ಭಾಗದಲ್ಲಿ ರೈಲು ಸಂಚಾರ ಸ್ಥಗಿತ, ಕಾರಣವೇನು? -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications