Tunnel Road: ಟನಲ್ ರಸ್ತೆಯಿಂದ ಬೆಂಗಳೂರಿಗೆ ಈ ಅಪಾಯ: ತೇಜಸ್ವಿ ಸೂರ್ಯ ಎಚ್ಚರಿಕೆ
ಬೆಂಗಳೂರಿಗೆ ಟನಲ್ ರಸ್ತೆ ಬೇಡವೇ ಬೇಡ ಎಂದು ತೇಜಸ್ವಿ ಸೂರ್ಯ ವಿರೋಧಿಸುತ್ತಿದ್ದಾರೆ. ಇಂದು ರಾಜ್ಯ ಸರ್ಕಾರದ ಉದ್ದೇಶಿತ ಟನಲ್ ರೋಡ್ ಯೋಜನೆಯ ವಿರುದ್ಧ ಹಾಗೂ ಯೋಜನೆಗಾಗಿ ಲಾಲ್ಬಾಗ್ನಲ್ಲಿ ಭೂಸ್ವಾಧೀನ ಮಾಡಿಕೊಳ್ಳುವುದರ ವಿರುದ್ಧ ಇಂದು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಟನಲ್ ರಸ್ತೆ ನಿರ್ಮಾಣವಾದರೆ ಬೆಂಗಳೂರಿಗೆ ಈ ಅಪಾಯವಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಸುರಂಗ ರಸ್ತೆ ಯೋಜನೆ ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗಳಿಗೆ ಪರಿಹಾರವಲ್ಲ. ಸುರಂಗ ರಸ್ತೆಗಳು ನಗರಗಳಲ್ಲಿನ ವಾಹನ ದಟ್ಟಣೆಯನ್ನು ಕಡಿಮೆ ಮಾಡುವುದಿಲ್ಲ. ಬದಲಾಗಿ ಖಾಸಗಿ ಸಾರಿಗೆಯ ಮೇಲೆ ಹೆಚ್ಚು ಅವಲಂಬನೆ ಮತ್ತು ಸಾರ್ವಜನಿಕ ಸಾರಿಗೆಯ ಕೊರತೆ ಎಂಬ ಮೂಲ ಕಾರಣವನ್ನು ಪರಿಹರಿಸದೆ, ಕೇವಲ ಒಂದು ಜಂಕ್ಷನ್ನಿಂದ ಇನ್ನೊಂದಕ್ಕೆ ಸಂಚಾರವನ್ನು ಸ್ಥಳಾಂತರಿಸುತ್ತವೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

ಅಲ್ಲದೆ ಈ ಯೋಜನೆಯು ಸೂಕ್ತವಾದ ಪರಿಸರ ಅಥವಾ ಭೂವೈಜ್ಞಾನಿಕ ಪರಿಣಾಮಗಳ ಅಧ್ಯಯನವಿಲ್ಲದೆ ಮುಂದುವರೆದಿರುವುದರಿಂದ, ಲಾಲ್ಬಾಗ್ನ ಪರಿಸರ ಮತ್ತು 3,000 ದಶಲಕ್ಷ ವರ್ಷಗಳಷ್ಟು ಹಳೆಯದಾದ ಪೆನಿನ್ಸುಲಾರ್ ಬಂಡೆ ಎಂಬ ರಾಷ್ಟ್ರೀಯ ಭೂವೈಜ್ಞಾನಿಕ ಸ್ಮಾರಕಕ್ಕೆ ಶಾಶ್ವತ ಹಾನಿ ಉಂಟುಮಾಡುವ ಸಾಧ್ಯತೆಯೂ ಇದೆ ಎಂದು ಎಚ್ಚರಿಸಿದ್ದಾರೆ. ಬೆಂಗಳೂರಿಗೆ ದೂರದೃಷ್ಟಿಯ ಮೂಲಸೌಕರ್ಯ ಬೇಕೇ ಹೊರತು, ಅದರ ಪರಂಪರೆ ಮತ್ತು ಪರಿಸರವನ್ನು ನಾಶಪಡಿಸುವ ಇಂತಹ ಅವಿವೇಕದ ಯೋಜನೆಗಳಲ್ಲ ಎಂದು ಖಂಡಿಸಿದ್ದಾರೆ.
ಈ ಯೋಜನೆಗೆ ಸಾವಿರಾರು ಕೋಟಿಗಳನ್ನು ಖರ್ಚು ಮಾಡುವ ಬದಲು, ರಾಜ್ಯ ಸರ್ಕಾರವು ಸುಸ್ಥಿರವಾದ, ದೀರ್ಘಕಾಲೀನ ಸಾರಿಗೆ ಪರಿಹಾರಗಳಲ್ಲಿ ಹೂಡಿಕೆ ಮಾಡಿ. ಈ ಮೂಲಕ ಎಲ್ಲರಿಗೂ ಸುಲಭವಾಗಿ ಮತ್ತು ಸಮರ್ಥವಾಗಿ ಲಭ್ಯವಿರುವ ಸಾರ್ವಜನಿಕ ಸಂಚಾರಕ್ಕಾಗಿ ಮೆಟ್ರೋ, ಉಪನಗರ ರೈಲು ಮತ್ತು ಬಿಎಂಟಿಸಿ ಜಾಲಗಳನ್ನು ಬಲಪಡಿಸಬೇಕು ಎಂದು ಸಲಹೆ ನೀಡಿದ್ದಾರೆ.

ಸಹಿ ಸಂಗ್ರಹ ಅಭಿಯಾನ
ಇಂದು ಲಾಲ್ಬಾಗ್ನಲ್ಲಿ ಟನಲ್ ರೋಡ್ ವಿರೋಧಿಸಿ ಸಹಿ ಸಂಗ್ರಹ ಅಭಿಯಾನ ಕೂಡ ನಡೆಯಿತು. ಈ ವೇಳೆ ನೂರಾರು ಮಂದಿ ಟನಲ್ ರೋಡ್ ಬೇಡ ಎಂದು ಸಹಿ ಹಾಕಿದ್ದಾರೆ. ನಗರವನ್ನು ನಾಗರಿಕರಿಗಾಗಿ ನಿರ್ಮಿಸಿ, ಗುತ್ತಿಗೆದಾರರಿಗಾಗಿ ಅಲ್ಲ ಎಂದು ಜನರು ಮಾತನಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಈಗಲಾದರೂ ಅವರ ಮಾತನ್ನು ಕೇಳಿ ಈ ವಿನಾಶಕಾರಿ ಯೋಜನೆಯನ್ನು ಕೈಬಿಡುತ್ತದೆಯೇ? ಎಂದು ತೇಜಸ್ವಿ ಸೂರ್ಯ ಕೇಳಿದ್ದಾರೆ.
ಭ್ರಷ್ಟ ಕಾಂಗ್ರೆಸ್ ಸರ್ಕಾರ ನಿರ್ಮಿಸಲು ಹೊರಟಿರುವ ನಿಷ್ಪ್ರಯೋಜಕ, ಅಪಾಯಕಾರಿ ಸುರಂಗ ರಸ್ತೆ ಯೋಜನೆಯನ್ನ ನಿಲ್ಲಿಸುವಂತೆ ಒತ್ತಾಯಿಸಿದ್ದೇವೆ. ಲಾಲ್ಬಾಗ್ ಪೂರ್ವದ್ವಾರದ ಡಬಲ್ ರೋಡ್ ಬಳಿ ಪ್ರತಿಭಟನೆ ಹಾಗೂ ಸಹಿ ಸಂಗ್ರಹ ಅಭಿಯಾನ ನಡೆಯಿತು. ಬೆಂಗಳೂರು ರಕ್ಷಿಸಿ-ಟನಲ್ ರೋಡ್ ನಿಲ್ಲಿಸಿ ಎಂದು ಆರ್.ಅಶೋಕ್ ಕರೆ ನೀಡಿದ್ದಾರೆ.
-
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications