ಬೆಂಗಳೂರು ಟರ್ಫ್ ಕ್ಲಬ್ ಕಾರ್ಮಿಕರ ಪ್ರತಿಭಟನೆ
ಬೆಂಗಳೂರು, ಜನವರಿ 11: ವಾರಕ್ಕೆ ಕೇವಲ ಎರಡು ದಿನಗಳಷ್ಟೇ ಕೆಲಸ ನೀಡುವುದಾಗಿ ಹೇಳಿದ್ದ ಬೆಂಗಳೂರು ಟರ್ಫ್ ಕ್ಲಬ್ ಸಿಇಓ ವಿರುದ್ಧ ಟರ್ಫ್ ಕ್ಲಬ್ ಎದುರು ಕಾರ್ಮಿಕರು ಗುರುವಾರ ಪ್ರತಿಭಟನೆ ನಡೆಸಿದರು.
ಕಳೆದ ನಾಲ್ಕು ತಿಂಗಳಿಂದ ಬೆಂಗಳೂರು ಟರ್ಫ್ ಕ್ಲಬ್ ಮುಚ್ಚಲಾಗಿತ್ತು. ಎರಡು ದಿನಗಳ ಹಿಂದೆಯಷ್ಟೇ ಟರ್ಫ್ ಕ್ಲಬ್ ತೆರೆಯಲಾಗಿತ್ತು. ಸಾವಿರಕ್ಕಿಂತ ಹೆಚ್ಚು ಕಾರ್ಮಿಕರ ಸ್ಥಿತಿ ಅತಂತ್ರವಾಗಿತ್ತು. ಸರ್ಕಾರವು ಪರವಾನಗಿಯನ್ನು ರದ್ದುಗೊಳಿಸಿದ್ದರು. ಕಳೆದ ನಾಲ್ಕು ತಿಂಗಳಿಂದ ಕಾರ್ಮಿಕರಿಗೆ ಸಂಬಳವಿಲ್ಲದೇ ಪರದಾಡಿದ್ದರು. ಇದೀಗ ವಾರಕ್ಕೆರಡು ದಿನ ಕೆಲಸ ಮಾಡಿ ಎಂದು ಸಿಇಓ ಶಿವಪ್ರಸಾದ್ ಹೇಳಿರುವ ಹಿನ್ನೆಲೆಯಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು.
ನ್ಯಾಯಾಲಯದ ಆದೇಶದಂತೆ ಸೆಪ್ಟೆಂಬರ್ 1ರಿಂದ ಸ್ಥಗಿತಗೊಂಡಿದ್ದ ಕ್ಲಬ್ ಜನವರಿ 5ರಂದು ಪ್ರಾರಂಭ ಆಗಿತ್ತು, ವಾರದಲ್ಲಿ ಒಂದು ದಿನ ಕೆಲಸ ನೀಡಿದರೆ ಮತ್ತೊಂದು ರಜೆ ನೀಡುತ್ತಿದ್ದರು. ಈ ರೀತಿಯ ಬ್ಯಾಚ್ ಕೆಲಸ ಬೇಡವೆಂದು ಬಿಟಿಪಿ ಬಳಿ ಕಾರ್ಮಿಕರ ಪ್ರತಿಭಟನೆ ನಡೆಸಿದರು. ಬಿಸಿಪಿ ಸಿಇಒ ಶಿವಪ್ರಸಾದ್ ಕ್ರಮದ ವಿರುದ್ಧ ಕಾರ್ಮಿಕರ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನ ಹೃದಯ ಭಾಗದಲ್ಲಿರುವ ರೇಸ್ ಕೋರ್ಸ್ ನಲ್ಲಿ ರೇಸ್ ಡೇ ಇರುವ ದಿನಗಳಲ್ಲಿ ಸಂಚಾರ ದಟ್ಟಣೆಯಿಂದ ಭಾರಿ ತೊಂದರೆಯುಂಟಾಗುತ್ತದೆ. ಆದ್ದರಿಂದ ಟರ್ಫ್ ಕ್ಲಬ್ ಸ್ಥಳಾಂತರ ಸೂಕ್ತ ಎಂಬ ನಿರ್ಣಯವನ್ನು ರಾಜ್ಯ ಸರ್ಕಾರ ಕೈಗೊಂಡಿತ್ತು. ಇದಕ್ಕೆ ಹೈಕೋರ್ಟ್ ಕೂಡ ಹಸಿರು ನಿಶಾನೆ ತೋರಿಸಿತ್ತು. ದೊಡ್ಡಜಾಲದ ಅಮಾನಿಕೆರೆಗೆ ಸ್ಥಳಾಂತರಿಸಲು ಸೂಚಿಸಿತ್ತು.
ಸರ್ಕಾರವು ಸಮಿತಿಯೊಂದು ರಚಿಸಿ ಅನುಮತಿ ನೀಡುವಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಸರ್ಕಾರ ಹಾಗೂ ಬೆಂಗಳೂರು ಟರ್ಫ್ ಕ್ಲಬ್ ಸಮಾಲೋಚಿಸಿ ಷರತ್ತು ವಿಧಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಟರ್ಫ್ ಕ್ಲಬ್ ಪುನರಾರಂಭಿಸಲಾಗಿದೆ.
-
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ












Click it and Unblock the Notifications