Get Updates
Get notified of breaking news, exclusive insights, and must-see stories!

ಬೆಂಗಳೂರಿನ ಮಾರತ್ತಹಳ್ಳಿ ಬಳಿಯ ಮುನ್ನೆಕೊಲ್ಲಾಲ ರೈಲ್ವೆ ಮೇಲ್ಸೇತುವೆ ಅಂಡರ್‌ಪಾಸ್ ಸಿದ್ಧ- ಯಾರಿಗೆ ಅನುಕೂಲ? ವರದಿ ಇಲ್ಲಿದೆ

ಬೆಂಗಳೂರಿನ ಮಾರತ್ತಹಳ್ಳಿ ಬಳಿಯ ಮುನ್ನೆಕೊಲ್ಲಾಲ ರೈಲ್ವೆ ಮೇಲ್ಸೇತುವೆ ಅಂಡರ್‌ಪಾಸ್ ಸಿದ್ಧವಾಗಿದೆ. ಇದು ಯಾವೆಲ್ಲ ಪ್ರಯಾಣಿಕರಿಗೆ ಅನೂಕಲವಾಗಲಿದೆ. ಎಷ್ಟು ಪ್ರಯಾಣದ ಸಮಯ ಕಡಿತಗೊಳ್ಳಲಿದೆ ಎಂಬುದನ್ನು ತಿಳಿಯಲು ಈ ವರದಿ ಓದಿ

ಬೆಂಗಳೂರು, ಫೆಬ್ರವರಿ 04: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವತಿಯಿಂದ ಕೇವಲ 58 ದಿನಗಳಲ್ಲಿ ಬೆಂಗಳೂರಿನ ಮಾರತ್ತಹಳ್ಳಿ ಬಳಿ ಇರುವ ಮುನ್ನೆಕೊಲ್ಲಾಲ ರೈಲ್ವೆ ಮೇಲ್ಸೇತುವೆಯ ಪುಷ್ ಬಾಕ್ಸ್ ಅಂಡರ್‌ಪಾಸ್ ಕಾಮಗಾರಿ ಪೂರ್ಣಗೊಂಡಿದೆ. ಈ ಕೆಳಸೇತುವೆಯು ಹಳೆಯ ವಿಮಾನ ನಿಲ್ದಾಣ ರಸ್ತೆಯಿಂದ ಹೊರವರ್ತುಲ ರಸ್ತೆ (ORR) ಮೂಲಕ ಸರ್ಜಾಪುರ ರಸ್ತೆಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ಎರಡು ತಿಂಗಳೊಳಗೆ ಪ್ರಿಫ್ಯಾಬ್ರಿಕೇಟೆಡ್ ಪುಶ್ ಬಾಕ್ಸ್ ಅಂಡರ್‌ಪಾಸ್‌ನಲ್ಲಿ ಇಷ್ಟು ವೇಗದ ಗತಿಯ ಕೆಲಸಕ್ಕಾಗಿ, ಬಿಬಿಎಂಪಿ ಸಾಕಷ್ಟು ಪ್ರಶಂಸೆಯನ್ನು ಗಳಿಸುತ್ತಿದೆ. 7.7 ಮೀಟರ್ ಅಗಲ ಮತ್ತು 4.4 ಮೀಟರ್ ಎತ್ತರದ ಈ ಸೌಲಭ್ಯವನ್ನು ಬುಧವಾರ ಸಾರ್ವಜನಿಕರಿಗೆ ಮುಕ್ತಗೊಳಿಸಲಾಯಿತು.

ಇದುವರೆಗೆ ಸರ್ಜಾಪುರಕ್ಕೆ ತೆರಳುವ ಜನರು ಕುಂದನಹಳ್ಳಿಯವರೆಗೆ 2.5 ಕಿ.ಮೀ ದೂರದಲ್ಲಿ ಯು-ಟರ್ನ್ ಮಾಡಿ ಹೊರ ವರ್ತುಲ ರಸ್ತೆಗೆ ಪ್ರವೇಶಿಸಬೇಕಾಗಿತ್ತು ಆದರೆ ಪುಶ್ ಬಾಕ್ಸ್ ಅಂಡರ್‌ಪಾಸ್ ತೆರೆಯುವ ಮೂಲಕ ವಾಹನಗಳು ಯು-ಟರ್ನ್ ತೆಗೆದುಕೊಳ್ಳಬಹುದು.

Bengaluru: Underpass at Munnekolala railway overbridge near Marathahalli ready

ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ 24 ಕೋಟಿ ರೂ.ವೆಚ್ಚದ ರೈಲ್ವೆ ಮೇಲ್ಸೇತುವೆ ಯೋಜನೆಯನ್ನು ಪೂರ್ಣಗೊಳಿಸಲು ಸುಮಾರು 10 ತಿಂಗಳುಗಳನ್ನು ತೆಗೆದುಕೊಂಡರೆ, ಬಿಬಿಎಂಪಿ ಪುಶ್ ಬಾಕ್ಸ್ ಅಂಡರ್‌ಪಾಸ್‌ಗೆ ಮಾತ್ರ ಆರು ಕೋಟಿ ರೂಗಳನ್ನು ತೆಗೆದುಕೊಂಡಿದೆ.

ಈ ಕೆಳಸೇತುವೆಯಿಂದ ಪ್ರಯಾಣದ ಅವಧಿ ಶೇ.60-70ರಷ್ಟು ಕಡಿತಗೊಳ್ಳಲಿದ್ದು, ಮಾರತ್ತಹಳ್ಳಿಯಿಂದ ಕಾಡುಬೀಸನಹಳ್ಳಿಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ಯೋಜನೆಯಲ್ಲಿ ಕೆಲಸ ಮಾಡಿದ ಎಂಜಿನಿಯರ್ ಶಿವಶಂಕರ್ ಹೇಳಿದರು. ಅಲ್ಲದೇ ಸ್ಥಳೀಯ ಶಾಸಕರ ಸೂಚನೆ ಮೇರೆಗೆ ಬಿಬಿಎಂಪಿಯಿಂದ ದಾಖಲೆ ಸಮಯದಲ್ಲಿ ಕಾಮಗಾರಿ ನಡೆದಿದೆ ಎಂದರು.

Bengaluru: Underpass at Munnekolala railway overbridge near Marathahalli ready

ಹೆಚ್ಚುವರಿಯಾಗಿ, ಪ್ರಯಾಣಿಕರು ಸಹ ಅಂಡರ್‌ಪಾಸ್ ತೆರೆಯುವ ಬಗ್ಗೆ ಉತ್ಸುಕರಾಗಿದ್ದಾರೆ ಆದರೆ ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಕಾರಣದಿಂದಾಗಿ ಕಾಮಗಾರಿಯು ತ್ವರಿತ ಗತಿಯಲ್ಲಿ ಪೂರ್ಣಗೊಂಡಿದೆ ಎಂದು ಅವರಲ್ಲಿ ಒಬ್ಬರು 'ಟೈಮ್ಸ್‌ ಆಫ್‌ ಇಂಡಿಯಾ'ಗೆ ತಿಳಿಸಿದ್ದಾರೆ.

ದಿನನಿತ್ಯದ ಪ್ರಯಾಣಿಕರಾದ ಮುರಳಿ ಎಸ್, 'ಅಂಡರ್‌ಪಾಸ್‌ನ ಕಾಮಗಾರಿ ನಡೆಯುತ್ತಿರುವಾಗ, ವಾಹನಗಳು ಕೆಲವೊಮ್ಮೆ 3 ಕಿ.ಮೀ ವರೆಗೆ ಸಾಲುಗಟ್ಟಿ ನಿಲ್ಲುವ ಮೂಲಕ ಭಾರಿ ಟ್ರಾಫಿಕ್ ದಟ್ಟಣೆ ಉಂಟಾಗುತ್ತಿತ್ತು ಎಂದು ಹೇಳಿದ್ದಾರೆ. ಮುನ್ನೆಕೊಲ್ಲಾಲ ಅಂಡರ್‌ಪಾಸ್‌ ತೆರೆಯುವುದರೊಂದಿಗೆ ಸರ್ಜಾಪುರಕ್ಕೆ ಪ್ರಯಾಣಿಸುವ ಸಮಯ ಗಣನೀಯವಾಗಿ ಕಡಿಮೆಯಾಗಲಿದೆ ಎಂಬ ಕಾರಣಕ್ಕೆ ನೋವು ತಕ್ಕದ್ದಾಗಿದೆ ಎಂದರು.

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಕಾರಣ ಕಾಮಗಾರಿಯನ್ನು ತ್ವರಿತವಾಗಿ ನಡೆಸಲಾಗಿದೆ ಎಂದು ಮತ್ತೊಬ್ಬ ವಾಹನ ಚಾಲಕ ಹೇಳಿದರು. ಇಲ್ಲವಾದಲ್ಲಿ ಅಧಿಕಾರಿಗಳು ಯಾವುದೇ ಕಾಮಗಾರಿಯನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಆಸಕ್ತಿ ತೋರುತ್ತಿಲ್ಲ ಎಂದು ದೂರಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+