ಸೆಂಟ್ರಲ್ ಕಾಲೇಜು ಬಿಡದೇ ಬೆಂಗಳೂರು ವಿಶ್ವವಿದ್ಯಾಲಯ ಹಠ
ಬೆಂಗಳೂರು, ಜು.4: ಸೆಂಟ್ರಲ್ ಕಾಲೇಜು ಆವರಣವನ್ನು ಬಿಡಲು ಬೆಂಗಳೂರು ವಿವಿಗೆ ಯಾಕೋ ಇಷ್ಟವಿದ್ದಂತಿಲ್ಲ, ಈ ಸಾಲಿನಿಂದ ಸ್ನಾತಕೋತ್ತರ ತರಗತಿಗಳನ್ನು ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಮುಂದಾಗಿದ್ದು ಜಾಗದ ಕೊರತೆ ಎದುರಾಗಿದೆ.
ಬೆಂಗಳೂರು ವಿಶ್ವವಿದ್ಯಾಲಯ ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ಕಟ್ಟಡಗಳನ್ನು ಸಂಪೂರ್ಣವಾಗಿ ಬಿಟ್ಟುಕೊಡದ ಕಾರಣ ಕೊಠಡಿಗಳ ಸಮಸ್ಯೆ ಎದುರಾಗಿದೆ.
ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ 2018-19ನೇ ಸಾಲಿನಿಂದ ಸ್ನಾತಕೋತತ್ರ ತರಗತಿಗಳನ್ನು ಆರಂಭಿಸಲು ನಿರ್ಧರಿಸಿದ್ದು ಅರ್ಜಿಗಳನ್ನು ಆಹ್ವಾನಿಸಿದೆ. ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ಮುಖ್ಯ ಕಟ್ಟಡದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಕೇಂದ್ರ ಕಚೇರಿ ಕಾರ್ಯ ನಿರ್ವಹಿಸುತ್ತಿದ್ದು, ಉಳಿದ ಕಟ್ಟಡಗಳಲ್ಲಿ ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಸೇರಿದ ಸ್ನಾತಕೋತ್ತರ ತರಗತಿಗಳು ನಡೆಯುತ್ತಿದೆ. ಇದರಿಂದಾಗಿ ಹೊಸ ಸ್ನಾತಕೋತ್ತರ ವಿಭಾಗಗಳ ಪ್ರಾರಂಭಕ್ಕೆ ಕೊಠಡಿಗಳ ಕೊರತೆ ಉಂಟಾಗಿದೆ.

ನಿಜವಾದ ಸಮಸ್ಯೆ ಏನು?
ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯವು ಈ ಸಾಲಿನಿಂದ ಒಟ್ಟು 16 ಸ್ನಾತಕೋತ್ತರ ವಿಭಾಗಗಳನ್ನು ಪ್ರಾರಂಭಿಸಲು ಉದ್ದೇಶಿಸಿದೆ. ಈಗಾಗಲೇ ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ವಿಶ್ವವಿದಯಾಲಯದ 8 ಸ್ನಾತಕೋತ್ತರ ವಿಭಾಗಗಳು ಕಾರ್ಯ ನಿರ್ವಹಿಸುತ್ತಿವೆ. ಗಣಿತ, ರಸಾಯನಶಾಸ್ತ್ರ, ಜೀವ ಶಾಸ್ತ್ರ, ಅಪೆರೆಲ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್ ತರಗತಿಗಳು ನಡೆಯುತ್ತಿದೆ.

ಸರ್ಕಾರದ ಆದೇಶದಲ್ಲೇನಿದೆ
ಸರ್ಕಾರದ ಆದೇಶದ ಪ್ರಕಾರ, ಸೆಂಟ್ರಲ್ ಕಾಲೇಜು ಆವರಣ ಸಂಪೂರ್ಣವಾಗಿ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಸೇರಬೇಕು. ವಿಶ್ವವಿದ್ಯಾಲಯವು ತ್ರಿಭಜನೆಗೊಂಡ ನಂತರ ಬೆಂಗಳೂರು ವಿಶ್ವವಿದ್ಯಾಲಯ ಎಲ್ಲ ವಿಭಾಗಗಳನ್ನು ಜ್ಞಾನಭಾರತಿ ಆವರಣಕ್ಕೆ ವರ್ಗಾವೆ ಮಾಡಿಲ್ಲ, ಜತೆಗೆ ಬೆಂಗಳೂರು ಕೇಂದ್ರ ವಿವಿ ವ್ಯಾಪ್ತಿಗೆ ಸೇರಿದ ಹಲವು ಕಟ್ಟಡಗಳನ್ನು ಐಸಿಎಚ್ಆರ್. ಯುಜಿಸಿ, ಇತರೆ ಸಂಸ್ಥೆಗಳಿಗೆ ನೀಡಲಾಗಿದೆ.

ಜೂನ್ 15ರ ಗಡುವು ಅಂತ್ಯಗೊಂಡಿದೆ
ತರಗತಿಗಳನ್ನು ಸ್ಥಳಾಂತರ ಮಾಡುವಂತೆ ಹಲವು ಸಭೆಗಳನ್ನು ನಡೆಸಲಾಗಿದೆ. ಜೂ.15ರ ಒಳಗೆ ತರಗತಿಗಳನ್ನು ಸ್ಥಳಾಂತರ ಮಾಡುವುದಾಗಿ ಬೆಂಗಳೂರು ವಿಶ್ವವಿದ್ಯಾಲಯ ತಿಳಿಸಿತ್ತು. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ.

ಕೇಂದ್ರ ವಿವಿಗೆ ಸ್ನಾತಕೋತ್ತರ ತರಗತಿ ಆರಂಭಿಸಲು ಜಾಗವೇ ಇಲ್ಲ
ಇದೇ ಶೈಕ್ಷಣಿಕ ವರ್ಷದಲ್ಲಿ ಹೊಸದಾಗಿ ಕಲಾ ವಿಭಾಗದ 8 ಸ್ನಾತಕೋತ್ತರ ಕೋರ್ಸ್ಗಳನ್ನು ಆರಂಭಿಸಲು ಯೋಚಿಸಿತ್ತು, ಇವುಗಳಿಗೆ ಕಟ್ಟಡ ಸೇರಿದಂತೆ ಅಗತ್ಯ ಮೂಲಸೌಕರ್ಯಗಳ ಕೊರತೆ ಎದುರಾಗಿದೆ. ಜ್ಞಾನ ಭಾರತಿಯಲ್ಲಿ ಸಾಕಷ್ಟು ಸ್ಥಳಾವಕಾಶವಿದ್ದರೂ ಬೆಂಗಳೂರು ವಿವಿ ಸೆಂಟ್ರಲ್ ಕಾಲೇಜು ಆವರಣದಲ್ಲಿ ನಡೆಯುತ್ತಿರುವ ಸ್ನಾತಕೋತ್ತರ ಕೇಂದ್ರವನ್ನು ಸ್ಥಳಾಂತರ ಮಾಡುತ್ತಿಲ್ಲ ಎಂದು ದೂರಿದ್ದಾರೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications