ಬೆಂಗಳೂರು ವಿಶ್ವವಿದ್ಯಾಲಯ ವಿಭಜನೆ: ಆಗಸ್ಟ್ ನಿಂದ ಹೊಸ ವಿವಿಗಳ ಕಾರ್ಯಾರಂಭ
ಕಳೆದ ವರ್ಷ ತೀವ್ರ ವಿವಾದವೆಬ್ಬಿಸಿದ್ದ ಬೆಂಗಳೂರು ವಿಶ್ವವಿದ್ಯಾಲಯ ವಿಭಜನೆ ಕಾಲ ಸನ್ನಿಹಿತ. ಮೂರು ವಿಭಾಗಗಳಾಗಿ ಬೆಂಗಳೂರು ವಿವಿ ವಿಂಗಡಣೆ. ಪ್ರತಿ ವಿಭಾಗಗಕ್ಕೂ ಪ್ರತ್ಯೇಕ ವಿವಿ ಸ್ಥಾನಮಾನ.
ಬೆಂಗಳೂರು, ಜೂನ್ 9: ಕಳೆದ ವರ್ಷ ಭಾರೀ ವಿವಾದಕ್ಕೀಡಾಗಿದ್ದ ಬೆಂಗಳೂರು ವಿಶ್ವವಿದ್ಯಾಲಯ ವಿಭಜನೆ ಈ ಶೈಕ್ಷಣಿಕ ವರ್ಷದಿಂದ ಸಾಕಾರಗೊಳ್ಳಲಿದೆ.
ವಿವಿಯು ಇನ್ನು ಉತ್ತರ ವಿಭಾಗ, ದಕ್ಷಿಣ ವಿಭಾಗ ಹಾಗೂ ಕೇಂದ್ರ ವಿಭಾಗಳೆಂಬ ಮೂರು ವಿಭಾಗಗಳಲ್ಲಿ ಅಸ್ತಿತ್ವಕ್ಕೆ ಬರಲಿದೆ. ಇದೇ ವರ್ಷ ಆಗಸ್ಟ್ ನಿಂದ ಈ ಹೊಸ ವಿವಿಗಳು ಅಸ್ತಿತ್ವಕ್ಕೆ ಬರಲಿದೆ.
[ಅರ್ಜುನ ಪ್ರಶಸ್ತಿಗೆ ಕನ್ನಡದ ಕುವರ ರೋಹನ್ ಬೋಪಣ್ಣ ಹೆಸರು ಶಿಫಾರಸು]

ಈಗಿರುವ ವಿಶ್ವ ವಿದ್ಯಾಲಯವು ದಕ್ಷಿಣ ವಿವಿ ಎಂದು ಪರಿಗಣಿಸಲ್ಪಡಲಿದ್ದು, ಇಲ್ಲಿನ ಆಡಳಿತ ಮಂಡಳಿಯು ಯಥಾವತ್ತಾಗಿ ಹಾಗೆಯೇ ಮುಂದುವರಿಯುತ್ತದೆ.
ಆದರೆ, ಉತ್ತರ ಹಾಗೂ ಕೇಂದ್ರ ವಿಶ್ವವಿದ್ಯಾಲಯಗಳಿಗೆ ಹೊಸ ಕುಲಪತಿ, ಕುಲಸಚಿವರು ಹಾಗೂ ಸಿಂಡಿಕೇಟ್ ಸದಸ್ಯರ ನೇಮಕಾತಿಗಳು ಪ್ರತ್ಯೇಕವಾಗಿ ಆಗಲಿವೆ. ಅದರ ಜತೆಯಲ್ಲೇ ಪ್ರತ್ಯೇಕವಾಗಿ ಲಾಂಛನ,
ದೇವನ ಹಳ್ಳಿಯ ಸಮೀಪ ಬೆಂಗಳೂರು ವಿವಿ ಉತ್ತರ ವಿಶ್ವವಿದ್ಯಾಲಯವು ಅಸ್ತಿತ್ವಕ್ಕೆ ಬರಲಿದ್ದು, ಇದಕ್ಕಾಗಿ ಅಲ್ಲಿ 115 ಎಕರೆ ಮಂಜೂರಾಗಿದೆ. ಸದ್ಯಕ್ಕೆ ಉತ್ತರ ವಿವಿಯು ಕೋಲಾರದಲ್ಲಿ ತಾತ್ಕಾಲಿಕವಾಗಿ ನೆಲೆಯೂರಲಿದ್ದು, ಕೇಂದ್ರ ವಿವಿಯು ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ತಾತ್ಕಾಲಿಕವಾಗಿ ಕಾರ್ಯ ನಿರ್ವಹಿಸಲಿದೆ. ತಮ್ಮ ಸ್ವಂತ ಕಟ್ಟಡಗಳು ನಿರ್ಮಾಣವಾದ ಮೇಲೆ ಅವು ಈ ಸ್ಥಾನಗಳನ್ನು ತೊರೆಯಲಿವೆ.
[ನಮ್ಮ ಮೆಟ್ರೋ ಹಂತ 1: ಉಪಯೋಗ ಪಡೆಯಲಿದ್ದಾರೆ 5 ಲಕ್ಷ ಜನ!]
ವಿಜಯನಗರ, ಬೊಮ್ಮನಹಳ್ಳಿ, ಪದ್ಮನಾಭನಗರ, ಆನೇಕಲ್, ಬೆಂಗಳೂರು ದಕ್ಷಿಣ, ಯಶವಂತಪುರ, ರಾಜರಾಜೇಶ್ವರಿ ನಗರ, ದಾಸರಹಳ್ಳಿ, ಮಹಾಲಕ್ಷ್ಮಿ ಬಡಾವಣೆ, ನೆಲಮಂಗಲ, ಗೋವಿಂದರಾಜ ನಗರ, ಮಾಗಡಿ, ರಾಮನಗರ, ಕನಕಪುರ ಮತ್ತು ಚನ್ನಪಟ್ಟಣ ವಿವಿಗಳು ಬೆಂಗಳೂರು ದಕ್ಷಿಣ ವಿ.ವಿ ವ್ಯಾಪ್ತಿಗೆ ಬರಲಿವೆ.
ಶಾಂತಿನಗರ, ಬ್ಯಾಟರಾಯನಪುರ, ಯಲಹಂಕ, ಮಲ್ಲೇಶ್ವರ, ಹೆಬ್ಬಾಳ, ಶಿವಾಜಿನಗರ, ಗಾಂಧಿನಗರ, ಚಿಕ್ಕಪೇಟೆ, ಬಸವನಗುಡಿ, ಬಿಟಿಎಂ ಬಡಾವಣೆ, ಜಯನಗರ, ರಾಜಾಜಿನಗರ ಪ್ರಾಂತ್ಯಗಳು ಬೆಂಗಳೂರು ಕೇಂದ್ರ ವಿ.ವಿ ಸುಪರ್ದಿಗೆ ಒಳಪಡಲಿವೆ.
ಇನ್ನು, ಕೋಲಾರ, ಮಾಲೂರು, ಕೆ.ಆರ್. ಪುರ, ಪುಲಿಕೇಶಿನಗರ, ಸರ್ವಜ್ಞನಗರ, ಸಿ.ವಿ. ರಾಮನ್ ನಗರ, ಮಹದೇವಪುರ, ಗೌರಿಬಿದನೂರು, ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಶಿಡ್ಲಘಟ್ಟ, ಚಿಂತಾಮಣಿ, ದೇವನಹಳ್ಳಿ, ಹೊಸಕೋಟೆ ಮತ್ತು ದೊಡ್ಡಬಳ್ಳಾಪುರ - ಇವು ಬೆಂಗಳೂರು ಉತ್ತರ ವಿ.ವಿ ವ್ಯಾಪ್ತಿಗೆ ಒಳಪಡಲಿವೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications