Get Updates
Get notified of breaking news, exclusive insights, and must-see stories!

Bengaluru Water: ಬೆಂಗಳೂರು ಕೆಸಿ, ಎಚ್‌ ಎನ್ ವ್ಯಾಲಿ ನೀರಿನಿಂದ ಅಪಾಯವಿಲ್ಲ: ಸಚಿವ ಭೋಸರಾಜು

ಬೆಂಗಳೂರು: ಕೆಸಿ ವ್ಯಾಲಿ, ಹೆಚ್‌ಎನ್‌ ವ್ಯಾಲಿ ಮತ್ತು ವೃಷಭಾವತಿ ವ್ಯಾಲಿಗಳ ಸಂಸ್ಕರಿಸಿದ ನೀರು ಅತ್ಯುತ್ತಮ ಗುಣಮಟ್ಟದ್ದಾಗಿದೆ ಎಂಬುದು ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿಗಳ ಸುದೀರ್ಘ ಸಂಶೋಧನೆಗಳಿಂದ ದೃಢಪಟ್ಟಿದೆ. ಹೀಗಾಗಿ ಈ ಬಗ್ಗೆ ಸಾರ್ವಜನಿಕರು ಯಾವುದೇ ರೀತಿಯ ಆತಂಕಪಡುವ ಅಗತ್ಯವಿಲ್ಲ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್.ಭೋಸರಾಜು ಅವರು ತಿಳಿಸಿದ್ದಾರೆ.

ಸಂಸ್ಕರಿಸಿದ ನೀರಿನಿಂದ ಬೆಂಗಳೂರು ಸುತ್ತಮುತ್ತಲಿನ ಬರ ಪೀಡಿತ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಪಡಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಕೆ.ಸಿ ವ್ಯಾಲಿ, ಹೆಚ್‌.ಎನ್‌ ವ್ಯಾಲಿ ಮತ್ತು ವೃಷಭಾವತಿ ವ್ಯಾಲಿ ಯೋಜನೆಗಳನ್ನು ಜಾರಿಗೊಳಿಸಿತ್ತು. ಈ ವ್ಯಾಲಿಗಳ ನೀರಿನ ಗುಣಮಟ್ಟಕ್ಕೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಪ್ರಮುಖ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

Bengaluru valley water safety

ಸಭೆ ಬಳಿಕ ಮಾತನಾಡಿರುವ ಸಚಿವರು, ಕೆಸಿ ವ್ಯಾಲಿ, ಹೆಚ್‌ಎನ್‌ ವ್ಯಾಲಿ ಮತ್ತು ವೃಷಭಾವತಿ ವ್ಯಾಲಿಗಳ ಸಂಸ್ಕರಿಸಿದ ನೀರಿನಿಂದ ಯಾವುದೇ ಅಪಾಯವಿಲ್ಲ. ಈ ನೀರು ಗುಣಮಟ್ಟದಿಂದ ಕುಡಿದೆ. ಈ ಬಗ್ಗೆ ಭಾರತೀಯ ವಿಜ್ಞಾನ ಸಂಸ್ಥೆಯ (IISc) ವಿಜ್ಞಾನಿಗಳ ಸುದೀರ್ಘ ಸಂಶೋಧನೆ ನಡೆಸಿದ್ದಾರೆ. ಅವರ ಸಂಶೋಧನೆಯಲ್ಲಿ ನೀರಿನ ಗುಣಮಟ್ಟದ ಖಚಿತತೆ ಲಭ್ಯವಾಗಿದೆ. ಆದ್ದರಿಂದ ನಾಗರಿಕರು ನೀರಿನ ಕುರಿತು ಚಿಂತೆ ಮಾಡುವಂತಿಲ್ಲ ಎಂದು ವಿವರಿಸಿದ್ದಾರೆ.

Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ
ಈ ಯೋಜನೆಗಳಿಂದ ಕೋಲಾರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ಗಣನೀಯವಾಗಿ ವೃದ್ಧಿಸಿದೆ. ಹಿಂದೆ 1,500 ರಿಂದ 1,800 ಅಡಿಗಳವರೆಗೂ ಕುಸಿದಿದ್ದ ಅಂತರ್ಜಲ, ಈ ಯೋಜನೆಗಳ ಪರಿಣಾಮದಿಂದ . 200 ರಿಂದ 300 ಅಡಿಗೆ ಲಭ್ಯವಾಗುತ್ತಿದೆ ಎಂದರು.

5 ಹಂತಗಳಲ್ಲಿ ನೀರು ಶುದ್ಧೀಕರಣ

ಸಂಸ್ಕರಿಸಿದ ನೀರಿನಿಂದ ಹೆಚ್ಚಾಗಿರುವ ಅಂತರ್ಜಲವು ಒಟ್ಟಾರೆ ಐದು ಹಂತಗಳಲ್ಲಿ ಶುದ್ಧೀಕರಣ ಆಗುವುದರಿಂದ ನೀರಿನ ಗುಣಮಟ್ಟ ಹೆಚ್ಚಿದೆ. ಬಹಳ ಮುಖ್ಯವಾಗಿ ಈ ನೀರನ್ನು ಬಳಕೆ ಮಾಡುತ್ತಿರುವ ಜನ ಹಾಗೂ ಜಾನುವಾರುಗಳ ಆರೋಗ್ಯದಲ್ಲಿ ಯಾವುದೇ ಏರುಪೇರು ಕಂಡುಬಂದಿಲ್ಲ. ಕೃಷಿ ಬೆಳೆಗಳ ಮೇಲೂ ಪ್ರತೀಕೂಲ ಪರಿಣಾಮ ಬೀರಿಲ್ಲ ಎಂದು ಐಐಎಸ್‌ಸಿ ವರದಿ ದೃಢಪಡಿಸಿದೆ.

ಸಂಸ್ಕರಿತ ತ್ಯಾಜ್ಯ ನೀರಿನಿಂದ ಹೆಚ್ಚಾಗಿರುವ ಅಂತರ್ಜಲ ಬಳಕೆಯಿಂದಾಗಿ ಮಣ್ಣಿನ ಗುಣಮಟ್ಟವೂ ಸುಧಾರಿಸಿದೆ. ಮೆಂತ್ಯ, ಸೌತೆಕಾಯಿ, ಬೀಟ್ರೂಟ್, ಟೊಮೆಟೊ ಸೇರಿದಂತೆ ಇತರೆ ತರಕಾರಿ ಬೆಳೆಗಳನ್ನು ಈ ಭಾಗದ ರೈತರು ಯಶಸ್ವಿಯಾಗಿ ಬೆಳೆಯುತ್ತಿದ್ದಾರೆ. ಇಷ್ಟಾದರೂ, ಮಣ್ಣಿನಲ್ಲಿ ನೈಟ್ರೋಜನ್ ಅಂಶ ಹೆಚ್ಚಿದೆ ಎಂಬ ಆರೋಪಗಳು ಶುದ್ದ ಸುಳ್ಳು ಎಂದು ವಿಜ್ಞಾನಿಗಳು ಸಭೆಯಲ್ಲಿ ಮಾಹಿತಿ ನೀಡಿದರು.

ಐಐಎಸ್‌ಸಿ ವತಿಯಿಂದ 2019 ರಿಂದ ಸತತ ಆರು ವರ್ಷಗಳ ಕಾಲ ನಡೆಸಲಾದ ಸಂಶೋಧನೆಯಲ್ಲಿ, ನೀರಿನಲ್ಲಿ ಹಾಗೂ ಅಂತರ್ಜಲದಲ್ಲಿ ಯಾವುದೇ ಹಾನಿಕಾರಕ ಲೋಹಂಶಗಳು ಪತ್ತೆಯಾಗಿಲ್ಲ. ವಾಸನೆ ಮತ್ತು ಬಣ್ಣವಿಲ್ಲದ ಶುದ್ಧ ನೀರು ಲಭ್ಯವಾಗುತ್ತಿದೆ. ಜಾನುವಾರುಗಳ ಹಾಲು ಉತ್ಪಾದನೆಯೂ ಹೆಚ್ಚಿದೆ. ಈ ಯೋಜನೆಯನ್ನು ಇಡೀ ದೇಶವೇ ಅನುಸರಿಸಬೇಕು ಎಂದು ತಿಳಿಸಿದರು.

ಸಂಶೋಚನೆ ಮುಂದುವರಿಸಲು 𝗜𝗜𝗦𝗰ಗೆ ಸೂಚನೆ

ಮೀನಿನ ಆರೋಗ್ಯ ಹಾಗೂ ಮಾಂಸದ ಗುಣಮಟ್ಟವನ್ನು ಆರು ತಿಂಗಳಿಗೊಮ್ಮೆ ಪರಿಶೀಲಿಸಲು ಹಾಗೂ 𝗜𝗜𝗦𝗰 ಸಂಶೋಧನೆಯನ್ನು ಮುಂದಿನ ಹತ್ತು ವರ್ಷಗಳವರೆಗೆ ಮುಂದುವರಿಸಲು 𝗜𝗜𝗦𝗰 ಅಧ್ಯಯನ ತಂಡಕ್ಕೆ ಸಚಿವರು ಇದೇ ಸಂದರ್ಭದಲ್ಲಿ ಸೂಚಿಸಿದರು.

ಸಂಸ್ಕರಿಸಿದ ನೀರಿನ ಬಗ್ಗೆ ನಡೆಯುತ್ತಿರುವ ಅಪಪ್ರಚಾರವನ್ನು ತಡೆಯಲು ಹಾಗೂ ಕೊಳಚೆ ನೀರು ಕೆರೆಗಳಿಗೆ ಸೇರುವುದನ್ನು ತಪ್ಪಿಸಲು ಸರ್ಕಾರದ ಮಟ್ಟದಲ್ಲಿ ಕಠಿಣ ನಿರ್ಧಾರ ಕೈಗೊಳ್ಳಲಾಗುವುದು. ಸಭೆಯಲ್ಲಿ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್. ಮುನಿಯಪ್ಪ, IISc ಅಸೋಸಿಯೇಟ್ ಪ್ರೊಫೆಸರ್, ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ. ರಾಮ್‌ ಪ್ರಸಾತ್‌ ಮನೋಹರ್‌, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಇನ್ನಿತರರು ಪಾಲ್ಗೊಂಡಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+