Get Updates
Get notified of breaking news, exclusive insights, and must-see stories!

ATM Van Robbery: 03 ಪ್ರಮುಖ ಆರೋಪಿಗಳ ಪೊಲೀಸ್ ಬಂಧನ: ₹5.76 ಕೋಟಿ ವಶಕ್ಕೆ, ಎದುರಾದ ಸವಾಲುಗಳೇನು?

ಬೆಂಗಳೂರು, ನವೆಂಬರ್ 22: ಬೆಂಗಳೂರಿನಲ್ಲಿ ಎಟಿಎಂಗೆ ಹಣ ಹಾಕಲು ಹೊರಟ್ಟಿದ್ದ ಖಾಸಗಿ ಏಜೆನ್ಸಿಯಾದ CMS ವಾಹನ ಅಡ್ಡಗಟ್ಟಿ ನಡೆದಿದ್ದ ಭರ್ಜರಿ 7. 11 ಕೋಟಿ ರೂಪಾಯಿ ದರೋಡೆ ಪ್ರಕರಣದ ಆರೋಪಿಗಳ ಬಂಧನವಾಗಿದೆ. ಹಾಡಹಗಲೇ ನಡೆದಿದ್ದ ಈ ಸಿನಿಮಿಯ ರೀತಿಯ ದರೋಡೆ ಕೇಸ್ ಅನ್ನು ಮೂರು ದಿನಗಳಲ್ಲಿ ಬೆಂಗಳೂರು ಪೊಲೀಸರು ಬೇಧಿಸಿದ್ದಾರೆ. ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ನಗದು ವ್ಯಾನ್ ದರೋಡೆ ಪ್ರಕರಣ ಪತ್ತೆ ಮಾಡಿದ್ದಾರೆ. ಬಂಧಿತರಿಂದ ಪೊಲೀಸರು ಒಟ್ಟು 60 ಗಂಟೆಗಳೊಳಗೆ ಕಳ್ಳತನವಾಗಿದ್ದ ಎಚ್‌ಡಿಎಫ್‌ಸಿ ಬ್ಯಾಂಕ್‌ ಒಟ್ಟು ಹಣದಲ್ಲಿ ₹5.76 ಕೋಟಿ ನಗದು ವಶಕ್ಕೆ ಪಡೆದಿದ್ದಾರೆ. ಹಲವು ಸವಾಲುಗಳ ಮಧ್ಯೆ ತನಿಖೆ ನಡೆಸಿ, ಆರೋಪಿಗಳನ್ನು ಬಂಧಿಸಿ ಪ್ರಕರಣವನ್ನು ಒಂದು ಹಂತಕ್ಕೆ ತರುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರನ್ನೆ ಬೆಚ್ಚಿಬೀಳಿಸಿದ್ದ ಪ್ರಕರಣದ ತನಿಖೆ ವಿವಿಧ ಆಯಾಮಗಳಲ್ಲಿ ನಡೆಸುತ್ತಿದ್ದಾರೆ. ಬಂಧಿತರ ವಿಚಾರಣೆ ನಡೆಸಿ ತಮ್ಮೊಂದಿಗೆ ಯಾರೆಲ್ಲ ಕೈ ಜೋಡಿಸಿದ್ದಾರೆ. ನಿಮ್ಮ ಉದ್ದೇಶ ಏನಾಗಿತ್ತು?, ಈ ಹಿಂದೆ ಯಾವೆಲ್ಲ ಕಡೆ ದರೋಡೆ ಮಾಡಿದ್ದಾರೆ ಎಂಬೆಲ್ಲ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Bengaluru Van Cash Robbery Case City Police Arrested Three Main accused Seized Rs 5 76 cr cash

ಇದೇ ನವೆಂಬರ್ 19/11/2025 ರಂದು ನಡೆದ ಪ್ರಕರಣ ಇದಾಗಿದೆ. ಎಟಿಎಂ ನಗದು ವಾಹನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲೇ ನಿಖರವಾಗಿ ಯೋಜಿಸಲಾದ ಮತ್ತು ಮಾಹಿತಿ ಆಧಾರಿತ ದರೋಡೆ ಮಾಡಲಾಗಿದೆ. ಪರಿಚಯಸ್ಥರೇ ಯಾರೋ ಸಹಾಯ ಮಾಡಿದ್ದಾರೆ ಎಂಬ ಅನುಮಾನ ಪೊಲೀಸರಿಗೆ ಮೂಡಿತ್ತು. ಪ್ರಕರಣ ತನಿಖೆ ವೇಳೆ ಪೊಲೀಸರು ಹಲವು ಸವಾಲುಗಳನ್ನು ಎದರಿಸಿದ್ದಾರೆ. ಅವು ಯಾವುವು?..

ದರೋಡೆ ಕೇಸ್: ತನಿಖೆಗೆ ಎದುರಾಗಿದ್ದ ಸವಾಲುಗಳು

* ಈ ದರೋಡೆ ನಿಖರವಾದ ಪೂರ್ವ ಯೋಜಿತವಾಗಿದ್ದು, ಪ್ರಾಥಮಿಕ ಸುಳಿವುಗಳು ಕಡಿಮೆ ಇದ್ದವು.

* ಅಪರಾಧಿಗಳು ಅನೇಕ CCTV ಕಾಣದ ಪ್ರದೇಶಗಳಲ್ಲಿ ನಿಖರ ನಿಲುಗಡೆಗಳನ್ನು ಮಾಡಿದ್ದರು.

* ದರೋಡೆ ವೇಳೆ ಖದೀಮರು ಸಮಯದಲ್ಲಿ ಮೊಬೈಲ್ ಫೋನ್‌ಗಳನ್ನು ಬಳಸಲಾಗಲಿಲ್ಲ.

* ತನಿಖೆ ದಿಕ್ಕು ತಪ್ಪಿಸಿಕೊಳ್ಳಲು ಹಲವು ಭಾಷೆಗಳಲ್ಲಿ ಸಂವಹನ ನಡೆಸಿದ್ದ ಗ್ಯಾಂಗ್.

* ಪೊಲೀಸರಿಂದ ಕಣ್ತಪ್ಪಿಸಿಕೊಳ್ಳಲು ಅನೇಕ ವಾಹನಗಳನ್ನು ಬಳಸಿದ್ದರು. ಅವುಗಳ ನಂಬರ್ ಪ್ಲೇಟ್‌ಗಳನ್ನು ಪದೇ ಪದೇ ಬದಲಾಯಿಸಿದ್ದರು.

* ದರೋಡೆ ಮಾಡಿದ ನೋಟುಗಳು ಸರಣಿ ಸಂಖ್ಯೆಗಳ ದಾಖಲಾತಿ ಇರದ ಕಾರಣ ಗುರುತಿಸುವುದು ಕಷ್ಟವಾಗಿತ್ತು.

* ಅಧಿಕೃತವಲ್ಲದ ಮಾಧ್ಯಮ ವರದಿಗಳು ಆರಂಭಿಕ ತನಿಖೆಯ ಸಂವೇದನಾಶೀಲ ಹಂತಗಳಿಗೆ ಅಡಚಣೆ ತಂದವು.

* ಈ ಎಲ್ಲಾ ಸವಾಲುಗಳ ನಡುವೆಯೂ ತಾಂತ್ರಿಕ ವಿಶ್ಲೇಷಣೆ ಮತ್ತು ತಂಡದ ಸಂಯೋಜಿತ ಕಾರ್ಯದಿಂದ ಪ್ರಕರಣವನ್ನು ತ್ವರಿತವಾಗಿ ಪತ್ತೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ತಿಳಿಸಿದ್ದಾರೆ.

ದರೋಡೆ ಪ್ರಕರಣದ ಹಿನ್ನೆಲೆ

ನವೆಂಬ್ 19ರಂದು ಮಧ್ಯಾಹ್ನ ₹ 7.11 ಕೋಟಿ ಹಣ ಹೊಯ್ಯುತ್ತಿದ್ದ ವ್ಯಾನ್ ಅನ್ನು ಡಿ.ಜೆ ಹಳ್ಳಿಯ ಬಳಿ, ಅಪರಿಚಿತರು RBI ನಿಯಂತ್ರಣಾಧಿಕಾರಿಗಳ ಹೆಸರಿನಲ್ಲಿ ನಿಲ್ಲಿಸಿದ್ದರು. ಹಣ ಹೊಯ್ಯುತ್ತಿದ್ದ ವ್ಯಾನ್‌ನ್ನು ಅಪಹರಿಸಿರುವ ಬಗ್ಗೆ CMS ಸಂಘಟನೆಯಿಂದ ವರದಿ ದೊರಕಿರುತ್ತದೆ. ನಂತರದ ತನಿಖೆಯಲ್ಲಿ, ಈ ಘಟನೆ 12:48 ಗಂಟೆಗಳ ಸಮಯದಲ್ಲಿ ಅಶೋಕ ಪಿಲ್ಲರ್-ಜಯನಗರ-ಡೇರಿ ಸರ್ಕಲ್‌ ಬಳಿ ನಡೆದಿರುವುದು ಖಚಿತವಾಗುತ್ತದೆ.

ಅಪರಾಧಿಗಳು ವ್ಯಾನ್ ಅನ್ನು ತಡೆದು ಶಸ್ತ್ರ ತೋರಿಸಿ, ಬೆದರಿಸಿ, ನಗದು ಪೆಟ್ಟಿಗೆಗಳನ್ನು ತೆಗೆದುಕೊಂಡು ಅಲ್ಲಿಂದ ಪರಾರಿಯಾಗಿದ್ದರು. ಮಧ್ಯಾಹ್ನ 13:16 ಗಂಟೆಗೆ ವಾಹನವನ್ನು ಬಿಟ್ಟು ಪರಾರಿಯಾಗಿರುತ್ತಾರೆ. ಈ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿದ್ದು, ಇದೀಗ ಪೊಲೀಸರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+