ಮಕ್ಕಳಿಗಾಗಿ ಹಾಲಿನ ಬ್ಯಾಂಕ್ ಆರಂಭಿಸಲಿದೆ ವಾಣಿ ವಿಲಾಸ್ ಆಸ್ಪತ್ರೆ
ಬೆಂಗಳೂರು, ಜನವರಿ 18: ಮನುಷ್ಯರ ಹಾಲಿನ ಬ್ಯಾಂಕ್ ಇರುವ ಮೊದಲ ಸರಕಾರಿ ಆಸ್ಪತ್ರೆ ಎಂಬ ಅಗ್ಗಳಿಕೆಗೆ ವಾಣಿ ವಿಲಾಸ್ ಮಹಿಳೆಯರ ಮತ್ತು ಮಕ್ಕಳ ಆಸ್ಪತ್ರೆ ಪಾತ್ರವಾಗಲಿದೆ. ಬೆಂಗಳೂರು ಮೆಡಿಕಲ್ ಕಾಲೇಜ್ ಅಂಡ್ ರೀಸರ್ಚ್ ಇನ್ಸ್ ಟಿಟ್ಯೂಟ್ (ಬಿಎಂಸಿಆರ್ ಐ) ಅಡಿಯಲ್ಲಿ ವಾಣಿ ವಿಲಾಸ್ ಆಸ್ಪತ್ರೆ ಬರುತ್ತದೆ.
ಒಂದು ಕೋಟಿ ರುಪಾಯಿಯ ಮನುಷ್ಯರ ಹಾಲಿನ ಬ್ಯಾಂಕ್ ಸದ್ಯದಲ್ಲೇ ಆರಂಭವಾಗಲಿದ್ದು, ಟೆಂಡರ್ ಪ್ರಕ್ರಿಯೆಗಳು ಪೂರ್ಣಗೊಂಡಿವೆ. ಅವಧಿಗೆ ಮುನ್ನ ಜನಿಸಿದ ಹಾಗೂ ಕಡಿಮೆ ತೂಕದ ಮಕ್ಕಳಿಗೆ ಹಾಲಿನ ಅಗತ್ಯವಿದೆ. ಅದನ್ನು ಪರಿಗಣಿಸಿ, ಹಾಲಿನ ಬ್ಯಾಂಕ್ ಆರಂಭಿಸುವ ಬಗ್ಗೆ ತಂಡವು ತೀರ್ಮಾನಿಸಿದೆ.
ಈ ಹಾಲು ಬ್ಯಾಂಕ್ ನಿಂದ ವಾಣಿ ವಿಲಾಸ್, ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ, ಗೌಸಿಯಾ ಆಸ್ಪತ್ರೆ ಮತ್ತಿತರ ಆಸ್ಪತ್ರೆಗಳಿಗೆ ಸಹಾಯ ಆಗಲಿದೆ. ಒಂದು ತಿಂಗಳಿಗೆ ಕನಿಷ್ಠ ನೂರೈವತ್ತು ಮಕ್ಕಳಿಗೆ ಹೆಚ್ಚುವರಿ ಹಾಲಿನ ಅಗತ್ಯ ಬರುತ್ತದೆ. ಪ್ರತಿ ತಿಂಗಳು ಸಾವಿರದೈನೂರರಷ್ಟು ಮಕ್ಕಳು ಜನಿಸುತ್ತವೆ. ಕರ್ನಾಟಕದ ಇತರ ಭಾಗದಲ್ಲಿ ಹಾಲಿನ ಅಗತ್ಯ ಕಂಡುಬಂದಾಗ ಈ ಆಸ್ಪತ್ರೆಯನ್ನು ಸೂಚಿಸುತ್ತಾರೆ.

2018ರಲ್ಲಿ 17,000ದಷ್ಟು ಮಕ್ಕಳು ಆಸ್ಪತ್ರೆಯಲ್ಲಿ ಜನಿಸಿವೆ. ಅವುಗಳ ಪೈಕಿ 35ರಿಂದ 40%ರಷ್ಟು ಮಕ್ಕಳಿಗೆ ಹೆಚ್ಚುವರಿಯಾಗಿ ಹಾಲಿನ ಅಗತ್ಯವಿತ್ತು. ಅಗತ್ಯ ಸಲಕರಣೆಗಳು ಹಾಗೂ ಸಿಬ್ಬಂದಿ ನೇಮಕಾತಿ ಸದ್ಯಕ್ಕೆ ನಡೆಯುತ್ತಿದೆ. ಎಲ್ಲರೂ ಹಾಲನ್ನು ನೀಡಲು ಸಾಧ್ಯವಿಲ್ಲ. ಹಾಲಿನ ಗುಣಮಟ್ಟವನ್ನು ಪರಿಶೀಲಿಸಲಾಗುತ್ತದೆ. ಆ ನಂತರ ನಿರ್ದಿಷ್ಟ ರೀತಿಯಲ್ಲಿ ಸಂಗ್ರಹ ಮಾಡಿದಬೇಕಾಗುತ್ತದೆ.
ಹಾಲಿನ ಬ್ಯಾಂಕ್ ಯೋಜನಾ ವೆಚ್ಚ ಅಂದಾಜು 1 ಕೋಟಿ ಆಗಿದ್ದು, ಸರಕಾರ ಈಗಾಗಲೇ 35 ಲಕ್ಷ ರುಪಾಯಿ ಬಿಡುಗಡೆ ಮಾಡಿದೆ. ಅಗತ್ಯ ಸಲಕರಣೆಗಳ ಖರೀದಿ ಮಾಡುವ ಸಲುವಾಗಿ ಹೆಚ್ಚಿನ ಮೊತ್ತದ ನಿರೀಕ್ಷೆಯಲ್ಲಿದ್ದೇವೆ ವಾಣಿ ವಿಲಾಸ್ ಆಸ್ಪತ್ರೆಯ ಮೆಡಿಕಲ್ ಸೂಪರಿಂಟೆಂಡೆಂಟ್ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications