ಬೆಂಗಳೂರು: ಬೇಕಾಬಿಟ್ಟಿ ವಾಹನ ನಿಲ್ಲಿಸುವವರೇ ಎಚ್ಚರ! ಟೋಯಿಂಗ್ ವ್ಯವಸ್ಥೆ ಮರು ಜಾರಿ?
ಬೆಂಗಳೂರು, ಡಿಸೆಂಬರ್ 15: ರಾಜಧಾನಿ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಪಾರ್ಕಿಂಗ್ ಮಾಡಿ ಓಡಾಡುವವರಿಗೆ ಪೊಲೀಸ್ ಇಲಾಖೆ ಚುರುಕು ಮುಟ್ಟಿಸಲು ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಕೇವಲ ಗಾಂಧಿ ನಗರದಲ್ಲಿ ಮಾತ್ರವೇ ಜಾರಿಯಲ್ಲಿರುವ ವಾಹನಗಳ ಟೋಯಿಂಗ್ ವ್ಯವಸ್ಥೆಯನ್ನು ಮರು ಜಾರಿಗೆ ಚಿಂತನೆ ನಡೆಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದರು.
ನಗರದಲ್ಲಿ ರಸ್ತೆಗಿಳಿಯುವ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದೆ. ಎಲ್ಲೆಂದರಲ್ಲಿ ವಾಹನ ನಿಲುಗಡೆ ಮಾಡಿ ಓಡಾಡಲಾಗುತ್ತಿದೆ. ಇದರಿಂದ ಇತರ ವಾಹನ ಸವಾರರಿಗೆ, ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಇದರಿಂದಾಗಿ ನಗರದಲ್ಲಿ ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿಗೆ ತರಲು ಚಿಂತಿಸಲಾಗುತ್ತಿದೆ ಎಂದರು.

ಕೆಂಗೇರಿ ಉಪನಗರದ ಕಾಲೇಜೊಂದರಲ್ಲಿ ಶನಿವಾರ ಸಂಚಾರಿ ಪೊಲೀಸರು ಆಯೋಜಿಸಿದ್ದ 'ಸಂಚಾರ ಸಂಪರ್ಕ ದಿವಸ' ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಜನರ ಕುಂದು ಕೊರತೆ ಆಲಿಸಿ ಅವರು ಮಾತನಾಡಿದರು.
ಕೆಂಗೇರಿ ಕಡೆಯಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸಿ ಓಡಾಡುತ್ತಾರೆ. ಇದರಿಂದ ಬೇರೆಯವರಿಗೆ ತೊಂದರೆ ಆಗುತ್ತಿದೆ. ಕೆಂಗೇರಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸರಿಯಾದ ಪಾರ್ಕಿಂಗ್, ನಿಯಮ ಪಾಲನೆ ಆಗುತ್ತಿಲ್ಲ. ಹೀಗಾಗಿ ವ್ಯವಸ್ಥೆ ಮತ್ತೆ ಆರಂಭಿಸಲಾಗುವುದು.
ಪ್ರಮುಖ ರಸ್ತೆ, ಜನ ಸಂಚಾರದ ರಸ್ತೆಗಳಲ್ಲಿ ಬೇಕಾ ಬಿಟ್ಟಿಯಾಗಿ ವಾಹನ ನಿಲ್ಲಿಸಿದರೆ, ತೊಂದರೆಯಾಗುತ್ತಿದೆ. ಕೆಂಗೇರಿ, ಸೇರಿ ವಿವಿಧೆಡೆ ಇಂತದ್ದೆ ಸಮಸ್ಯೆಗಳಾಗುತ್ತಿರುವ ಎಂಬುದರ ಬಗ್ಗೆ ಚರ್ಚಿಸಲಾಗಿದೆ. ಈ ರೀತಿಯ ಸಂಚಾರ ದಟ್ಟಣೆಯ ನಿವಾರಣೆಗೆ ಟೋಯಿಂಗ್ ಪುನಃ ಆರಂಭಿಸಲಾಗುವುದು. ಇದರಿಂದ ದಟ್ಟಣೆ ಕಡಿಮೆ ಆಗುತ್ತದೆ. ನಿಯಮ ಪಾಲಿಸುವುದರಿಂದ ಅನಗತ್ಯ ಸ್ಥಳಗಳಲ್ಲಿ ಪಾರ್ಕಿಂಗ್ ಗೆ ಕಡಿವಾಣವಾಗುತ್ತದೆ.
ಬೆಂಗಳೂರಿನಲ್ಲಿ ಸದ್ಯ ಗಾಂಧಿನಗರ ವ್ಯಾಪ್ತಿಯ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಮಾತ್ರವೇ ಟೋಯಿಂಗ್ ವ್ಯವಸ್ಥೆ ಜಾರಿಯಲ್ಲಿದೆ. ಇದನ್ನು ಶೀಘ್ರವೇ ನಗರಾದ್ಯಂತ ವಿಸ್ತರಣೆ ಮಾಡುವ ವಾಹನ ದಟ್ಟಣೆಗೆ ಕಡಿವಾಣ ಹಾಕುವ ಪ್ರಯತ್ನ ನಡೆಯಲಿದೆ ಎಂದು ಪೊಲೀಸ್ ಇಲಾಖೆಯಿಂದ ಅಧಿಕೃತ ಮಾಹಿತಿ ಸಿಕ್ಕಿದೆ.
ಟೋಯಿಂಗ್ಗೆ ವ್ಯಾಪಕ ಆಕ್ರೋಶ: ವ್ಯವಸ್ಥೆ ಸ್ಥಗಿತ
ಈ ಹಿಂದೆ ಬೆಂಗಳೂರಿನಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆ ಪೊಲೀಸರೊಬ್ಬರು ದಿವ್ಯಾಂಗ ಮಹಿಳೆ ಮೇಲೆ ಹಲ್ಲೆ ಮಾಡಿದ್ದರು. ಇದು ಸಾಕಷ್ಟು ಸುದ್ದಿಯಾಗಿತ್ತು. ಇನ್ನೊಂದೆಡೆ ಡೆಲಿವರಿ ಬಾಯ್ ದ್ವಿಚಕ್ರವಾಹನ ಟೋಯಿಂಗ್ ಆದ ಸಂದರ್ಭದಲ್ಲಿ ವಾಹನ ಬಿಡಿಸಿಕೊಳ್ಳಲು ಪೊಲೀಸ್ ಗಾಡಿಯಿಂದ ಓಡೋಡಿ ಹೋಗಿದ್ದರು. ಇದು ವೈರಲ್ ಆಗುತ್ತಿದ್ದ ಟೊಯಿಂಗ್ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಯಿತು. ಇಂತಹ ಘಟನೆಗಳು ಮರುಕಳಿಸುತ್ತಿದ್ದಂತೆ ಸಾರ್ವಜನಿಕರು ಸಂಚಾರಿ ಪೊಲೀಸರ ನಡೆಗೆ ಆಕ್ರೋಶ ಹೊರ ಹಾಕಿದರು. ಬಳಿಕ ಟೋಯಿಂಗ್ಯ ವ್ಯವಸ್ಥೆ ಕೈಬಿಡಲಾಗಿತ್ತು. ಇದೀಗ ಮತ್ತೆ ಜಾರಿಗೆ ಪೊಲೀಸರು ನಿರ್ಧರಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications