ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರ ಮಿಡ್ ನೈಟ್ ಕಾರ್ಯಾಚರಣೆ ರಹಸ್ಯ!
ಬೆಂಗಳೂರು, ಆಗಸ್ಟ್.14: ಬೆಂಗಳೂರಿನ ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ಮತ್ತು ದೇವರ ಜೀವನಹಳ್ಳಿ(ಡಿ.ಜೆ.ಹಳ್ಳಿ)ಯಲ್ಲಿ ದಾಂಧಲೆ ಪ್ರಕರಣಕ್ಕೆ ಸಂಬಂಧ ಆರೋಪಿಗಳ ಬಂಧನಕ್ಕೆ ಪೊಲೀಸರು ಮಿಡ್ ನೈಟ್ ಕಾರ್ಯಾಚರಣೆ ನಡೆಸಿದ್ದರು.
ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್, ಡಿಸಿಪಿ ರವಿಕುಮಾರ್ ಹಾಗೂ ಸಿಸಿಬಿ ಡಿಸಿಪಿ ಕುಲ್ ದೀಪ್ ಕುಮಾರ್ ನೇತೃತ್ವದಲ್ಲಿ ಜಂಟಿ ಕಾರ್ಯಾಚರಣೆಯನ್ನು ನಡೆಸಲಾಯಿತು. ಮಧ್ಯರಾತ್ರಿ 12 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೂ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸರು 60 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಕೆ ಜಿ ಹಳ್ಳಿ ಮತ್ತು ಡಿ ಜೆ ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ದಾಂಧಲೆ ನಡೆಸಿದ ಆರೋಪಿಗಳ ಬಂಧನಕ್ಕೆ ತೆರಳಿದ್ದ ವೇಳೆ ಬಿಗ್ ಹೈಡ್ರಾಮಾ ನಡೆದಿದೆ. ಪೊಲೀಸರ ಎದುರಿನಲ್ಲೇ ಆರೋಪಿಗಳು ಕಣ್ಣಾಮುಚ್ಚಾಲೆ ಆಡಿರುವ ವಿಚಾರ ಬೆಳಕಿಗೆ ಬಂದಿದೆ.

ಎರಡು ಏರಿಯಾಗಳ ಗಲ್ಲಿಗಲ್ಲಿ ಸುತ್ತಿದ ಪೊಲೀಸರು
ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ದಾಂಧಲೆಗೆ ಸಂಬಂಧಿಸಿದಂತೆ ಆರೋಪಿಗಳ ಬಂಧಿಸಲು ಪೊಲೀಸರು ತಡರಾತ್ರಿ ಎರಡೂ ನಗರದ ಗಲ್ಲಿಗಲ್ಲಿಗಳಲ್ಲೂ ಸುತ್ತಿದರು. ಬೆಳಗಿನ ಹೊತ್ತಿನಲ್ಲಿ ಆರೋಪಿಗಳು ಬೇರೆ ಪ್ರದೇಶಗಳಲ್ಲಿ ತಪ್ಪಿಸಿಕೊಳ್ಳುವ ಸಾಧ್ಯತೆಯಿದ್ದು, ರಾತ್ರಿ ಹೊತ್ತಿನಲ್ಲಿ ಆರೋಪಿಗಳು ಮರಳಿ ಮನೆಗೆ ವಾಪಸ್ಸಾಗುತ್ತಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಮಿಡ್ ನೈಟ್ ಕಾರ್ಯಾಚರಣೆ ನಡೆಸಿದ್ದರು.

ಸಿಸಿ ಕ್ಯಾಮರಾ ದೃಶ್ಯಗಳನ್ನು ಪರಿಶೀಲಿಸಿ ಆರೋಪಿ ಬಂಧನ
ಪುಲಕೇಶಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಎದುರು, ಕೆಜಿ ಹಳ್ಳಿ ಠಾಣೆ ಎದುರು ಮತ್ತು ಡಿಜೆ ಹಳ್ಳಿಯಲ್ಲಿ ದಾಂಧಲೆಗೆ ಸಂಬಂಧಿಸಿದ ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲನೆ ನಡೆಸಿ ಕಾರ್ಯಾಚರಣೆಗೆ ಇಳಿದಿದ್ದರು. ವಿಡಿಯೋದಲ್ಲಿ ಕಲ್ಲು ತೂರಿದ, ಬಾಟಲಿಗಳನ್ನು ಎಸೆದವರನ್ನು ಗುರುತು ಮಾಡಿಕೊಳ್ಳಲಾಗಿತ್ತು. ಅದನ್ನು ಆಧರಿಸಿಯೇ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಒಬ್ಬರಿಂದ ಒಬ್ಬರಿಗೆ ಮೊಬೈಲ್ ನಲ್ಲಿ ಎಚ್ಚರಿಕೆ ರವಾನೆ
ಗುರುವಾರ ತಡರಾತ್ರಿ ಗಲ್ಲಿಗಲ್ಲಿಗಳಲ್ಲೂ ಬೀಟ್ ಹಾಕಿದ ಪೊಲೀಸರು ಮನೆಗೆ ನುಗ್ಗಿ ಆರೋಪಿಗಳನ್ನು ಬಂಧಿಸಿದರು. ಈ ವೇಳೆ ಕೆಲವರು ಮೊಬೈಲ್ ನಲ್ಲಿ ಕೆಲವರಿಗೆ ಎಚ್ಚರಿಕೆ ಸಂದೇಶವನ್ನು ರವಾನಿಸಿರುವ ವಿಚಾರ ಬೆಳಕಿಗೆ ಬಂದಿದೆ. ಪೊಲೀಸರು ಬಂಧಿಸಲು ಮನೆಗಳಿಗೆ ನುಗ್ಗುತ್ತಿದ್ದಾರೆ. ಯಾರೂ ಮನೆಯ ಬಾಗಿಲುಗಳನ್ನು ತೆರೆಯಬೇಡಿ. ಒಂದು ವೇಳೆ ಮನೆ ಬಾಗಿಲು ತೆರೆದರೆ, ಯಾರ ಕೈಗೂ ಸಿಗದಂತೆ ಬಚ್ಚಿಟ್ಟುಕೊಳ್ಳಿರಿ. ಮನೆಯಲ್ಲಿರುವ ಮಹಿಳೆಯರನ್ನು ಮುಂದೆ ಬಿಡಿ ಎಂಬ ಎಚ್ಚರಿಕೆ ಸಂದೇಶಗಳು ಹರಿದಾಡಿರುವುದು ಗೊತ್ತಾಗಿದೆ.

ಒಟ್ಟು 206 ಆರೋಪಿಗಳನ್ನು ಬಂಧಿಸಿದ ಪೊಲೀಸರು
ಇನ್ನು, ಆಗಸ್ಟ್.11ರಂದು ನಡೆದ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುದಿನವೇ 146 ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ಆಗಸ್ಟ್.13ರ ತಡರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ 60 ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇದುವರೆಗೂ 206 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications