ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾತ್ರೋರಾತ್ರಿ ಬೆಂಗಳೂರಿನಿಂದ ಬಳ್ಳಾರಿಗೆ 80 ಆರೋಪಿಗಳು ಶಿಫ್ಟ್!

|
Google Oneindia Kannada News

ಬೆಂಗಳೂರು, ಆಗಸ್ಟ್.14: ಬೆಂಗಳೂರಿನ ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ಮತ್ತು ದೇವರ ಜೀವನಹಳ್ಳಿ(ಡಿ.ಜೆ.ಹಳ್ಳಿ)ಯಲ್ಲಿ ದಾಂಧಲೆ ಪ್ರಕರಣ ಸಂಬಂಧ ಬಂಧಿಸಲ್ಪಟ್ಟ ಆರೋಪಿಗಳ ಒಂದು ತಂಡವನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.

ಗುರುವಾರ 80 ಬಂಧಿತ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯವು ಆರೋಪಿಗಳನ್ನು 15 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿ ಇರಿಸುವಂತೆ ಆದೇಶ ಹೊರಡಿಸಿತ್ತು.

ಬೆಂಗಳೂರು ಹಿಂಸಾಚಾರ: ಕೆಜಿ ಹಳ್ಳಿ ಕಾರ್ಪೋರೇಟರ್ ಪತಿ ಕಲೀಂ ಪಾಷಾ ಬಂಧನಬೆಂಗಳೂರು ಹಿಂಸಾಚಾರ: ಕೆಜಿ ಹಳ್ಳಿ ಕಾರ್ಪೋರೇಟರ್ ಪತಿ ಕಲೀಂ ಪಾಷಾ ಬಂಧನ

ಬೆಂಗಳೂರಿನ ಕಾರಾಗೃಹದಲ್ಲಿಯೇ ಇರಿಸಿದ್ದರೆ ಗಲಾಟೆ ಆಗುವ ಸಾಧ್ಯತೆಗಳಿದ್ದವು. ಹೀಗಾಗಿ ರಾತ್ರೋರಾತ್ರಿ 80 ಮಂದಿ ಆರೋಪಿಗಳನ್ನು ಕೆಎಸ್ಆರ್ ಟಿಸಿ ಬಸ್ ಗಳಲ್ಲಿ ಸಿಸಿಬಿ ಮತ್ತು ಕೆಎಸ್ಆರ್ ಪಿ ಸಿಬ್ಬಂದಿ ಭದ್ರತೆಯಲ್ಲಿ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ.

 Bengaluru Violence: 80 Accused Shifted To Ballari Central Jail

ಬಳ್ಳಾರಿ ಕಾರಾಗೃಹದಲ್ಲಿ ದಾಖಲೆ ಪರಿಶೀಲನೆ:

ಶುಕ್ರವಾರ ಬೆಳಗ್ಗೆ ಹೊತ್ತಿಗೆ 80 ಆರೋಪಿಗಳನ್ನು ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ತೆರೆದೊಯ್ಯಲಾಗಿತ್ತು. ಎಲ್ಲ ಆರೋಪಿಗಳನ್ನು ಜೈಲಿನಲ್ಲಿಟ್ಟುಕೊಳ್ಳುವ ಮುನ್ನ ಜೈಲಾಧಿಕಾರಿಗಳು ಎಲ್ಲ ದಾಖಲೆಗಳ ಪರಿಶೀಲನೆ ನಡೆಸಿದರು ಎಂದು ತಿಳಿದು ಬಂದಿದೆ. ಕಳೆದ ಆಗಸ್ಟ್.11ರಂದು ಕೆ.ಜಿ ಹಳ್ಳಿ ಮತ್ತು ಡಿ.ಜೆ ಹಳ್ಳಿ ದಾಂಧಲೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೂ 145ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿದ್ದರು.

English summary
Bengaluru Violence: 80 Accused Shifted To Ballari Central Jail.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X