ಬೆಂಗಳೂರು ಹಿಂಸಾಚಾರದ ಬಗ್ಗೆ ಇಬ್ಬರು ಕಾರ್ಪೋರೇಟರ್ಸ್ ಹೇಳಿದ್ದೇನು?
ಬೆಂಗಳೂರು, ಆಗಸ್ಟ್.18: ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ಮತ್ತು ದೇವರ ಜೀವನಹಳ್ಳಿ(ಡಿ.ಜೆ.ಹಳ್ಳಿ)ಯಲ್ಲಿ ನಡೆದ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ವಿಭಾಗ ಪೊಲೀಸರು ಇಬ್ಬರು ಕಾರ್ಪೋರೇಟರ್ ಗಳನ್ನು ವಿಚಾರಣೆಗೆ ಒಳಪಡಿಸಿದರು.
Recommended Video
ಸಿಸಿಬಿ ಪೊಲೀಸರು ನೋಟಿಸ್ ನೀಡಿದ ಹಿನ್ನೆಲೆ ಕಾರ್ಪೋರೇಟರ್ ಸಂಪತ್ ರಾಜ್ ಮತ್ತು ಜಾಕೀರ್ ಹುಸೇನ್ ಬೆಳಗ್ಗೆ 10.30ಕ್ಕೆ ಸಿಸಿಬಿ ಕಚೇರಿಗೆ ವಿಚಾರಣೆಗಾಗಿ ಹಾಜರಾದರು. ಸಂಜೆ ಐದು ಗಂಟೆವರೆಗೂ ಇಬ್ಬರು ಕಾರ್ಪೋರೇಟರ್ಸ್ ನ್ನು ತೀವ್ರ ವಿಚಾರಣೆಗೊಳಪಡಿಸಲಾಯಿತು.
ಸಿಸಿಬಿ ವಿಚಾರಣೆ ಬಳಿಕ ಪ್ರತಿಕ್ರಿಯೆ ನೀಡಿದ ಇಬ್ಬರು ಬಿಬಿಎಂಪಿ ಸದಸ್ಯರು ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು. ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಕ್ಕೆ ವಿಚಾರಣೆಗೆ ಹಾಜರಾಗಿದ್ದೇವು. ಮತ್ತೆ ವಿಚಾರಣೆಗೆ ಕರೆದರೆ ಬರುತ್ತೇವೆಯಷ್ಟೇ ಎಂದು ಹೇಳಿದರು.

ಕಾರ್ಪೋರೇಟರ್ ಸಂಪತ್ ರಾಜ್ ಹೇಳಿದ್ದೇನು:
"ಮಂಗಳವಾರ ಬೆಳಗ್ಗೆ 10.30ಕ್ಕೆ ಸಿಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿತ್ತು. ಇಂದು ಬೆಳಗ್ಗೆ 10.20 ಗಂಟೆಗೆ ಸರಿಯಾಗಿ ವಿಚಾರಣೆಗೆ ಹಾಜರಾಗಿದ್ದೇನೆ. ಪೊಲೀಸರು ಕೇಳಿದ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ. ವಿಚಾರಣೆ ಹಂತದಲ್ಲಿ ಇರುವ ಹಿನ್ನೆಲೆ ಆ ಬಗ್ಗೆ ಏನನ್ನೂ ಹೇಳುವುದಕ್ಕೆ ಬಯಸುವುದಿಲ್ಲ. ಸದ್ಯದ ಮಟ್ಟಿಗೆ ಮತ್ತೊಮ್ಮೆ ವಿಚಾರಣೆಗೆ ಹಾಜರಾಗಲು ಯಾವುದೇ ಸೂಚನೆಗಳನ್ನು ನೀಡಿಲ್ಲ. ಮತ್ತೆ ಕರೆದರೆ ಖಂಡಿತವಾಗಿಯೂ ವಿಚಾರಣೆಯನ್ನು ಎದುರಿಸಲು ಸಿದ್ಧನಿದ್ದೇನೆ ಎಂದು ಕಾರ್ಪೋರೇಟರ್ ಸಂಪತ್ ರಾಜ್ ತಿಳಿಸಿದರು.
ಕಾರ್ಪೋರೇಟರ್ ಜಾಕೀರ್ ಹುಸೇನ್ ಸ್ಪಷ್ಟನೆ:
ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮತ್ತು ತಮ್ಮ ನಡುವಿನ ಬಾಂಧವ್ಯ ಉತ್ತಮವಾಗಿಯೇ ಇದೆ. ನಮ್ಮದು ಫ್ರೆಜರ್ ಟೌನ್ ವಾರ್ಡ್ ಆಗಿದ್ದು, ಅಲ್ಲಿ ಯಾವುದೇ ಗಲಾಟೆಗಳು ನಡೆದಿಲ್ಲ. ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ನಡೆದ ಗಲಭೆಗೂ ನನಗೂ ಯಾವುದೇ ಸಂಬಂಧವಿಲ್ಲ. ಆ ಗಲಭೆಯಲ್ಲಿ ನನ್ನ ಹೆಸರು ಹೇಗೆ ಕೇಳಿ ಬಂದಿತು ಎನ್ನುವುದೇ ನನಗೆ ಗೊತ್ತಿಲ್ಲ. ಸದ್ಯದ ಮಟ್ಟಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಕ್ಕೆ ವಿಚಾರಣೆಗೆ ಹಾಜರಾಗಿದ್ದೆನು. ಮುಂದೆ ಮತ್ತೆ ವಿಚಾರಣೆಗೆ ಕರೆದರೆ, ವಿಚಾರಣೆಗೆ ಹಾಜರಾಗಲು ನಾನು ಸಿದ್ಧನಿದ್ದೇನೆ ಎಂದು ಕಾರ್ಪೋರೇಟರ್ ಜಾಕೀರ್ ಹುಸೇನ್ ತಿಳಿಸಿದ್ದಾರೆ.
-
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications