Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು
Bengaluru Viral: ಬೆಂಗಳೂರು ಆಟೋ ಚಾಲಕರೊಬ್ಬರ ಮಾರ್ಕೆಂಟಿಗ್ ಸ್ಟ್ಯಾಟರ್ಜಿಯು ನೆಟ್ಟಿಗರ ಗಮನ ಸೆಳೆದಿದ್ದು, ಭಾರೀ ಮೆಚ್ಚುಗೆಗೆ ಕಾರಣವಾಗಿದೆ. ಬೆಂಗಳೂರಿನ ಆಟೋ ಚಾಲಕರು ಎಷ್ಟು ಅಪ್ಡೇಟ್ ಆಗುತ್ತಿದ್ದಾರೆ ಎಂದು ನೆಟ್ಟಿಗರು ಮೆಚ್ಚುಗೆಯ ಸುರಿಮಳೆಯನ್ನೇ ಸುರಿಸಿದ್ದಾರೆ. ಇನ್ನು ಬೇಸಿಗೆ ಸಮಯದಲ್ಲಿ ಈ ಸೇವೆಯು ಅನುಕೂಲವಾಗಲಿದೆ ಎನ್ನುವ ಮಾತೂ ಕೇಳಿ ಬಂದಿದೆ. ಇಷ್ಟಕ್ಕೂ ಬೆಂಗಳೂರಿನ ಆಟೋ ಚಾಲಕ ತಮ್ಮ ಆಟೋದಲ್ಲಿ ಅಳವಡಿಸಿಕೊಂಡಿರುವುದೇನು, ಆ ಪೋಸ್ಟ್ ವೈರಲ್ ಆಗುತ್ತಿರುವುದು ಯಾಕೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಬೆಂಗಳೂರಿನಲ್ಲಿ ಆಟೋ ಚಾಲಕರ ಬಗ್ಗೆ ಕೆಲವರಲ್ಲಿ ತಪ್ಪು ಅಭಿಪ್ರಾಯವಿದೆ. ಕೇಳಿದ ಜಾಗಕ್ಕೆ ಬರುವುದಿಲ್ಲ, ದುಬಾರಿ ಶುಲ್ಕವನ್ನು ಕೇಳುತ್ತಾರೆ ಹಾಗೂ ದರ್ಪದಿಂದ ವರ್ತನೆ ಮಾಡುತ್ತಾರೆ ಎನ್ನುವ ಭಾವನೆ ಕೆಲವರಲ್ಲಿ ಇದೆ. ಇದಕ್ಕೆ ಕೆಲವು ಆಟೋ ಚಾಲಕರ ವರ್ತನೆಯೂ ಕಾರಣ. ಕೆಲವು ಆಟೋ ಚಾಲಕರ ದುರ್ವತನೆಯಿಂದಾಗಿ ಇಡೀ ಆಟೋ ಚಾಲಕರ ಸಮೂಹವನ್ನು ಕೆಲವರು ಜಡ್ಜ್ ಮಾಡುವುದು ಸಹ ಇದೆ. ಆದರೆ, ಇದೀಗ ಆಟೋ ಚಾಲಕರೊಬ್ಬರ ವಿಶೇಷ ಸೇವೆಯು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದೇ ಸಂದರ್ಭದಲ್ಲಿ ಆಟೋ ಚಾಲಕರು ವಿಧಿಸಿರುವ ಶುಲ್ಕದ ಬಗ್ಗೆಯೂ ಚರ್ಚೆ ನಡೆದಿದೆ.

ಆಟೋ ಚಾಲಕನ ಪೋಸ್ಟ್ ವೈರಲ್
ಬೆಂಗಳೂರಿನ ಆಟೋ ಚಾಲಕರೊಬ್ಬರು, ಆಟೋದಲ್ಲಿ ಪ್ರಯಾಣಿಕರು ಕುಳಿತುಕೊಳ್ಳುವ ಜಾಗದಲ್ಲಿ ಅಂಟಿಸಿರುವ ಬರಹವು ಇದೀಗ ವೈರಲ್ ಆಗುತ್ತಿದೆ. ಅದರಲ್ಲಿ ಆಟೋ ಚಾಲಕರೊಬ್ಬರು ಪ್ರೀಮಿಯಂ ಆಟೋಗೆ ಸ್ವಾಗತ.. ಎನ್ನುವ ಅಡಿ ಬರಹದೊಂದಿಗೆ ಅಂಟಿಸಿರುವ ಪೋಸ್ಟ್ ಹಾಗೂ ಸೇವೆ ವೈರಲ್ ಆಗುತ್ತಿದೆ.
30 ನಿಮಿಷಗಳ ಕಾಲ ಫ್ಯಾನ್ ಕೇವಲ 10 ರೂ.
ಹೊಸ ತಣ್ಣೀರಿನ ಬಾಟಲ್ 500 ಎಂಎಲ್ 12 ರೂ.
ಯುಎಸ್ಬಿ ಮೊಬೈಲ್ ಚಾರ್ಜಿಂಗ್ ಯಾವುದೇ ಪಿನ್ ಲಭ್ಯವಿದೆ ಮತ್ತು ಚಾರ್ಜ್ ಮಾಡಬಹುದು ಎನ್ನುವ ಬರಹ ಇದೀಗ ಗಮನ ಸೆಳೆದಿದೆ. ಬೇಸಿಗೆ ಸಮಯದಲ್ಲಿ ಈ ಸೇವೆಗಳು ತುಂಬಾ ಅನುಕೂಲವಾಗಲಿವೆ ಎಂದು ನೆಟ್ಟಿಗರು ಹೇಳಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್
ಇನ್ನು ಸೋಷಿಯಲ್ ಮೀಡಿಯಾದಲ್ಲಿ ಈ ಪೋಸ್ಟ್ ವೈರಲ್ ಆಗಿದೆ. ಶಗುನ್ ಓಹ್ರಿ (Shagun Ohri) ಎನ್ನುವವರು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಈ ಪೋಸ್ಟ್ ಹಂಚಿಕೊಂಡಿದ್ದು, ಅದರಲ್ಲಿ ಈ ಆಟೋ ಚಾಲಕನಿಗೆ Ideal Customer Profile / ಗ್ರಾಹಕರಿಗೆ ಏನು ಅವಶ್ಯಕತೆ ಇದೆ ಎನ್ನುವುದು ಗೊತ್ತಿದೆ ಎಂದು ಹೇಳಿದ್ದಾರೆ.
Bengaluru’s auto drivers are getting increasingly creative. 🙏
— Indian Tech & Infra (@IndianTechGuide) March 22, 2026
(📷 - @ShagunOhri) pic.twitter.com/A0mBzkVnT7
ವೈರಲ್ ಪೋಸ್ಟ್ಗೆ ನೆಟ್ಟಿಗರು ಹೇಳಿದ್ದೇನು ?
ಇನ್ನು ವೈರಲ್ ಪೋಸ್ಟ್ಗೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಹಣದುಬ್ಬರ ಪ್ರೇರಿತ ಸಮಾಜದಲ್ಲಿ ಹೆಚ್ಚುವರಿ ಆದಾಯವನ್ನು ಗಳಿಸಲು ನವೀನ ವಿಚಾರಗಳು, ಹೊಸ ಬ್ಯುಸಿನೆಸ್ ಐಡಿಯಾಗಳು ಚೆನ್ನಾಗಿವೆ ಎಂದು ನೆಟ್ಟಿಗರು ರಿಯಾಕ್ಟ್ ಮಾಡಿದ್ದಾರೆ. ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದು ಹಲವರು ಮೆಚ್ಚುಗೆ ಸೂಚಿಸಿದ್ದಾರೆ.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ













Click it and Unblock the Notifications