Water Bill: ಬೆಂಗಳೂರು ಕಾವೇರಿ ನೀರು ಬಳಕೆದಾರರಿಗೆ ಜಲಮಂಡಳಿ ಗುಡ್ ನ್ಯೂಸ್
ಬೆಂಗಳೂರು: ದೀರ್ಘಕಾಲದಿಂದ ನೀರಿನ ಬಿಲ್ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಕಾವೇರಿ ನೀರು ಬಳಕೆದಾರರಿಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು (BWSSB) ಗುಡ್ ನ್ಯೂಸ್ ನೀಡಿದೆ. ಇನ್ನು ಮುಂದೆ ನೀರಿನ ಬಿಲ್ ಪಾವತಿ ಸುಲಭ ಹಾಗೂ ದಂಡ ಮೊತ್ತ ಮನ್ನಾ ಆಗಲಿದೆ. ಈ ಹಿಂದೆ ಜಿಬಿಎ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಕಟ್ಟುವವರಿಗೆ ಒಟಿಎಸ್ ಯೋಜನೆ ಜಾರಿ ಮಾಡಿದಂತೆ ಜಲಮಂಡಳಿ ವ್ಯಾಪ್ತಿಯಲ್ಲೂ 2026ರಲ್ಲಿ ಜಾರಿಗೆ ನಿರ್ಧರಿಸಲಾಗಿದೆ. ಯಾವಾಗಿನಿಂದ ಜಾರಿ, ಪಿಲ್ ಪಾವತಿ ಹೇಗೆ? ಎಂಬುದರ ಸಂಪೂರ್ಣ ವಿವರ ಇಲ್ಲಿದೆ.
ಕರ್ನಾಟಕ ರಾಜ್ಯ ನಗರಾಭಿವೃದ್ದಿ ಇಲಾಖೆಯು ಒನ್ ಟೈನ್ ಸೆಟಲ್ಮೆಂಟ್ (ಒಟಿಎಸ್) ಯೋಜನೆಗೆ ಜಾರಿಗೆ ಗ್ರೀನ್ ಸಿಗ್ನಲ್ ನೀಡಿದೆ. ಸರ್ಕಾರದ ಆದೇಶದ (ಸಂಖ್ಯೆ: ನಅಇ 151 ಎಂಎನ್ಐ 2025 (ಇ) ಅಡಿಯಲ್ಲಿ ಡಿಸೆಂಬರ್ 23ರಂದು ನಗರದಲ್ಲಿ ಬಾಕಿ ಇರುವ ನೀರಿನ ಬಿಲ್ಲಿನ ಅಸಲು ಮೊತ್ತವನ್ನು (Principal Amount) ಏಕಕಾಲದಲ್ಲಿ ಪಾವತಿಸಿದರೆ, ಬಡ್ಡಿ ಮತ್ತು ದಂಡದ ಮೊತ್ತವನ್ನು ಶೇ.100 ರಷ್ಟು ಮನ್ನಾ ಮಾಡಲು ನಿರ್ಧರಿಸಲಾಗಿದೆ. ಈ ಯೋಜನೆ ಜಾರಿಗೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

ಯೋಜನೆಯಡಿ ಬಿಲ್ ಪಾವತಿಗೆ ನೋಂದಣಿ ಅಗತ್ಯ
ಸರ್ಕಾರದ ನಿರ್ದೇಶನದಂತೆ ಗ್ರಾಹಕ ಸ್ನೇಹಿ ನಿಯಮಾವಳಿಗಳನ್ನು ಅಳವಡಿಸಲಾಗಿದೆ. ಗ್ರಾಹಕರು ನೇರವಾಗಿ ಜಲಮಂಡಳಿಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಅಲ್ಲದೇ, ಹೊಸ ಅಪ್ ಒಂದನ್ನು ನಿರ್ಮಿಸಲಾಗುತ್ತಿದ್ದು ಇವುಗಳಲ್ಲಿ ನೋಂದಣಿ ಮಾಡಿಕೊಂಡ ಗ್ರಾಹಕರಿಗೆ ಹಣ ಪಾವತಿಸಲು ಕಾಲಾವಕಾಶ ಮತ್ತು ಅಂತಿಮ ದಿನಾಂಕವನ್ನು ತಿಳಿಸಲಾಗುತ್ತದೆ. ಶೀಘ್ರವೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಮತ್ತೊಮ್ಮೆ ಚರ್ಚಿ ದಂಡ ರಹಿತ ಬಿಲ್ ಪಾವತಿಗೆ ಯೋಜನೆ ಜಾರಿಗೊಳಿಸುವ ಬಗ್ಗೆ ದಿನಾಂಕವನ್ನು ಘೋಷಿಸಲಾಗುವುದು ಎಂದು ಹೇಳಿದರು. ಈ ಮೂಲಕ ಬೆಂಗಳೂರು ಜಲಮಂಡಳಿ ವ್ಯಾಪ್ತಿಯಲ್ಲಿ ನೀರಿನ ಬಿಲ್ ಸಂಗ್ರಹ ಪ್ರಕ್ರಿಯೆಗೆ ಚುರುಕು ನೀಡಲು ಹಾಗೂ ಕಟ್ಟದೇ ಬಾಕಿ ಇರುವ ನೀರಿನ ಬಿಲ್ ವಸೂಲಿಗೆ ಸೂಕ್ತ ಕ್ರಮ ಜರುಗಿಸುತ್ತಿದೆ.
ಒಟಿಎಸ್ ಯೋಜನೆಯಡಿ ಗ್ರಾಹಕರಿಗೆ ಬಿಲ್ ಪಾವತಿಸಿ
ಮೂರು ತಿಂಗಳಲ್ಲಿ ಬಿಲ್ ಪಾವತಿಸುವ ಸುವರ್ಣಾವಕಾಶವನ್ನು ಜಲಮಂಡಳಿ ನೀಡಿದೆ. ಯೋಜನೆಯಡಿ 2026 ಜನವರಿ, ಫೆಬ್ರವರಿ ಮತ್ತು ಮಾರ್ಚ್ ತಿಂಗಳುಗಳಲ್ಲಿ ಮಾತ್ರ ಚಾಲ್ತಿಯಲ್ಲಿರುತ್ತದೆ. ಈ ಅವಧಿಯಲ್ಲಿ ಪೂರ್ಣ ಅಸಲು ಪಾವತಿಸಿದರೆ, ಅವರ ಖಾತೆಯನ್ನು 'ಕ್ಲಿಯರ್' ಮಾಡಲಾಗುತ್ತದೆ ಎಂದರು.
ನೆರೆಯ ರಾಜ್ಯದ ಹೈದರಾಬಾದ್ನಲ್ಲಿ ಈ ಯೋಜನೆ ಎರಡು ಬಾರಿ ಯಶಸ್ವಿಯಾಗಿದೆ. ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅದೇ ಮಾದರಿಯನ್ನು ಇದೀಗ ಬೆಂಗಳೂರಿನಲ್ಲಿ ಅಳವಡಿಸಿಕೊಳ್ಳಲಾಗುತ್ತಿದೆ. ಗ್ರಾಹಕರು ಬಿಲ್ನ ಅಸಲು ಮೊತ್ತವನ್ನು ಪಾವತಿಸುತ್ತಿದ್ದಂತೆಯೇ, ತಂತ್ರಾಂಶದಲ್ಲಿ ಬಡ್ಡಿ ಮತ್ತು ದಂಡದ ಮೊತ್ತ ಸ್ವಯಂಚಾಲಿತವಾಗಿ ಮನ್ನಾ ಆಗುವಂತೆ ಬ್ಯಾಕ್ ಎಂಡ್ನಲ್ಲಿ ವ್ಯವಸ್ಥೆ ಮಾಡಲಾಗಿದೆ.
ಸರ್ಕಾರಿ ಕಟ್ಟಡಗಳು ಮತ್ತು ವಾಣೀಜ್ಯ ಮಳಿಗೆಗಳಿಗೆ ಜಲಮಂಡಳಿಯ ವಿಶೇಷ ತಂಡವೇ ಖುದ್ದು ಭೇಟಿ ನೀಡಿ ಮಾಹಿತಿ ನೀಡಲಿದೆ. ವಸತಿ ಕಟ್ಟಡಗಳಿಗೆ ಸಂಬಂಧಿಸಿದಂತೆ ಸ್ಥಳೀಯ ಅಧಿಕಾರಿಗಳು ಸಂಪರ್ಕಿಸುತ್ತಾರೆ ಹಾಗೂ ವೆಬ್ಸೈಟ್ ಮತ್ತು ಆಪ್ ಮೂಲಕವೂ ಮುಕ್ತ ಅವಕಾಶ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದರು.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ












Click it and Unblock the Notifications