ಬೆಂಗಳೂರು ಜಲ ಮಂಡಳಿ ಬ್ಲೂ ಫೋರ್ಸ್ ಭರ್ಜರಿ ಕಾರ್ಯಾಚರಣೆ: ಈ ತಪ್ಪು ಮಾಡಿದರೆ ನೀರಿಲ್ಲ
ಬೆಂಗಳೂರು: ಬೆಂಗಳೂರಿನಲ್ಲಿ ಈಚೆಗೆ ಜಲಮಂಡಳಿಯು ಬ್ಲೂ ಫೋರ್ಸ್ (ನೀಲಿ ಪಡೆ)ಯನ್ನು ರಚನೆ ಮಾಡಿದ್ದು, ಅಕ್ರಮವಾಗಿ ನೀರು ಸಂಪರ್ಕ ಪಡೆದುಕೊಳ್ಳುತ್ತಿರುವವರ ಮೇಲೆ ಕಣ್ಣಿರಿಸಿದೆ. ಅಲ್ಲದೇ ಈಗಾಗಲೇ ಬೆಂಗಳೂರಿನ ವಿವಿಧ ಭಾಗದಲ್ಲಿ ಸಾವಿರಾರು ಮನೆಗಳ ಪರಿಶೀಲನೆ ಮಾಡಲಾಗಿದ್ದು, ಅಕ್ರಮವಾಗಿ ನೀರು ಸಂಪರ್ಕ ಪಡೆದುಕೊಳ್ಳುತ್ತಿರುವವರಿಗೆ ಬಿಸಿ ಮುಟ್ಟಿಸುವ ಕೆಲಸವನ್ನು ಪ್ರಾರಂಭಿಸಲಾಗಿದೆ.
ಬೆಂಗಳೂರಿನಲ್ಲಿ ಈಚೆಗೆ ಬ್ಲೂ ಫೋರ್ಸ್ಗೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಚಾಲನೆ ನೀಡಿದ್ದರು. ಈ ತಂಡವು ಅತ್ಯಂತ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದು, ಅಕ್ರಮವಾಗಿ ನೀರಿನ ಸಂಪರ್ಕ ತೆಗೆದುಕೊಂಡಿರುವವರಿಗೆ ಬಿಸಿ ಮುಟ್ಟಲು ಪ್ರಾರಂಭವಾಗಿದೆ. ಬ್ಲೂ ಫೋರ್ಸ್ ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಒಂದೇ ತಿಂಗಳಲ್ಲಿ 4,000ಕ್ಕೂ ಹೆಚ್ಚು ಸ್ಥಳಗಳ ತಪಾಸಣೆ ಮಾಡಿದೆ. ಅಲ್ಲದೇ ಅಕ್ರಮ ಸಂಪರ್ಕಗಳ ವಿರುದ್ಧ ಸಮರ ಸಾರಿದೆ ಎಂದು ಜಲ ಮಂಡಳಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಡಿಸೆಂಬರ್ 20ರ ಒಂದೇ ದಿನದಲ್ಲಿ 70 ಅಕ್ರಮ ಸಂಪರ್ಕ ಕಡಿತ ಮಾಡಲಾಗಿದ್ದು, ಇದರಲ್ಲಿ ದಕ್ಷಿಣ ವಲಯದಲ್ಲಿ ಅತಿ ಹೆಚ್ಚು ಅಕ್ರಮ ಪತ್ತೆ ಮಾಡಲಾಗಿದೆ. ಅಕ್ರಮ ನೀರು ಮತ್ತು ಒಳಚರಂಡಿ ಸಂಪರ್ಕಗಳನ್ನು ಪತ್ತೆಹಚ್ಚಲು ಬೆಂಗಳೂರು ಜಲಮಂಡಳಿ ರಚಿಸಿರುವ ವಿಶೇಷ ಕಾರ್ಯಪಡೆ 'ಬ್ಲೂ ಫೋರ್ಸ್' (Blue Force), ಕಳೆದ ಒಂದು ತಿಂಗಳಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದೆ. ನಗರದಾದ್ಯಂತ ಬರೋಬ್ಬರಿ 4,000ಕ್ಕೂ ಹೆಚ್ಚು ಕಟ್ಟಡಗಳು ಮತ್ತು ಸ್ಥಳಗಳನ್ನು ತಪಾಸಣೆ ನಡೆಸಿರುವ ಪಡೆ, ನೂರಾರು ಅಕ್ರಮ ಸಂಪರ್ಕಗಳನ್ನು ಪತ್ತೆಹಚ್ಚಿ ಬಿಸಿ ಮುಟ್ಟಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರಲ್ಲಿ ಒಂದೇ ದಿನ 70 ಸಂಪರ್ಕ ಕಡಿತ
ಇನ್ನು ಬೆಂಗಳೂರಿನಲ್ಲಿ ನೀರಿನ ಅಕ್ರಮ ಸಂಪರ್ಕ ಕಡಿತ ಮಾಡಿರುವ ಬಗ್ಗೆ ಜಲ ಮಂಡಳಿ ನೀಡಿರುವ ದತ್ತಾಂಶಗಳ ಪ್ರಕಾರ, ಡಿಸೆಂಬರ್ 20, 2025 ರಂದು ಒಂದೇ ದಿನ ಬ್ಲೂ ಫೋರ್ಸ್ ತಂಡಗಳು ನಗರದ ನಾಲ್ಕು ವಲಯಗಳಲ್ಲಿ 237 ಕಟ್ಟಡಗಳಿಗೆ ಭೇಟಿ ನೀಡಿ ಪರಿಶೀಲಿ ನಡೆಸಿವೆ. ಈ ವೇಳೆ ಅಕ್ರಮವಾಗಿ ನೀರು ಬಳಸುತ್ತಿದ್ದ 70 ಸಂಪರ್ಕಗಳನ್ನು ಸ್ಥಳದಲ್ಲೇ ಕಡಿತಗೊಳಿಸಲಾಗಿದೆ.
ಬೆಂಗಳೂರಲ್ಲಿ ವಲಯವಾರ ನೀರಿನ ಸಂಪರ್ಕ ಕಡಿತ
ದಕ್ಷಿಣ ವಲಯ: ಅತಿ ಹೆಚ್ಚು ಕಾರ್ಯಾಚರಣೆ ನಡೆದಿದ್ದು, 61 ಕಟ್ಟಡಗಳ ತಪಾಸಣೆ ನಡೆಸಿ 33 ಅಕ್ರಮ ಸಂಪರ್ಕಗಳನ್ನು ಕಡಿತಗೊಳಿಸಲಾಗಿದೆ.
ಪೂರ್ವ ವಲಯ: 18 ಸಂಪರ್ಕ ಕಡಿತ.
ಪಶ್ಚಿಮ ವಲಯ: 15 ಸಂಪರ್ಕ ಕಡಿತ.
ಉತ್ತರ ವಲಯ: 4 ಸಂಪರ್ಕ ಕಡಿತ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಜಲಮಂಡಳಿ ಅಧ್ಯಕ್ಷರಾದ ಡಾ. ರಾಮ್ ಪ್ರಸಾತ್ ಮನೋಹರ್, ನೀರು ಕಳ್ಳತನ ಮತ್ತು ಅನಧಿಕೃತ ಸಂಪರ್ಕಗಳಿಂದ ಮಂಡಳಿಗೆ ಆಗುತ್ತಿರುವ ಆದಾಯ ಸೋರಿಕೆ ತಡೆಗಟ್ಟಲು ಬ್ಲೂ ಫೋರ್ಸ್ ಹಗಲಿರುಳು ಶ್ರಮಿಸುತ್ತಿದೆ. 4,000 ತಪಾಸಣೆಗಳು ಕೇವಲ ಆರಂಭವಷ್ಟೇ. ಅಕ್ರಮ ಸಂಪರ್ಕ ಹೊಂದಿರುವವರು ಕೂಡಲೇ ಸಕ್ರಮಗೊಳಿಸಿಕೊಳ್ಳಬೇಕು, ಇಲ್ಲದಿದ್ದರೆ ದಂಡ ಮತ್ತು ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು












Click it and Unblock the Notifications