Bengaluru Water Issue: ಟ್ಯಾಂಕರ್ ಮಾಫಿಯಾದಲ್ಲಿ 'ಡಿಕೆಶಿ' ಪಾತ್ರ ಶಂಕೆ: ಎಎಪಿ
ಬೆಂಗಳೂರು, ಫೆಬ್ರವರಿ 28: ಬೆಂಗಳೂರು ಸೇರಿದಂತೆ ಕರ್ನಾಟಕದ ಅನೇಕ ಕಡೆಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಇದೇ ವೇಳೆ ಟ್ಯಾಂಕ್ ಮಾಫಿಯಾ ಸಹ ತಲೆ ಎತ್ತಿದೆ. ಈ ಮಾಫಿಯಾದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಪಾತ್ರದ ಬಗ್ಗೆ ಶಂಕೆ ಮೂಡುತ್ತದೆ ಎಂದು ಆಮ್ ಆದ್ಮಿ ಪಾರ್ಟಿ ಗಂಭಿರ ಆರೋಪ ಮಾಡಿದೆ.
ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ, ಆಮ್ ಆದ್ಮಿ ಪಾರ್ಟಿ (ಎಎಪಿ) ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಅವರು, ಟ್ಯಾಂಕರ್ ಮಾಫಿಯಾದಲ್ಲಿ ಕಾರ್ಪೊರೇಟರ್ಗಳು, ಮಾಜಿ ಕಾರ್ಪೊರೇಟರ್ಗಳು, ಶಾಸಕರ ಸಂಬಂಧಿಗಳು ಮತ್ತು ಶಾಸಕರ ಹಿಂದೆ ಮುಂದೆ ತಿರುಗುವರೇ ಇದ್ದಾರೆ.

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದೆಲ್ಲವೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮೂಗಿನ ನೇರಕ್ಕೆ ನಡೆಯುತ್ತಿದ್ದರೂ ಕಂಡೂಕಾಣದಂತಿರುವುದು ಅನುಮಾನ ಹುಟ್ಟಿಸುತ್ತಿದೆ. ಮಾಫಿಯಾದಲ್ಲಿ ಶಿವಕುಮಾರ್ ಪಾತ್ರದ ಬಗ್ಗೆ ಅವರು ಅನುಮಾನ ವ್ಯಕ್ತಪಡಿಸಿದರು.
ಕೇವಲ 108 ಬೋರ್ ವೆಲ್ ಇವೆ
ಕಾವೇರಿ ನೀರಿಗೆ ಪರ್ಯಾಯವಾಗಿ ಬೆಂಗಳೂರು ಜಲಮಂಡಳಿ (BWSSB) ಏನನ್ನೂ ಮಾಡಿಲ್ಲ. ಇಡೀ ಬೆಂಗಳೂರಿನಲ್ಲಿ ಜಲಮಂಡಳಿಯ 108 ಬೋರ್ ವೆಲ್ಗಳನ್ನು ಮಾತ್ರ ಹಾಕಿಸಿದೆ ಎನ್ನುವುದು ಮಾಹಿತಿ ಹಕ್ಕು ಕಾಯ್ದೆಯಡಿ ತಿಳಿದುಬಂದಿದೆ. ಇದರರ್ಥ BWSSB ಬೆಂಗಳೂರಿಗೆ ಸಂಪೂರ್ಣವಾಗಿ ನೀರು ಸರಬರಾಜು ಮಾಡಲು ಕೆಲಸವನ್ನೇ ಮಾಡಿಲ್ಲ ಎಂದು ಅವರು ದೂರಿದರು.
ಕಾವೇರಿ ನೀರು ಬೆಂಗಳೂರಿನ ಎಲ್ಲಾ ಮನೆಗಳಿಗೂ ತಲುಪುತ್ತಿಲ್ಲ. ಬಿಬಿಎಂಪಿ ಕೂಡ 1,534 ಬೋರ್ವೆಲ್ಗಳನ್ನು ಕೊರೆಸಿದೆ. ಈ ಎರಡೂ ಸಂಸ್ಥೆಗಳು ಎಲ್ಲಾ ಮನೆಗಳಿಗೂ ನೀರು ಒದಗಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿವೆ. ಅನಧಿಕೃತ ಟ್ಯಾಂಕರ್ ಮಾಫಿಯಾದಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿವೆ ಎಂದು ತಿಳಿಸಿದರು.

ವಾಟರ್ ಟ್ಯಾಂಕ್ ಬೆಲೆ ₹600 ರಿಂದ ₹3000ಕ್ಕೆ ಜಿಗಿತ
ಟ್ಯಾಂಕರ್ ನೀರು ಸರಬರಾಜು ಅನಧಿಕೃತ, ಇದಕ್ಕೆ ಕಾನೂನಿನಲ್ಲಿ ಅನುಮತಿಯೇ ಇಲ್ಲ. ಆದರೂ ಬೆಂಗಳೂರಿನಲ್ಲಿ ನೀರು ಸರಬರಾಜು ಮಾಫಿಯಾ ತೀವ್ರವಾಗಿದೆ. ಬೇಸಿಗೆ ಆರಂಭವಾಗುವ ಮುನ್ನವೇ ₹600 ಇರಬೇಕಿದ್ದ ಟ್ಯಾಂಕರ್ ನೀರಿನ ಬೆಲೆ ₹3000 ದವರೆಗೆ ತಲುಪಿದೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಕುಡಿಯುವ ನೀರು ಅತ್ಯಗತ್ಯ ಎಷ್ಟಿದೆ ಎಂದು ಗೊತ್ತಿದೆ. ಕುಡಿಯುವ ನೀರಿದ್ದರೆ ಅಲ್ಲವೇ ಬ್ರಾಂಡ್ ಬೆಂಗಳೂರು ಮಾಡಲು ಸಾಧ್ಯ. ಸರ್ಕಾರ ಟ್ಯಾಂಕರ್ ಮಾಫಿಯಾಗೆ ಕಡಿವಾಣ ಹಾಕಬೇಕು. ಅವರಿಗೆ ತೆರಿಗೆ ವಿಧಿಸಬೇಕು. ಉಚಿತವಾಗಿ ನೀರು ಕೊಡಲು ಆಗದೇ ಇದ್ದರೂ, ಕಡಿಮೆ ಬೆಲೆಯಲ್ಲಿ ನೀರು ಕೊಡುವ ವ್ಯವಸ್ಥೆ ಮಾಡಿ. ಇಲ್ಲವಾದರೆ ನಿಮ್ಮ ಮನೆ ಬಳಿಗೆ ಬಂದು ಜನ ನೀರು ಕೊಡಿ ಎನ್ನುತ್ತಾರೆ ಎಂದು ಎಚ್ಚರಿಕೆ ನೀಡಿದರು.
ಸಹಾಯವಾಣಿ, ಆಪ್ ಮೂಲಕ ಸ್ಪಂದಿಸಿ
ನೀವೇ ಒಂದು ಮೊಬೈಲ್ ಆಪ್ ಸಿದ್ದಮಾಡಿ ಟ್ಯಾಂಕರ್ ಬುಕ್ ಮಾಡಲು ಅವಕಾಶ ಕೊಡಿ. ಸಹಾಯವಾಣಿ ಸಂಖ್ಯೆಯನ್ನು ಕೊಟ್ಟು, ಜನರ ಸಮಸ್ಯೆಗೆ ಸ್ಪಂದಿಸಿ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ನೀರಿಗಾಗಿ ದೊಡ್ಡ ಜಗಳವೇ ನಡೆದರೂ ಅಚ್ಚರಿ ಇಲ್ಲ ಎಂದು ಅವರು ವಿವರಿಸಿದರು.
ಬೆಂಗಳೂರು ನಗರಾಧ್ಯಕ್ಷರಾದ ಡಾ. ಸತೀಶ್ ಮಾತನಾಡಿ, ಜಲಮಂಡಳಿ ಅಧಿಕಾರಿಗಳು ಮತ್ತು ನಗರಾಭಿವೃದ್ಧಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 110 ಹಳ್ಳಿಗಳಿಗೆ 131 ಕೋಟಿ ರೂ.ಗಳನ್ನು ಕೊಳವೆಬಾವಿ ಕೊರೆಸಲು ಅನುದಾನ ಕೊಡುತ್ತಿರುವುದು ಸಾಕಾಗುವುದಿಲ್ಲ.
ಒಂದೊಂದು ಕ್ಷೇತ್ರದಲ್ಲಿ 50 ಕಡೆ ನೀರಿನ ಸಮಸ್ಯೆ
ಬೆಂಗಳೂರಿನಲ್ಲಿ ಕೇವಲ 150 ಸ್ಥಳಗಳಲ್ಲಿ ಮಾತ್ರ ನೀರಿನ ಸಮಸ್ಯೆ ಇದೆ ಎಂದು ಹೇಳಿಕೆ ನೀಡಿದ್ದಾರೆ. ಇದು ಸುಳ್ಳು. ಒಂದು ವಿಧಾನಸಭೆ ಕ್ಷೇತ್ರದಲ್ಲಿ 50 ಕಡೆಗಳಲ್ಲಿ ನೀರಿನ ಸಮಸ್ಯೆ ಇದೆ ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ಮಾಧ್ಯಮ ಉಸ್ತುವಾರಿ ಅನಿಲ್ ನಾಚಪ್ಪ, ಬೆಂಗಳೂರು ಸಂಘಟನಾ ಕಾರ್ಯದರ್ಶಿ ಅಶೋಕ್ ಮೃತ್ಯುಂಜಯ, ಮಹಿಳಾ ಮುಖಂಡ ಸತ್ಯವತಿ ಪಾಲ್ಗೊಂಡಿದ್ದರು.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್











Click it and Unblock the Notifications