Water Crisis: ಇನ್ಮುಂದೆ ಬೆಂಗಳೂರಿನ ಹೋಟೆಲ್& ರೆಸ್ಟೋರೆಂಟ್ಗಳಲ್ಲಿ ಈ ಬದಲಾವಣೆ
ಬೆಂಗಳೂರು, ಮಾರ್ಚ್ 14: ಬೆಂಗಳೂರಿನಲ್ಲಿ ನೀರಿನ ಅಭಾವ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಹೋಟೆಲ್ ಹಾಗೂ ರೆಸ್ಟೋರೆಂಟ್ ಉದ್ಯಮದ ಮೇಲೆ ಇದರ ನೇರ ಪರಿಣಾಮ ತಟ್ಟುತ್ತಿದೆ. ಹೋಟೆಲ್ ಹಾಗೂ ರೆಸ್ಟೋರೆಂಟ್ ಮಾಲೀಕರಿಗೆ ನೀರು ಖರೀದಿಸುವುದೇ ದುಬಾರಿಯಾಗುತ್ತಿದೆ. ಅಲ್ಲದೇ ಟ್ಯಾಂಕರ್ ನೀರು ಬುಕ್ ಮಾಡಿದರೆ ಎರಡು ಮೂರು ದಿನ ನೀರಿಗಾಗಿ ಕಾಯುವ ಪರಿಸ್ಥಿತಿ ಎದುರಾಗಿದೆ.
ಬೆಂಗಳೂರಿನ ಹಲವು ಭಾಗಗಳಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದು, ದಿನ ನಿತ್ಯದ ವ್ಯಾಪಾರದ ಜೊತೆಗೆ ನೀರಿನ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವುದು ಹೋಟೆಲ್ ಮಾಲೀಕರಿಗೆ ಸವಾಲಾಗಿದೆ. ಹೀಗಾಗಿ ನಗರದ ಹೋಟೆಲ್ ಹಾಗೂ ರೆಸ್ಟೋರೆಂಟ್ ಮಾಲೀಕರು ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಲು ಮುಂದಾಗಿದ್ದಾರೆ.

ಹೋಟೆಲ್ಗಳಿಗೆ ಈಗಿರುವ ಬೋರ್ವೆಲ್ಗಳು ಸಂಪೂರ್ಣ ಬರಿದಾಗುತ್ತಿದೆ. ಹಾಗೂ ಅವುಗಳನ್ನು ರಿಪೇರಿ ಮಾಡಿದರೂ ನಿರೀಕ್ಷಿಸಿದ ಮಟ್ಟಿನ ನೀರು ಸಿಗುವುದು ಅನುಮಾನವಾಗಿದೆ. ಹೀಗಾಗಿ ಹೊಸ ಬೋರ್ವೆಲ್ಗಳನ್ನು ತೆಗೆಯಲು ಹೋಟೆಲ್ ಹಾಗೂ ರೆಸ್ಟೋರೆಂಟ್ ಮಾಲೀಕರು ಮುಂದಾಗಿದ್ದಾರೆ.
ಹೋಟೆಲ್ಗಳಲ್ಲಿ ನೀರನ್ನು ಹಿತ-ಮಿತವಾಗಿ ಬಳಸಲು ಯೂಸ್ ಆ್ಯಂಡ್ ಥ್ರೋ ಅಂದರೆ ಬಳಸಿ ಬಿಸಾಡುವಂತಹ ಪ್ಲೇಟ್ ಹಾಗೂ ಕಪ್ಗಳನ್ನು ಬಳಸುತ್ತಿದ್ದಾರೆ. ಕೊರೊನಾ ಸಮಯದಲ್ಲಿ ಈ ರೀತಿಯ ಪ್ಲೇಟ್ಗಳನ್ನು ಬಳಸಲಾಗುತ್ತಿತ್ತು. ಇದೀಗ ನೀರಿನ ಕೊರೆತೆ ಹಿನ್ನೆಲೆಯಲ್ಲಿ ಮತ್ತೆ ಬಳಸಿ ಬಿಸಾಡುವಂತಹ ವಸ್ತುಗಳನ್ನು ಹೋಟೆಲ್ಗಳಲ್ಲಿ ಬಳಕೆ ಮಾಡಲಾಗುತ್ತಿದೆ.
ಇನ್ನು ದೊಡ್ಡ ದೊಡ್ಡ ರೆಸ್ಟೋರೆಂಟ್ಗಳಲ್ಲಿ ಈ ಕ್ರಮ ಅನುಸರಿಸಲು ಆಗುವುದಿಲ್ಲ. ಏಕೆಂದರೆ ದಿನ ನಿತ್ಯ ಸಾವಿರಾರು ಜನರು ಭೇಟಿ ನೀಡುವುದರಿಂದ ವಿಲೇವಾರಿಗೆ ಕಷ್ಟವಾಗುತ್ತದೆ. ಹಾಗೂ ಗ್ರಾಹಕರ ತೃಪ್ತಿಯೂ ಮುಖ್ಯವಾಗಿರುತ್ತದೆ. ಹೀಗಾಗಿ ರೆಸ್ಟೋರೆಂಟ್ಗಳಲ್ಲಿ ಕುಡಿಯುವ ನೀರನ್ನು ಉಳಿಸಲು ಪ್ಯಾಕೆಟ್ ಬಾಟೆಲ್ಗಳನ್ನು ಹೆಚ್ಚಾಗಿ ನೀಡಲಾಗುತ್ತಿದೆ.
ಅಲ್ಲದೇ ಗ್ರಾಹಕರು ರೆಸ್ಟೋರೆಂಟ್ಗೆ ಬಂದ ತಕ್ಷಣ ಗಾಜಿನ ಲೋಟದಲ್ಲಿ ನೀರು ಕೊಡುವುದನ್ನು ನಿಲ್ಲಿಸಲಾಗುತ್ತಿದೆ. ಏಕೆಂದರೆ ಈ ನೀರನ್ನು ಗ್ರಾಹಕರು ಸ್ವಲ್ಪ ಸೇವಿಸಿ ಉಳಿದದನ್ನು ಎಸೆಯುತ್ತಿರುವುದು ಗಮನಕ್ಕೆ ಬಂದಿದೆ. ಇನ್ನು ಕೆಲವು ರೆಸ್ಟೋರೆಂಟ್ಗಳಲ್ಲಿ ನೀರು ಕೊಡುವ ಗಾಜಿನ ಲೋಟಗಳ ಗಾತ್ರವನ್ನು ತಗ್ಗಿಸಲಾಗಿದೆ. ಚಿಕ್ಕ ಲೋಟಗಳಲ್ಲಿ ನೀರನ್ನು ನೀಡಲಾಗುತ್ತಿದೆ.
ಇನ್ನು ಹೋಟೆಲ್ ಹಾಗೂ ರೆಸ್ಟೋರೆಂಟ್ಗಳಲ್ಲಿ ಪಾತ್ರೆ ತೊಳೆಯಲು ಬಳಸಿದ ನೀರನ್ನು ಎಸೆಯದೇ ಗಿಡಗಳಿಗೆ ಹಾಕಲಾಗುತ್ತಿದೆ. ಹೀಗೆ ತಮ್ಮ ದಿನ ನಿತ್ಯದ ವ್ಯವಹಾರದಲ್ಲಿ ಸಣ್ಣ ಬದಲಾವಣೆ ಮಾಡಿಕೊಂಡು ನೀರು ಉಳಿಸಲು ನಗರದ ಹೋಟೆಲ್ ಹಾಗೂ ರೆಸ್ಟೋರೆಂಟ್ ಮಾಲೀಕರು ಮುಂದಾಗಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೇಸಿಗೆಯಲ್ಲಿ ಗ್ರಾಮೀಣ ಭಾಗದಲ್ಲಿ ಎದುರಾಗುವ ನೀರಿನ ಸಮಸ್ಯೆ ತಡೆಯಲು ಸಚಿವ ಪ್ರಿಯಾಂಕ್ ಖರ್ಗೆ ಮಾಸ್ಟರ್ ಪ್ಲಾನ್ -
Summer Alert: ಬೇಸಿಗೆಯಲ್ಲಿ ಫ್ರಿಜ್ ನೀರು ಕುಡಿಯುತ್ತಿದ್ದೀರಾ? ಮೊದಲು ಈ ವಿಷಯ ತಿಳಿದುಕೊಳ್ಳಿ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’











Click it and Unblock the Notifications