BWSSB-BBMP: ನೀರು ಪೂರೈಕೆಗೆ ನೋಂದಣಿ ಮಾಡಿಕೊಳ್ಳುವುದು ಹೇಗೆ?: ಟ್ಯಾಂಕರ್ ಮಾಲೀಕರು ಗಮನಿಸಿ
ಬೆಂಗಳೂರು, ಮಾರ್ಚ್ 02: ಉದ್ಯಾನ ನಗರಿಯಾದ ಬೆಂಗಳೂರಿನಲ್ಲಿ ದಿನೇ ದಿನೆ ಬಿಸಿಲಿನ ಕಾವು ಏರತೊಡಗಿದೆ. ಇತ್ತ ಕುಡಿಯುವ ನೀರಿಗೆ ತತ್ವಾರ ಎದುರಾಗಿದೆ. ಸಮಸ್ಯೆ ಬಗೆಹರಿಸುವ ಕ್ರಮದ ಭಾಗವಾಗಿ ವಾಟರ್ ಟ್ಯಾಂಕರ್ನಿಂದ ನೀರು ಪೂರೈಕೆ ಮಾಡುತ್ತಿದೆ. ಇನ್ನೂ ಹೆಚ್ಚಿನ ಸಂಖ್ಯೆಯ ಟ್ಯಾಂಕರ್ ಮಾಲೀಕರಿಗೆ ಸ್ವಯಂ ನೋಂದಣಿ ಮಾಡಿಕೊಳ್ಳುವಂತೆ ಬಿಬಿಎಂಪಿ ತಿಳಿಸಿದೆ.
ಹೌದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮತ್ತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಸಭೆ ನಡೆಸಿ, ಟ್ಯಾಂಕರ್ ದರ ನಿಗದಿ ಜತೆಗೆ ಟ್ಯಾಂಕರ್ ಮಾಲೀಕರಿಗೆ ನೀರು ಪೂರೈಕೆ ಮಾಡುವ ಸಲುವಾಗಿ ಆನ್ಲೈನ್ ಮೂಲಕ ಸ್ವಯಂ ನೋಂದಣಿಗೆ ಅವಕಾಶ ಕಲ್ಪಿಸಿದೆ. ಇದಕ್ಕೆ ವೆಬ್ಪೋರ್ಟಲ್ ವೊಂದನ್ನು ಹೊಸದಾಗಿ ರಚಿಸಲಾಗಿದೆ.

ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ ಶುರುವಾಗುತ್ತಿದ್ದಂತೆ ವಾಟರ್ ಟ್ಯಾಂಕರ್ ಮಾಫಿಯಾ ಶುರುವಾಗಿದೆ ಎನ್ನಲಾಗಿದೆ. ಇದರ ತಡೆಗೆ ಕೆಲವು ಕ್ರಮ ಕೈಗೊಳ್ಳಲಾಗಿದೆ. ಇದರೊಂದಿಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ನೀರಿನ ಟ್ಯಾಂಕರ್ ಗಳು ಸ್ವಯಂ ನೋಂದಣಿ ಮಾಡಿಕೊಳ್ಳುವಂತೆ ತಿಳಿಸಲಾಗಿದೆ. ಹಾಗಾದರೆ ಸ್ವಯಂ ನೋಂದಣಿ ಹೇಗೆ ಎಂಬ ಮಾಹಿತಿ ಇಲ್ಲಿ ತಿಳಿಯಿರಿ.
ವಾಟರ್ ನೋಂದಣಿ ಹೇಗೆ? ಎಲ್ಲಿ? ಮಾಹಿತಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯು ಹೊಸದಾಗಿ ಅಭಿವೃದ್ಧಿಪಡಿಸಿರುವ ಪೋರ್ಟಲ್ನಲ್ಲಿ https://bbmp.oasisweb.in/TankerManagement/SelfRegistration.aspx ಎಲ್ಲಾ ನೀರಿನ ಟ್ಯಾಂಕರ್ ಮಾಲೀಕರು ನೋಂದಣಿ ಮಾಡಿಕೊಳ್ಳಬೇಕು.

ಇದೇ ಮಾರ್ಚ್ 1ರಿಂದ 07ರವರೆಗೆ ವಾಟರ್ ಟ್ಯಾಂಕರ್ ಮಾಲೀಕರು ತಮ್ಮ ಹೆಸರು, ವಿಳಾಸ, ವಲಯ, ಪಿನ್ ಕೋಡ್, ಮೊಬೈಲ್ ಸಂಖ್ಯೆ, ಟ್ಯಾಂಕರ್ ವಾಹನದ ಸಂಖ್ಯೆ, ಬ್ಯಾಂಕರ್ ಸಾಮರ್ಥ್ಯ, ಚಾಲಕನ ಹೆಸರು, ಚಾಲಕನ ಡ್ರೈವಿಂಗ್ ಲೈಸನ್ಸ್ ಮಾಹಿತಿಗಳನ್ನು ದಾಖಲಿಸಿ ಮೇಲ್ಕಂಡ ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.
ಪ್ರಮಾಣಪತ್ರ ನಿಮ್ಮೊಂದಿಗಿರಲಿ
ಸದರಿ ಪೋರ್ಟಲ್ ಮೂಲಕ ಪಡೆಯಲಾಗಿರುವ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ವಾಹನ ಚಾಲಕರೊಂದಿಗೆ ಇಟ್ಟುಕೊಂಡಿರಬೇಕು ಎಂದು ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಸುರೋಲ್ಕರ್ ವಿಕಾಸ್ ಕಿಶೋರ್ ಅವರು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ನೀವು ಪಾಲಿಕೆ ಸಂಪರ್ಕಿಸಬಹುದಾಗಿದೆ.
ಬಿಬಿಎಂಪಿ ಎಚ್ಚರಿಕೆ
ಆದಷ್ಟು ಶೀಘ್ರವೇ ಬೆಂಗಳೂರು ಜಲಮಂಡಳಿ ಮತ್ತು ಬಿಬಿಎಂಪಿ ಸೇರಿ ವಾಟರ್ ಟ್ಯಾಂಕರ್ ನೀರಿಗೆ ಇಂತಿಷ್ಟು ದರವನ್ನು ಶೀಘ್ರವೇ ನಿಗದಿ ಮಾಡಲಿದೆ. ದರ ನಿಗದಿ ಬಳಿಕವೂ ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಎಚ್ಚರಿಕೆ ನೀಡಿದೆ.
-
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ











Click it and Unblock the Notifications