Water Shut Down: ಫೆಬ್ರವರಿ 20ರಂದು ಕಾವೇರಿ ನೀರು ಪೂರೈಕೆ ವ್ಯತ್ಯಯ: ಎಲ್ಲೆಲ್ಲಿ?
ಬೆಂಗಳೂರು ಫೆಬ್ರವರಿ 18: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ (BWSSB) ವ್ಯಾಪ್ತಿಯಲ್ಲಿ ಫೆಬ್ರವರಿ 20ರಂದು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯವಾಗಲಿದೆ. ಜಲಮಂಡಳಿಯ ಕಾವೇರಿ 4ನೇ ಹಂತ 2ನೇ ಘಟ್ಟದ ಕಾನಿಅ (ಪೂರ್ವ)1 ರ ವ್ಯಾಪ್ತಿಗೆ ಒಳಪಡುವ ಮಾರತ್ತಹಳ್ಳಿ, ಜೀವಿಕಾ ಆಸ್ಪತ್ರೆ ಸಮೀಪ 800 ಮಿ.ಮೀ. ವ್ಯಾಸದ ಹೂಡಿ ಜಿ.ಎಲ್.ಆರ್ ಒಳ ಹರಿವು ಮಾರ್ಗವನ್ನು ಸ್ಥಗಿತಗೊಳಿಸಿ ಕಾಮಗಾರಿ ನಡೆಸಲಾಗುತ್ತಿದೆ.
ಈ ಕಾರಣದಿಂದ ಗುರುವಾರ (ಫೆ.20) ದಂದ ಈ ಕೆಳಗಿನ ಪ್ರದೇಶ, ಬಡಾವಣೆಗಳಲ್ಲಿ ಬೆಳಗ್ಗೆ 09ರಿಂದ ರಾತ್ರಿ 09ರವರೆಗೆ ಸುಮಾರು 12 ಗಂಟೆಗಳ ಕಾಲ ಕಾವೇರಿ ನೀರುಪೂರೈಕೆಯಲ್ಲಿ ಕೊರತೆ ಉಂಟಾಗಿದೆ. ನೀರಿನ ಸರಬರಾಜು ಸ್ಥಗಿತದ ಪ್ರದೇಶಗಳ ವಿವರ ಹೀಗಿದೆ.

ನೀರು ಪೂರೈಕೆಯಲ್ಲಿ ವ್ಯತ್ಯಯದ ಸ್ಥಳಗಳು
ಬೆಂಗಳೂರಿನ ಮಾರತ್ತಹಳ್ಳಿ, ದೊಡ್ಡನ್ನೆಕುಂದಿ, ಮುನ್ನೆಕೊಳಲು, ಓ.ಎಂ.ಬಿ.ಆರ್. ಲೇಔಟ್, ಹೆಚ್.ಆರ್.ಬಿ.ಆರ್ ಲೇಔಟ್, ಸಿಗೇಹಳ್ಳಿ, ಬಟ್ಟರಹಳ್ಳಿ, ಮೇಡೆಹಳ್ಳಿ, ಟಿ.ಸಿ.ಪಾಳ್ಯ, ವಿಜಿನಪುರ, ಬೆಳಂದೂರು, ಯಮಲೂರು, ಮುರುಗೇಶ್ ಪಾಳ್ಯ, ಕೋಣೆನಅಗ್ರಹಾರ, ಸಿ.ವಿ.ರಾಮನ್ ನಗರ, ಇಂದ್ರನಗರ, ತಿಪ್ಪಸಂದ್ರ, ಜೀವನ್ ಭೀಮಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸಲು ಹಾಗೂ ಅಗತ್ಯವಿರುವ ನೀರನ್ನು ಶೇಖರಿಸಿಟ್ಟುಕೊಳ್ಳುವಂತೆ ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೀರು ವೇಸ್ಟ್ ಮಾಡಿದರೆ ಕಟ್ಟಿ 5000 ರೂ. ದಂಡ
ಬೆಂಗಳೂರಿನಲ್ಲಿ ಕಳೆದ ಭಾರಿ ಬೇಸಿಯಲ್ಲಿ ಇನ್ನಿಲದಂತೆ ನೀರಿಗೆ ಹಾಹಾಕಾರ ಎದುರಾಗಿತ್ತು. ಈ ಬಾರಿ ಅಂತಹ ಸಮಸ್ಯೆ ಎದುರಾಗದಂತೆ, ಅಂತರ್ಜಲ ಕುಸಿತದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗಬಹುದಾದ ನೀರಿನ ಸಮಸ್ಯೆಯನ್ನು ಸಮರ್ಪಕವಾಗಿ ನಿಭಾಯಿಸಲು BWSSB ಸಜ್ಜಾಗಿದೆ. ನೀರು ವೇಸ್ಟ್ ಮಾಡುವವರ ವಿರುದ್ಧ ಸಾವಿರಾರು ರೂ. ದಂಡ ವಿಧಿಸಲು ಜಲಮಂಡಳಿ ಸಜ್ಜಾಗಿದೆ.
ಲಭ್ಯವಿರುವ ಶುದ್ಧ ಕುಡಿಯುವ ನೀರನ್ನು ಸಮರ್ಪಕವಾಗಿ ಬಳಸುವುದು ಬಹಳ ಮುಖ್ಯವಾಗಿದೆ. ಈ ಹಿನ್ನಲೆಯಲ್ಲಿ ಕುಡಿಯುವ ನೀರನ್ನು ಸಾರ್ವಜನಿಕರು ವ್ಯರ್ಥವಾಗಿ ಬಳಸುವುದನ್ನು ತಪ್ಪಿಸಲು, ಕುಡಿಯುವ ನೀರು ಪೋಲು ಮಾಡುವವರ ವಿರುದ್ದ ದಂಡ ವಿಧಿಸಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಮುಂದಾಗಿದೆ. ಈ ಕುರಿತು ಬೆಂಗಳೂರು ಜಲಮಂಡಳಿಯ ಅಧ್ಯಕ್ಷರಾದ ಡಾ.ರಾಮ್ ಪ್ರಸಾತ್ ಮನೋಹರ್ ಆದೇಶಿಸಿದ್ದಾರೆ.
ಈ ಆದೇಶದಲ್ಲಿ ಕುಡಿಯುವ ನೀರನ್ನು ಗಾಡಿ ತೊಳೆಯಲು, ಗಾರ್ಡನ್ ಬಳಕೆ ಇನ್ನಿತರ ಅನವಶ್ಯಕೆ ಬಳಕೆಗೆ ಉಪಯೋಗಿ ವ್ಯರ್ಥಗೊಳಿಸಿದರೆ ಅಂಥವರಿಗೆ 5000 ರೂಪಾಯಿ ದಂಡಿ ವಿಧಿಸಲಾಗುತ್ತದೆ. ಇದೇ ತಪ್ಪು ಪುನರಾವರ್ತನೆ ಆದರೆ 500 ರೂ. ಹೆಚ್ಚುವರಿ ವಿಧಿಸಬೇಕಾಗುತ್ತದೆ ಎಂದು ಜಲಮಂಡಳಿ ಅಧ್ಯಕ್ಷರು ಆದೇಶ ಜನತೆ ಎಚ್ಚರಿಕೆ ನೀಡಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications