ಬೆಂಗಳೂರಿನ ಈ ಪ್ರದೇಶಗಳಲ್ಲಿ ಫೆ.26ರಂದು 24 ಗಂಟೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ: BWSSB
ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ಕಾವೇರಿ 5ನೇ ಹಂತದ ಗೊಟ್ಟಿಗೆರೆ ಜಲಸಂಗ್ರಹಗಾರದ ಸಮೀಪ ಇಎಂಎಫ್ ಮೀಟರ್ಗಳನ್ನು ಅಳವಡಿಸುವ ಕಾಮಗಾರಿ ನಡೆಸಲಾಗುತ್ತಿದೆ. ಈ ಸಂಬಂಧ ನಗರದ ಫೆಬ್ರವರಿ 26ರಂದು (ಗುರುವಾರ) ಬೆಳಗ್ಗೆ 6 ರಿಂದ ಫೆ.27(ಶುಕ್ರವಾರ)ರ ಬೆಳಗ್ಗೆ 6ರವರೆಗೆ 24 ಗಂಟೆಗಳ ಕಾಲ ಕುಡಿಯುವ ಕಾವೇರಿ ನೀರು ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಈ ಕುರಿತು ಅಧಿಕೃತ ಮಾಹಿತಿಯನ್ನು ಮಂಗಳವಾರ ನೀಡಿದೆ. ಜಲಮಂಡಳಿ ಗ್ರಾಹಕರು ಅಂದು ಅಗತ್ಯ ನೀರಿನ ಸಂಗ್ರಹ ಮಾಡಿಟ್ಟುಕೊಳ್ಳುವಂತೆ ಮನವಿ ಮಾಡಿದೆ. ಜೊತೆಗೆ ನೀರು ಪೂರೈಕೆಯಲ್ಲಿ ಆಗುವ ಅಡಚಣೆಗೆ ಸಹಕರಿಸುವಂತೆ ಕೋರಿದೆ. ನೀರು ಕಡಿತವಾಗಲಿರುವ ಪ್ರದೇಶಗಳ ವಿವರ ಇಲ್ಲಿದೆ.

ನೀರಿನ ಪೂರೈಕೆಯ ವ್ಯತ್ಯಯದ ಸ್ಥಳಗಳ ವಿವರ ಹೀಗಿದೆ
ವೈಟ್ಫೀಲ್ಡ್, ನೆಲ್ಲೂರಹಳ್ಳಿ, ಸಿದ್ದಾಪುರ, ನಾಗೊಂಡನಹಳ್ಳಿ, ರಾಮಗೊಂಡನಹಳ್ಳಿ, ಚನ್ನಸಂದ್ರ, ಹೂಡಿ, ಗರುಡಾಚಾರ್ ಪಾಳ್ಯ, ದೊಡ್ಡನೆಕುಂದಿ, ಮುನೆಕೊಳಲು, ಕುಮಾರಸ್ವಾಮಿ ಬಡಾವಣೆ, ಪೂರ್ಣಪ್ರಜ್ಞಾ ಬಡಾವಣೆ, ಬನಶಂಕರಿ, ಕೊಲ್ಲಹಳ್ಳಿ, ಅಂಜನಾಪುರ, ಗೊಟ್ಟಿಗೆರೆ, ಬೇಗೂರು, ಕೊಡಿಚಿಕ್ಕನಹಳ್ಳಿ, ಕೂಡ್ಲು, ಕಾಡುಗೋಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಕಾವೇರಿ ನೀರು ಸರಬರಾಜು ಯೋಜನೆಯ ಜಲರೇಚಕ ಯಂತ್ರಗಾರಗಳ ಸ್ಥಗಿತತೆಯಿಂದ ಕಾವೇರಿ ನೀರು ಸರಬರಾಜಿನಲ್ಲಿ ತಾತ್ಕಾಲಿಕವಾಗಿ ವ್ಯತ್ಯಯವಾಗಲಿದೆ. ನಾಗರಿಕರು ಮುಂಜಾಗ್ರತೆ ವಹಿಸುವಂತೆ ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಪ್ರಕಟಣೆಯಲ್ಲಿ ವಿನಂತಿಸಿಕೊಂಡಿದ್ದಾರೆ.
ಸ್ವಚ್ಛತಾ ಏಜೆನ್ಸಿಗಳ ನೋಂದಣಿ ಕಡ್ಡಾಯ
ನಗರದಲ್ಲಿ ಖಾಸಗಿ ಮ್ಯಾನ್ಹೋಲ್ ಮತ್ತು ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು (STP) ಸ್ವಚ್ಛಗೊಳಿಸುವ ಎಲ್ಲ ಖಾಸಗಿ ಏಜೆನ್ಸಿಗಳು ಮತ್ತು ವಾಹನಗಳ ನೋಂದಣಿಯನ್ನು ಬೆಂಗಳೂರು ಜಲಮಂಡಳಿ (BWSSB) ಕಡ್ಡಾಯಗೊಳಿಸಿದೆ. ಈ ಸಂಬಂಧ ಅಧಿಕಾರಿಗಳಿಗೆ ಜಲಮಂಡಳಿಯು ಅಗತ್ಯ ಸೂಚನೆಗಳನ್ನು ನೀಡಿದೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾಯ್ದೆ 1964ರ ಸೆಕ್ಷನ್ 84 ಮತ್ತು 88ರ ಅಡಿಯಲ್ಲಿ ಈ ಹಿಂದೆ ನೀಡಲಾಗಿದ್ದ ಅಧಿಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಲಮಂಡಳಿ ಅಧ್ಯಕ್ಷರು ಎಲ್ಲಾ ಕಾರ್ಯಪಾಲಕ ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಕಟ್ಟುನಿಟ್ಟಾಗಿ ನಿರ್ದೇಶಿಸಿದೆ.
ಒಂದು ವೇಳೆ ನೋಂದಾಯಿಸದೇ ಅಥವಾ ಅನಧಿಕೃತ ವ್ಯಕ್ತಿಗಳ ಮೂಲಕ ಸ್ವಚ್ಛತಾ ಕಾರ್ಯ ಕೈಗೊಂಡ ಸಂದರ್ಭದಲ್ಲಿ ಕಾರ್ಮಿಕರಿಗೆ ಅನಾಹುತಗಳಿಗೆ ತುತ್ತಾದಲ್ಲಿ ಆಯಾ ವಾಣಿಜ್ಯ ಕಟ್ಟಡ, ವಸತಿ ಸಮುಚ್ಚಯ, ಖಾಸಗಿ ಬಡಾವಣೆಗಳ ಮಾಲೀಕರು ಇಲ್ಲವೇ ನಿವಾಸಿಗಳ ಕಲ್ಯಾಣಾಭಿವೃದ್ಧಿ ಸಂಘ (RWA) ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಜಲಮಂಡಳಿ ಎಚ್ಚರಿಕೆ ನೀಡಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications