ಪ್ರಧಾನಿ ಮೋದಿ ಗಮನ ಸೆಳೆದ ಬೆಂಗಳೂರಿನ ಬಾಲಕ
ಬೆಂಗಳೂರು, ಅ.15: ಬೆಂಗಳೂರಿನ ಕಸದ ಸಮಸ್ಯೆಯ ನಂತರ ಟ್ರಾಫಿಕ್ ಸಮಸ್ಯೆ ಈಗ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ನಗರದ ಎಂಟು ವರ್ಷದ ಬಾಲಕ ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಗಮನವನ್ನು ಸೆಳೆದಿದ್ದಾನೆ. ಬಾಲಕನ ಪತ್ರಕ್ಕೆ ಓಗೊಟ್ಟಿರುವ ಪ್ರಧಾನಿ ಅವರು ಸೂಕ್ತ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬೆಂಗಳೂರಿನಲ್ಲಿ ಪ್ರತಿನಿತ್ಯ ಸಾವಿರಾರು ಸಂಖ್ಯೆಯ ವಾಹನ ಸವಾರರು ಸಂಚಾರ ದಟ್ಟಣೆಯಲ್ಲಿ ಸಿಲುಕಿ ನರಳುತ್ತಿದ್ದಾರೆ. ಶಾಲೆ, ಕಚೇರಿಗೆ ಸರಿಯಾದ ಸಮಯಕ್ಕೆ ಹೋಗಿ ಬರಲು ಆಗುತ್ತಿಲ್ಲ. ಈ ಬಗ್ಗೆ ಕೂಡಲೇ ಗಮನ ಹರಿಸಿ, ಪರಿಹಾರ ಸೂಚಿಸಿ ಎಂದು ಅಭಿನವ್ ಎಂಬ ಬಾಲಕ ಪ್ರಧಾನಿ ಸಚಿವಾಲಯಕ್ಕೆ ಪತ್ರ ಬರೆದಿದ್ದಾನೆ.

ಯಶವಂತಪುರದ ನ್ಯಾಷನಲ್ ಪಬ್ಲಿಕ್ ಸ್ಕೂಲಿನ ಮೂರನೇ ತರಗತಿಯ ವಿದ್ಯಾರ್ಥಿ ಅಭಿನವ್ ಅವರು ಪ್ರಧಾನಿ ಕಾರ್ಯಾಲಯಕ್ಕೆ ಬರೆದ ಪತ್ರದಲ್ಲಿ ವಾಯವ್ಯಬೆಂಗಳೂರಿನ ಪ್ರಮುಖ ಜಂಕ್ಷನ್ವೊಂದರಲ್ಲಿ ಪದೇಪದೇ ಟ್ರಾಫಿಕ್ಜಾಮ್ ಸಂಭವಿಸುತ್ತಿದೆ ಎಂದು ವಿವರಿಸಿದ್ದಾನೆ. ನಾನು ವಿದ್ಯಾರಣ್ಯಪುರದ ದೊಡ್ಡಬೊಮ್ಮಸಂದ್ರದ ಬಳಿ ವಾಸವಾಗಿದ್ದೇನೆ ನನ್ನ ಮನೆಯಿಂದ ಶಾಲೆಗೆ 3 ಕಿ.ಮೀ ಮಾತ್ರ ದೂರವಿದೆ. ಅದರೆ, ಶಾಲೆ ತಲುಪಲು 45 ನಿಮಿಷ ಬೇಕಾಗುತ್ತದೆ.
The Prime Minister's Office has acted on the letter of Abhinav, an eight-year-old boy from Bengaluru who had... http://t.co/d8Nqu47Qrv
— BIJAYANANDA MISHRA (@bnm1951) October 14, 2015 ಟ್ರಾಫಿಕ್ ಜಾಮ್ ಪ್ರಯಾಣಿಕರ, ವಾಹನ ಸವಾರರ ತಾಳ್ಮೆ ಪರೀಕ್ಷಿಸುತ್ತಿದೆ ಎಂದು ದೂರಿದ್ದಾನೆ. ಟ್ರಾಫಿಕ್ಜಾಮ್, ಜನರ ಆರೋಗ್ಯ, ನನ್ನ ಕಲಿಕೆಗೆ ತೊಂದರೆಯಾಗುತ್ತಿದೆ.
ಗೋರಗುಂಟೆಪಾಳ್ಯಜಂಕ್ಷನ್ನ ಸಮೀಪದ ಹೊರ ರಿಂಗ್ರೋಡ್ನ್ನು ಹಾದು ಹೋಗುವ ರೈಲುಮಾರ್ಗದ ಮೇಲೆ ನಿರ್ಮಾಣವಾಗುತ್ತಿರುವ ಫ್ಲೈಓವರ್ನಿಂದಾಗಿ ಟ್ರಾಫಿಕ್ಜಾಮ್ ಉಂಟಾಗುತ್ತಿದೆ. ಎಂದು ಉಲ್ಲೇಖಿಸಿದ್ದಾನೆ.
@pmoindia acted on the letter of 8 year abhinav, Bengaluru who petitioned PM Narendra Modi abt 'incomplete flyover' leading to traffic jams.
— Kaushal Jain (@kKaushaljain) October 14, 2015 ಬಾಲಕನ ಪತ್ರದ ಬಗ್ಗೆ ಪರಿಶೀಲನೆ ನಡೆಸುವಂತೆ ರೈಲ್ವೆ ಇಲಾಖೆಗೆ ಪ್ರಧಾನಿ ಸಚಿವಾಲಯ ಸೂಚನೆನೀಡಿದೆ. ರಕ್ಷಣಾ ಇಲಾಖೆಯಿಂದ ಅನುಮತಿ ಪಡೆಯಲು ವಿಳಂಬವಾದ ಹಿನ್ನೆಲೆಯಲ್ಲಿ ಫ್ಲೈಓವರ್ ನಿರ್ಮಾಣ ಪ್ರಗತಿ ಕಾಣದೆ ಕುಂಠಿತವಾಗುತ್ತಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications