ಫಾತಿಮಾ ಎಂಬ ಮುಗ್ಧ ಬಾಲಕಿಯ ಹೃದಯ ಹಿಂಡುವ ಕಥೆ!
ಹೃದಯಕ್ಕೆ ಹತ್ತಿರವಾಗುವ ಈ ಡಾಕ್ಯುಮೆಂಟರಿಯನ್ನು ನೀವು ನೋಡಲೇಬೇಕು. ಬಾಲ ಕಾರ್ಮಿಕ ಪದ್ಧತಿ ಮತ್ತು ಅದರಿಂದ ಒದಗುವ ದುಷ್ಪರಿಣಾಮ, ಪದ್ಧತಿ ಮಕ್ಕಳ ಮನಸ್ಸಿನಲ್ಲಿ ಉಂಟುಮಾಡುವ ನಿರಾಶಾವಾದ ಎಲ್ಲವನ್ನು ಆಧಾರವಾಗಿಟ್ಟುಕೊಂಡು ಬೆಂಗಳೂರಿನ ಎನ್ ಜಿಒ ವೊಂದು ತಯಾರು ಮಾಡಿರುವ " Forgotten On the Pyjama Trail" ಚಿತ್ರವನ್ನು ನೋಡಲೇಬೇಕು.
ಜೂನ್ 12 ರಂದು ಡಾಕ್ಯುಮೆಂಟರಿಯನ್ನು ಬಿಡುಗಡೆ ಮಾಡಲಾಗಿದೆ. ಮಕ್ಕಳ ಹಕ್ಕು ಕಾಪಾಡಲು ಶ್ರಮಿಸುತ್ತಿರುವ ಬೆಂಗಳೂರು ಮೂಲದ ಎನ್ ಜಿಒ Concerned for Working Children (CWC) ಈ ಸಾಕ್ಷ್ಯಚಿತ್ರವನ್ನು ತಯಾರು ಮಾಡಿದೆ.[ಲೋಕ ಜಂಗಮ: ಸಿದ್ದಗಂಗಾಶ್ರೀ ಸಾಕ್ಷ್ಯಚಿತ್ರ ಲೋಕಾರ್ಪಣೆ]

ಚಿಕ್ಕ ಮಗುವೊಂದು ತನ್ನ ಕತೆಯನ್ನು ಹೇಳುತ್ತಾ ಸಾಗುತ್ತದೆ. ಮೊರಾಕೊದಲ್ಲಿ ನಡೆಯುವ ಘಟನೆಗಳನ್ನು ಆಧಾರವಾಗಿ ಇಟ್ಟುಕೊಂಡು ಚಿತ್ರ ತಯಾರು ಮಾಡಲಾಗಿದೆ.
ತನ್ನ ಕುಟುಂಬವನ್ನು ನಿರ್ವಹಣೆ ಮಾಡಲು ಮೋರಾಕೊದ ಗಾರ್ಮೆಂರ್ಟ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ಅನಿವಾರ್ಯಕ್ಕೆ ಸಿಕ್ಕಿಹಾಕಿಕೊಳ್ಳುವ ಪುಟ್ಟ ಹೆಣ್ಣು ಮಗು ತನ್ನ ಕತೆಯನ್ನು ಹೇಳುತ್ತಾ ಸಾಗುತ್ತದೆ. ಈ ಹಿಂದೆ ಅಂದರೆ 2012, 13 ಮತ್ತು 14 ರಲ್ಲಿ ಎನ್ ಜಿಒ ತಯಾರು ಮಾಡಿದ್ದ ಚಿತ್ರಗಳು ನೋಬೆಲ್ ಅಂಗಳಕ್ಕೂ ಹೋಗಿದ್ದವು.[ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಏನು ಮಾಡಬಹುದು?]

ಫಾತಿಮಾ ಎಂಬ ಬಾಲಕಿಯ ಕತೆಯೇ ಇಡಿ ಚಿತ್ರದ ಜೀವಾಳ. ಬಾಲ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆ, ಕಂಪನಿ ಯಾವುದಾದರೊಂದು ಹೊಸ ನಿರ್ಧಾರ ತೆಗೆದುಕೊಳ್ಳುವ ವೇಳೆ ಬಾಲ ಕಾರ್ಮಿಕರ ಅಭಿಪ್ರಾಯ ಕೇಳದಿರುವುದು, ಬಾಲ ಕಾರ್ಮಿಕರ ಮೇಲೆ ಕಂಪನಿಯ ನಿರ್ಧಾರಗಳು ಬೀರುವ ಪರಿಣಾಮ, ಅವರ ಮನಸ್ಸಿನಲ್ಲಿ ಉಂಟಾಗುವ ನಿರಾಶಾವಾದ.. ಎಲ್ಲವನ್ನು ಚಿತ್ರ ಕಟ್ಟಿಕೊಡುತ್ತಾ ಸಾಗುತ್ತದೆ.
ಈ ಸಾಕ್ಷ್ಯ ಚಿತ್ರ ಮತ್ತೊಮ್ಮೆ ಬಾಲಕಾರ್ಮಿಕ ಪದ್ಧತಿ ಬಗ್ಗೆ ಪ್ರಶ್ನೆ ಎತ್ತಿಹಾಕುತ್ತದೆ. ಇಡೀ ಪ್ರಪಂಚವನ್ನೇ ಕಾಡುತ್ತಿರುವ ಸಮಸ್ಯೆಗೆ ಪರಿಹಾರದ ಸೂತ್ರಗಳನ್ನು ಕಂಡು ಹಿಡಿಯಲು ನಮ್ಮನ್ನು ಆಲೋಚನೆಗೆ ಹಚ್ಚುತ್ತದೆ. ನೀವು ಸಾಕ್ಷ್ಯ ಚಿತ್ರವನ್ನು ಒಮ್ಮೆ ನೋಡಿಕೊಂಡು ಬನ್ನಿ...
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications