ಬೆಂಗಳೂರಲ್ಲಿ ಮಿಡಿದ ಮತ್ತೊಂದು ಜೀವಂತ ಹೃದಯ
ಬೆಂಗಳೂರು, ಜೂನ್ 01 : ಉದ್ಯಾನ ನಗರಿ ಬೆಂಗಳೂರು ಬುಧವಾರ ಮತ್ತೊಂದು ಜೀವಂತ ಹೃದಯ ಸಾಗಣೆಗೆ ಸಾಕ್ಷಿಯಾಗಿದೆ. ಮೆದುಳು ನಿಷ್ಕ್ರೀಯಗೊಂಡಿದ್ದ ಆಟೋ ಚಾಲಕ ಹೃದಯ, ಕಣ್ಣು, ಕಿಡ್ನಿಗಳನ್ನು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾನೆ.
ವಿಕ್ಟೋರಿಯಾ ಆಸ್ಪತ್ರೆಯಿಂದ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಜೀವಂತ ಹೃದಯ ಸಾಗಣೆ ಮಾಡಲು ಬೆಂಗಳೂರು ಸಂಚಾರಿ ಪೊಲೀಸ್ ಗ್ರೀನ್ ಕಾರಿಡಾರ್ ವ್ಯವಸ್ಥೆ ಮಾಡಿದ್ದರು. 11 ನಿಮಿಷಗಳಲ್ಲಿ ಜೀವಂತ ಹೃದಯವನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ಸಾಗಣೆ ಮಾಡಲಾಗಿದೆ. [8 ಜನರ ಬದುಕಿಗೆ ಆಶಾಕಿರಣವಾದ ಬೆಂಗಳೂರು ಯುವಕ]

4 ದಿನಗಳ ಹಿಂದೆ ರಾಮನಗರದಲ್ಲಿ ನಡೆದಿದ್ದ ಅಪಘಾತದಲ್ಲಿ ಅಭಿಷೇಕ್ (23) ಗಂಭೀರವಾಗಿ ಗಾಯಗೊಂಡಿದ್ದರು. ಮೂಲತಃ ಮೈಸೂರಿನವರಾದ ಅಭಿಷೇಕ್ ಬೆಂಗಳೂರಿನ ಕಸ್ತೂರಿ ನಗರದಲ್ಲಿ ವಾಸವಾಗಿದ್ದರು. ಜೀವನೋಪಾಯಕ್ಕಾಗಿ ಆಟೋ ಓಡಿಸುತ್ತಿದ್ದರು.[ಸಾವಿನ ಬಳಿಕ ಮತ್ತೊಂದು ಜೀವಕ್ಕೆ ಚೇತನ ತುಂಬಿದ ಚೇತನ್]
ಅಪಘಾತದಲ್ಲಿ ಗಾಯಗೊಂಡು ಮೆದುಳು ನಿಷ್ಕ್ರೀಯಗೊಂಡಿದ್ದ ಅಭಿಷೇಕ್ ಅಂಗಾಂಗಗಳನ್ನು ದಾನ ಮಾಡಲು ಕುಟುಂಬದವರು ಒಪ್ಪಿಗೆ ನೀಡಿದ್ದರು. ಇಂದು ಬೆಳಗ್ಗೆ ಶಸ್ತ್ರ ಚಿಕಿತ್ಸೆ ನಡೆಸಿ, ಸಂಚಾರಿ ಪೊಲೀಸರ ಸಹಕಾರದಿಂದ ಜೀವಂತ ಹೃದಯವನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಸಾಗಣೆ ಮಾಡಲಾಯಿತು. [ಅಂಗಾಂಗ ದಾನ ಮಾಡಿ ನಾಲ್ವರಿಗೆ ಮರು ಜೀವ ನೀಡಿದರು]
ಅಭಿಷೇಕ್ ಅವರ ಹೃದಯವನ್ನು 47 ವರ್ಷದ ಛಾಯಾ ಎಂಬುವರಿಗೆ ಕಸಿ ಮಾಡುವಲ್ಲಿ ಎಂ.ಎಸ್. ರಾಮಯ್ಯ, ನಾರಾಯಣ ಹೃದಯಾಲಯದ ವೈದ್ಯರು ಯಶಸ್ವಿ ಯಾಗಿದ್ದಾರೆ.
ಹೃದಯ ಹೊತ್ತ ಆಂಬ್ಯುಲೆನ್ಸ್ ಸಾಗಿದ ವಿಡಿಯೋ
ಹೃದಯ ದಾನ ಪ್ರಕರಣಗಳು
* 2014ರಲ್ಲಿ ಎರಡು ಬಾರಿ ಬೆಂಗಳೂರಿನಿಂದ ಚೆನ್ನೈಗೆ ಜೀವಂತ ಹೃದಯವನ್ನು ಸಾಗಣೆ ಮಾಡಲಾಗಿತ್ತು
* 2015ರ ಜನವರಿಯಲ್ಲಿ ಎಂಎಸ್ ರಾಮಯ್ಯ ಆಸ್ಪತ್ರೆಯಿಂದ ಬಿಜಿಎಸ್ ಆಸ್ಪತ್ರೆಗೆ ಹೃದಯ ಸಾಗಣೆ ಮಾಡಲಾಗಿತ್ತು
* 2015ರ ಫೆ. 28ರಂದು ಬೆಂಗಳೂರಿನಿಂದ ಹೈದರಾಬಾದ್ ಜೀವಂತ ಹೃದಯವನ್ನು ಸಾಗಣೆ ಮಾಡಲಾಗಿತ್ತು
* 2015ರ ಏ.13ರಂದು ಮಂಗಳೂರಿನಿಂದ ಜೀವಂತ ಹೃದಯವನ್ನು ಬಿಜಿಎಸ್ ಆಸ್ಪತ್ರೆಗೆ ತೆಗೆದುಕೊಂಡು ಬರಲಾಗಿತ್ತು
* 2015ರ ಜುಲೈ 23ರಂದು ಚೇತನ್ ಹೃದಯವನ್ನು ದಾನ ಮಾಡಿದ್ದರು
* 2015ರ ಜುಲೈ 26ರಂದು ಇಳವರಸನ್ ಹೃದಯ ದಾನ ಮಾಡಿದ್ದರು
-
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications