ಸಾವಿನ ಬಳಿಕ ಮತ್ತೊಂದು ಜೀವಕ್ಕೆ ಚೇತನ ತುಂಬಿದ ಚೇತನ್
ಬೆಂಗಳೂರು, ಜುಲೈ 23 : ಉದ್ಯಾನ ನಗರಿ ಬೆಂಗಳೂರು ಗುರುವಾರ ಮತ್ತೊಂದು ಜೀವಂತ ಹೃದಯ ಸಾಗಣೆಗೆ ಸಾಕ್ಷಿಯಾಯಿತು. ಅಪಘಾತದಲ್ಲಿ ಗಾಯಗೊಂಡಿದ್ದ 22 ವರ್ಷದ ಚೇತನ್ ಹೃದಯವನ್ನು ದಾನ ಮಾಡಿ ಮೊತ್ತೊಬ್ಬರ ಜೀವವನ್ನು ಉಳಿಸಿದ್ದಾರೆ. ಬೆಂಗಳೂರು ಸಂಚಾರಿ ಪೊಲೀಸರು ಜೀವಂತ ಹೃದಯ ಸಾಗಣೆಗೆ ಸಹಕಾರ ನೀಡಿದ್ದಾರೆ.
ಗುರುವಾರ ಬೆಳಗ್ಗೆ 8.30ರಿಂದ 9.30ರ ನಡುವೆ ಬನ್ನೇರುಘಟ್ಟ ರಸ್ತೆಯ ಸಾಗರ್ ಆಸ್ಪತ್ರೆಯಿಂದ ಹೊಸೂರು ರಸ್ತೆಯಲ್ಲಿರುವ ನಾರಾಯಣ ಹೃದಯಾಲಯಕ್ಕೆ ಜೀವಂತ ಹೃದಯ ತೆಗೆದುಕೊಂಡು ಹೋಗಲಾಯಿತು. [ಮಡಿದ ಜೀವನ್ ಫರ್ನಾಂಡೀಸ್ ಆತ್ಮ ಅಮರ]

ಬೆಂಗಳೂರು ಸಂಚಾರಿ ಪೊಲೀಸರು ಗ್ರೀನ್ ಕಾರಿಡಾರ್ ಮೂಲಕ ಹೃದಯ ತೆಗೆದುಕೊಂಡು ಹೋಗಲು ಸಿಗ್ನಲ್ ಫ್ರೀ ವ್ಯವಸ್ಥೆ ಮಾಡಿದ್ದರು. ಪಿ.ಗೋಪಾಲನ್ ಎನ್ನುವವರು ಸಾಗರ್ ಆಸ್ಪತ್ರೆಯಿಂದ ಜೀವಂತ ಹೃದಯ ಹೊತ್ತ ಆಂಬ್ಯುಲೆನ್ಸ್ಅನ್ನು ಸುಮಾರು 20 ನಿಮಿಷದಲ್ಲಿ ನಾರಾಯಣ ಹೃದಯಾಲಯಕ್ಕೆ ತೆಗೆದುಕೊಂಡು ಹೋದರು. [ಕುಡ್ಲದಲ್ಲಿ ಮಿಡಿದ ಜೀವಂತ ಹೃದಯ ಬೆಂಗಳೂರಿಗೆ]
ಹೃದಯದಾನ ಮಾಡಿದ ಚೇತನ್ : ಮಂಡ್ಯ ಮೂಲದ 22 ವರ್ಷದ ಚೇತನ್ ಹೃದಯವನ್ನು ದಾನ ಮಾಡಿ ಮತ್ತೊಬ್ಬರ ಜೀವವನ್ನು ಉಳಿಸಿದ್ದಾರೆ. ಬೆಂಗಳೂರು ಹೊರವಲಯದ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಚೇತನ್ ಕೆಲಸ ಮಾಡುತ್ತಿದ್ದರು. ಜುಲೈ 15ರಂದು ಕೆಲಸ ಮಾಡುವಾಗ ಯಂತ್ರಗಳ ನಡುವೆ ಸಿಲುಕಿ ಚೇತನ್ ಗಾಯಗೊಂಡಿದ್ದರು.
ಎರಡು ದಿನಗಳ ನಂತರ ಅವರು ಮೆದುಳು ನಿಷ್ಕ್ರಿಯವಾಗಿದೆ ಎಂದು ವೈದ್ಯರು ಘೋಷಿದರು. 2014ರಲ್ಲಿ ಬೆಂಗಳೂರಿನಿಂದ ಚೆನ್ನೈಗೆ ಜೀವಂತ ಹೃದಯ ಸಾಗಣೆ ಮಾಡಿದ್ದನ್ನು ಕೇಳಿದ್ದ ಚೇತನ್ ತಂದೆ ರಾಮಣ್ಣ ಅವರು ಮಗನ ಹೃದಯವನ್ನು ದಾನ ಮಾಡಲು ಒಪ್ಪಿಗೆ ನೀಡಿದ್ದರು. ಅದರಂತೆ ಇಂದು ಬೆಳಗ್ಗೆ ಬೆಂಗಳೂರು ಸಂಚಾರಿ ಪೊಲೀಸರ ನೆರವಿನೊಂದಿಗೆ ಜೀವಂತ ಹೃದಯ ಸಾಗಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಜೀವಂತ ಹೃದಯ ಸಾಗಣೆ ಇದು ಹೊಸದೇನಲ್ಲ ಈಗಾಗಲೇ ಹಲವಾರು ಬಾರಿ ಇಂತಹ ಪ್ರಯತ್ನಗಳು ಯಶಸ್ವಿಯಾಗಿ ನಡೆದಿವೆ.
* 2014ರಲ್ಲಿ ಎರಡು ಬಾರಿ ಬೆಂಗಳೂರಿನಿಂದ ಚೆನ್ನೈಗೆ ಜೀವಂತ ಹೃದಯವನ್ನು ಸಾಗಣೆ ಮಾಡಲಾಗಿತ್ತು.
* 2015ರ ಜನವರಿಯಲ್ಲಿ ಎಂಎಸ್ ರಾಮಯ್ಯ ಆಸ್ಪತ್ರೆಯಿಂದ ಬಿಜಿಎಸ್ ಆಸ್ಪತ್ರೆಗೆ ಹೃದಯ ಸಾಗಣೆ ಮಾಡಲಾಗಿತ್ತು.
* 2015 ಫೆ. 28ರಂದು ಬೆಂಗಳೂರಿನಿಂದ ಹೈದರಾಬಾದ್ ಜೀವಂತ ಹೃದಯವನ್ನು ಸಾಗಣೆ ಮಾಡಲಾಗಿತ್ತು
* 2015 ಏ.13ರಂದು ಮಂಗಳೂರಿನಿಂದ ಜೀವಂತ ಹೃದಯವನ್ನು ಬಿಜಿಎಸ್ ಆಸ್ಪತ್ರೆಗೆ ತೆಗೆದುಕೊಂಡು ಬರಲಾಗಿತ್ತು.
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ












Click it and Unblock the Notifications