ಸಾವಿನ ಬಳಿಕ ಮತ್ತೊಂದು ಜೀವಕ್ಕೆ ಚೇತನ ತುಂಬಿದ ಚೇತನ್
ಬೆಂಗಳೂರು, ಜುಲೈ 23 : ಉದ್ಯಾನ ನಗರಿ ಬೆಂಗಳೂರು ಗುರುವಾರ ಮತ್ತೊಂದು ಜೀವಂತ ಹೃದಯ ಸಾಗಣೆಗೆ ಸಾಕ್ಷಿಯಾಯಿತು. ಅಪಘಾತದಲ್ಲಿ ಗಾಯಗೊಂಡಿದ್ದ 22 ವರ್ಷದ ಚೇತನ್ ಹೃದಯವನ್ನು ದಾನ ಮಾಡಿ ಮೊತ್ತೊಬ್ಬರ ಜೀವವನ್ನು ಉಳಿಸಿದ್ದಾರೆ. ಬೆಂಗಳೂರು ಸಂಚಾರಿ ಪೊಲೀಸರು ಜೀವಂತ ಹೃದಯ ಸಾಗಣೆಗೆ ಸಹಕಾರ ನೀಡಿದ್ದಾರೆ.
ಗುರುವಾರ ಬೆಳಗ್ಗೆ 8.30ರಿಂದ 9.30ರ ನಡುವೆ ಬನ್ನೇರುಘಟ್ಟ ರಸ್ತೆಯ ಸಾಗರ್ ಆಸ್ಪತ್ರೆಯಿಂದ ಹೊಸೂರು ರಸ್ತೆಯಲ್ಲಿರುವ ನಾರಾಯಣ ಹೃದಯಾಲಯಕ್ಕೆ ಜೀವಂತ ಹೃದಯ ತೆಗೆದುಕೊಂಡು ಹೋಗಲಾಯಿತು. [ಮಡಿದ ಜೀವನ್ ಫರ್ನಾಂಡೀಸ್ ಆತ್ಮ ಅಮರ]

ಬೆಂಗಳೂರು ಸಂಚಾರಿ ಪೊಲೀಸರು ಗ್ರೀನ್ ಕಾರಿಡಾರ್ ಮೂಲಕ ಹೃದಯ ತೆಗೆದುಕೊಂಡು ಹೋಗಲು ಸಿಗ್ನಲ್ ಫ್ರೀ ವ್ಯವಸ್ಥೆ ಮಾಡಿದ್ದರು. ಪಿ.ಗೋಪಾಲನ್ ಎನ್ನುವವರು ಸಾಗರ್ ಆಸ್ಪತ್ರೆಯಿಂದ ಜೀವಂತ ಹೃದಯ ಹೊತ್ತ ಆಂಬ್ಯುಲೆನ್ಸ್ಅನ್ನು ಸುಮಾರು 20 ನಿಮಿಷದಲ್ಲಿ ನಾರಾಯಣ ಹೃದಯಾಲಯಕ್ಕೆ ತೆಗೆದುಕೊಂಡು ಹೋದರು. [ಕುಡ್ಲದಲ್ಲಿ ಮಿಡಿದ ಜೀವಂತ ಹೃದಯ ಬೆಂಗಳೂರಿಗೆ]
ಹೃದಯದಾನ ಮಾಡಿದ ಚೇತನ್ : ಮಂಡ್ಯ ಮೂಲದ 22 ವರ್ಷದ ಚೇತನ್ ಹೃದಯವನ್ನು ದಾನ ಮಾಡಿ ಮತ್ತೊಬ್ಬರ ಜೀವವನ್ನು ಉಳಿಸಿದ್ದಾರೆ. ಬೆಂಗಳೂರು ಹೊರವಲಯದ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಚೇತನ್ ಕೆಲಸ ಮಾಡುತ್ತಿದ್ದರು. ಜುಲೈ 15ರಂದು ಕೆಲಸ ಮಾಡುವಾಗ ಯಂತ್ರಗಳ ನಡುವೆ ಸಿಲುಕಿ ಚೇತನ್ ಗಾಯಗೊಂಡಿದ್ದರು.
ಎರಡು ದಿನಗಳ ನಂತರ ಅವರು ಮೆದುಳು ನಿಷ್ಕ್ರಿಯವಾಗಿದೆ ಎಂದು ವೈದ್ಯರು ಘೋಷಿದರು. 2014ರಲ್ಲಿ ಬೆಂಗಳೂರಿನಿಂದ ಚೆನ್ನೈಗೆ ಜೀವಂತ ಹೃದಯ ಸಾಗಣೆ ಮಾಡಿದ್ದನ್ನು ಕೇಳಿದ್ದ ಚೇತನ್ ತಂದೆ ರಾಮಣ್ಣ ಅವರು ಮಗನ ಹೃದಯವನ್ನು ದಾನ ಮಾಡಲು ಒಪ್ಪಿಗೆ ನೀಡಿದ್ದರು. ಅದರಂತೆ ಇಂದು ಬೆಳಗ್ಗೆ ಬೆಂಗಳೂರು ಸಂಚಾರಿ ಪೊಲೀಸರ ನೆರವಿನೊಂದಿಗೆ ಜೀವಂತ ಹೃದಯ ಸಾಗಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಜೀವಂತ ಹೃದಯ ಸಾಗಣೆ ಇದು ಹೊಸದೇನಲ್ಲ ಈಗಾಗಲೇ ಹಲವಾರು ಬಾರಿ ಇಂತಹ ಪ್ರಯತ್ನಗಳು ಯಶಸ್ವಿಯಾಗಿ ನಡೆದಿವೆ.
* 2014ರಲ್ಲಿ ಎರಡು ಬಾರಿ ಬೆಂಗಳೂರಿನಿಂದ ಚೆನ್ನೈಗೆ ಜೀವಂತ ಹೃದಯವನ್ನು ಸಾಗಣೆ ಮಾಡಲಾಗಿತ್ತು.
* 2015ರ ಜನವರಿಯಲ್ಲಿ ಎಂಎಸ್ ರಾಮಯ್ಯ ಆಸ್ಪತ್ರೆಯಿಂದ ಬಿಜಿಎಸ್ ಆಸ್ಪತ್ರೆಗೆ ಹೃದಯ ಸಾಗಣೆ ಮಾಡಲಾಗಿತ್ತು.
* 2015 ಫೆ. 28ರಂದು ಬೆಂಗಳೂರಿನಿಂದ ಹೈದರಾಬಾದ್ ಜೀವಂತ ಹೃದಯವನ್ನು ಸಾಗಣೆ ಮಾಡಲಾಗಿತ್ತು
* 2015 ಏ.13ರಂದು ಮಂಗಳೂರಿನಿಂದ ಜೀವಂತ ಹೃದಯವನ್ನು ಬಿಜಿಎಸ್ ಆಸ್ಪತ್ರೆಗೆ ತೆಗೆದುಕೊಂಡು ಬರಲಾಗಿತ್ತು.
-
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ











Click it and Unblock the Notifications