ಬೆಂಗಳೂರು: ನಾಯಿಗಳು ಬೊಗಳುತ್ತಿವೆ, ನಿದ್ರೆ ಬರುತ್ತಿಲ್ಲವೆಂದು 112ಕ್ಕೆ ಕರೆ ಮಾಡಿದ ಮಹಿಳೆ
ಬೆಂಗಳೂರು, ಮಾರ್ಚ್ 20: ಸಾಮಾನ್ಯವಾಗಿ ಕಳ್ಳತನ, ಗಲಾಟೆ ಅಥವಾ ತುರ್ತು ಅಪಘಾತಗಳ ಸಂದರ್ಭದಲ್ಲಿ ಜನರು ಪೊಲೀಸರ ಸಹಾಯ ಕೋರುತ್ತಾರೆ. ಆದರೆ, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಹಿಳೆಯೊಬ್ಬರು ತನ್ನ ನಿದ್ರೆಗೆ ಭಂಗ ತರುತ್ತಿರುವ ಬೀದಿ ನಾಯಿಗಳ ಕಾಟದಿಂದ ರಕ್ಷಣೆ ನೀಡುವಂತೆ ಪೊಲೀಸರಿಗೆ ದೂರು ನೀಡಿದ ವಿಚಿತ್ರ ಘಟನೆ ನಡೆದಿದೆ.
ಈ ಕುತೂಹಲಕಾರಿ ಘಟನೆ ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಸ್ಥಳೀಯ ಅಪಾರ್ಟ್ಮೆಂಟ್ ಒಂದರಲ್ಲಿ ವಾಸವಿರುವ ಮಹಿಳೆಗೆ ತಡರಾತ್ರಿ ಬೀದಿ ನಾಯಿಗಳ ಸತತ ಬೊಗಳುವಿಕೆಯಿಂದಾಗಿ ತೀವ್ರ ತೊಂದರೆಯಾಗಿತ್ತು. ನಾಯಿಗಳ ಬೊಗಳುತ್ತಿದ್ದರಿಂದ ನಿದ್ರೆ ಮಾಡಲು ಸಾಧ್ಯವಾಗದೆ ಕಂಗಾಲಾದ ಅವರು, ಬೇರೆ ದಾರಿ ಕಾಣದೆ ತಡರಾತ್ರಿಯೇ ಪೊಲೀಸ್ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿ ಸಹಾಯ ಕೋರಿದದರು ಎಂದು ವರದಿಯಾಗಿದೆ.

ತಕ್ಷಣವೇ ಸ್ಪಂದಿಸಿದ 'ಹೊಯ್ಸಳ' ಸಿಬ್ಬಂದಿ
ನಿಯಂತ್ರಣ ಕೊಠಡಿಯಿಂದ ಮಾಹಿತಿ ಸಿಕ್ಕ ಕೂಡಲೇ ಪೊಲೀಸರು ಕಾರ್ಯಪ್ರವೃತ್ತರಾದರು. ಹತ್ತಿರದಲ್ಲೇ ಗಸ್ತಿನಲ್ಲಿದ್ದ ಹೊಯ್ಸಳ ವಾಹನದ ಸಿಬ್ಬಂದಿ ತಕ್ಷಣವೇ ಮಹಿಳೆಯ ಅಪಾರ್ಟ್ಮೆಂಟ್ ಬಳಿ ಧಾವಿಸಿದರು. ಅಪಾರ್ಟ್ಮೆಂಟ್ ಸುತ್ತಮುತ್ತ ಗುಂಪು ಸೇರಿ ಬೊಗಳುತ್ತಿದ್ದ ನಾಯಿಗಳನ್ನು ಪೊಲೀಸರು ಅಲ್ಲಿಂದ ಓಡಿಸುವಲ್ಲಿ ಯಶಸ್ವಿಯಾದರು. ಪೊಲೀಸರ ಈ ತ್ವರಿತ ಸ್ಪಂದನೆಯಿಂದಾಗಿ ಮಹಿಳೆ ನಿಟ್ಟುಸಿರು ಬಿಟ್ಟಿದ್ದು, ನೆಮ್ಮದಿಯಿಂದ ನಿದ್ರೆ ಮಾಡಲು ಸಾಧ್ಯವಾಯಿತು. ಜನರ ಇಂತಹ ಸಣ್ಣಪುಟ್ಟ ಮತ್ತು ವಿಭಿನ್ನ ಸಮಸ್ಯೆಗಳಿಗೂ ತಕ್ಷಣವೇ ಸ್ಪಂದಿಸುವ ಮೂಲಕ ಬೆಂಗಳೂರು ಪೊಲೀಸರು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಬೀದಿ ನಾಯಿಗಳ ಹಾವಳಿಗೆ ಬೆದರಿದ ನಗರದ ಜನ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿ ಈಗ ಜನಸಾಮಾನ್ಯರ ನೆಮ್ಮದಿ ಕೆಡಿಸಿದೆ. ನಗರದ ಪ್ರಮುಖ ರಸ್ತೆಗಳಿಂದ ಹಿಡಿದು ಗಲ್ಲಿಗಳವರೆಗೆ ನಾಯಿಗಳು ಗುಂಪು ಗುಂಪಾಗಿ ಬೀಡುಬಿಟ್ಟಿದ್ದು, ಹಾದಿಹೋಕರ ಮೇಲೆ ದಾಳಿ ಮಾಡುತ್ತಿರುವ ಘಟನೆಗಳು ಹೆಚ್ಚುತ್ತಿವೆ. ಇದರಿಂದಾಗಿ ನಗರದ ಜನತೆ ರಸ್ತೆಗಿಳಿಯಲು ಭಯಪಡುವಂತಾಗಿದೆ.
ವಿಶೇಷವಾಗಿ ಮುಂಜಾನೆ ವಾಯು ವಿಹಾರಕ್ಕೆ ತೆರಳುವ ಹಿರಿಯ ನಾಗರಿಕರು ಮತ್ತು ಶಾಲೆಗೆ ಹೋಗುವ ಮಕ್ಕಳು ನಾಯಿಗಳ ಪ್ರಮುಖ ಗುರಿಯಾಗುತ್ತಿದ್ದಾರೆ. ಇನ್ನು ರಾತ್ರಿ ವೇಳೆ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವ ಸವಾರರನ್ನು ನಾಯಿಗಳು ಅಟ್ಟಿಸಿಕೊಂಡು ಹೋಗುತ್ತಿದ್ದು, ಇದರಿಂದಾಗಿ ಗಾಬರಿಗೊಂಡು ಅನೇಕ ಸವಾರರು ಬಿದ್ದು ಅಪಘಾತಕ್ಕೀಡಾದ ಘಟನೆಗಳು ನಡೆದಿವೆ.
ನಗರದ ಹಲವೆಡೆ ರಸ್ತೆ ಬದಿಯಲ್ಲಿ ಸುರಿಯಲಾಗುತ್ತಿರುವ ಮಾಂಸದ ತ್ಯಾಜ್ಯ ಮತ್ತು ಹೋಟೆಲ್ ಕಸಗಳು ನಾಯಿಗಳು ಗುಂಪು ಸೇರಲು ಮುಖ್ಯ ಕಾರಣವಾಗಿವೆ. ಈ ನಾಯಿಗಳು ತಮ್ಮ ಪ್ರದೇಶಕ್ಕೆ ಬರುವ ಅಪರಿಚಿತರ ಮೇಲೆ ಏಕಾಏಕಿ ದಾಳಿ ಮಾಡುತ್ತಿದ್ದು, ಜೊತೆಗೆ ಹಲವು ಬಡಾವಣೆಗಳಲ್ಲಿ ರಾತ್ರಿ ಇಡೀ ಬೊಗಳುವುದರಿಂದ ಸ್ಥಳೀಯ ನಿವಾಸಿಗಳಿಗೆ ಸರಿಯಾಗುತ್ತಿವೆ ಎನ್ನುವ ದೂರುಗಳು ಸಹ ಕೇಳಿಬಂದಿವೆ.
ಸಾರ್ವಜನಿಕರು ಈ ಬಗ್ಗೆ ಬಿಬಿಎಂಪಿಗೆ ಅನೇಕ ಬಾರಿ ದೂರು ನೀಡಿದ್ದರೂ, ನಾಯಿಗಳ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ಸಿಗುತ್ತಿಲ್ಲ ಎಂಬ ಆಕ್ರೋಶ ವ್ಯಕ್ತವಾಗಿದೆ. ಕೇವಲ ಲಸಿಕೆ ಹಾಕಿ ಬಿಡುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications