ರೂಪಾಯಿಗೊಂದು ಮೊಟ್ಟೆ ಆಫರ್: 48 ಸಾವಿರ ಕಳೆದುಕೊಂಡ ಬೆಂಗಳೂರು ಮಹಿಳೆ
ಬೆಂಗಳೂರು, ಫೆಬ್ರವರಿ 26: ಸೈಬರ್ ವಂಚನೆಯ ಬಗ್ಗೆ ಪೊಲೀಸರು ಎಷ್ಟೇ ಅರಿವು ಮೂಡಿಸಿದರು ಕೂಡ ವಂಚನೆಗೊಳಗಾಗುವರ ಸಂಖ್ಯೆ ಮಾತ್ರ ಕಡಿಮೆಯಾಗುತ್ತಿಲ್ಲ. ವರ್ಕ್ ಫ್ರಾಂ ಹೋಮ್ ಹಾಗೂ ಅಪರಿಚಿತರು ನೀಡುವ ಆಫರ್ ನಂಬಿ ಮೋಸ ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದೇ ರೀತಿ ಅಪರಿಚಿತರು ನೀಡಿರುವ ಮೊಟ್ಟೆ ಆಫರ್ ನಂಬಿ ಮಹಿಳೆಯೊಬ್ಬರು ಸಾವಿರಾರು ರೂಪಾಯಿ ಕಳೆದುಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಒಂದು ರೂಪಾಯಿಗೆ ಒಂದು ಮೊಟ್ಟೆ ಖರೀದಿಸುವ ಆಸೆಗೆ ಬಿದ್ದ ಮಹಿಳೆ ಒಂದಲ್ಲ, ಎರಡಲ್ಲ ಬರೋಬ್ಬರಿ ನೆಲವತ್ತೆಂಟು ಸಾವಿರ ರೂಪಾಯಿ ಕಳೆದುಕೊಂಡಿದ್ದಾರೆ. ಈ ಪ್ರಕರಣ ಸಂಬಂಧ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ವಸಂತ ನಗರ ನಿವಾಸಿ ಮಹಿಳೆಯೊಬ್ಬರಿಗೆ ಫೆಬ್ರವರಿ 17ರಂದು ಇ-ಮೇಲ್ ಸಂದೇಶ ಬಂದಿತ್ತು. ಇ-ಕಾಮರ್ಸ್ ಹೆಸರಿನಲ್ಲಿ ಒಂದು ರೂಪಾಯಿಗೆ ಒಂದು ಮೊಟ್ಟೆ ಖರೀದಿಸುವ ಆಫರ್ ನೀಡಲಾಗಿತ್ತು. ಇದನ್ನು ನಂಬಿದ ಮಹಿಳೆ ವಂಚಕರು ಹೇಳಿದಂತೆ ನಡೆದುಕೊಂಡಿದ್ದಾರೆ. 48 ರೂಪಾಯಿಗೆ 48 ಮೊಟ್ಟೆ ಖರೀದಿರುವ ಭರದಲ್ಲಿ ಮಹಿಳೆ ವಂಚಕರು ಹೇಳಿದಂತೆ ಲಿಂಕ್ ಕ್ಲಿಕ್ ಮಾಡಿ 48 ರೂಪಾಯಿ ಪಾವತಿ ಮಾಡಿದ್ದಾರೆ. ಮಹಿಳೆ ಹಣ ಪಾವತಿ ಮಾಡಿದ್ದೇ ತಡ ವಂಚಕರು ಬರೋಬ್ಬರಿ 48 ಸಾವಿರ ರೂಪಾಯಿಯನ್ನು ಮಹಿಳೆ ಖಾತೆಯಿಂದ ದೋಚಿದ್ದಾರೆ.
ತಾನು ವಂಚಕರಿಂದ ಮೋಸ ಹೋದ ಬಗ್ಗೆ ತಿಳಿದ ಮಹಿಳೆ ಕೂಡಲೇ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಸೈಬರ್ ವಂಚನೆ ಅಡಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಬೆಳಗಾವಿಯಲ್ಲಿ ಒಂದು ಕೋಟಿ ರೂಪಾಯಿ ಮಂಗಮಾಯ
ವಂಚಕರ ಮಾತನ್ನು ನಂಬುತ್ತಿರುವ ಜನರು ಕೋಟ್ಯಂತರ ರೂಪಾಯಿ ಕಳೆದುಕೊಳ್ಳುತ್ತಿದ್ದಾರೆ. ಇಂತಹದ್ದೇ ಘಟನೆ ಇತ್ತೀಚಿಗೆ ಬೆಳಗಾವಿಯಲ್ಲಿ ನಡೆದಿದ್ದು, ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 1.53 ಕೋಟಿ ರೂಪಾಯಿ ವಂಚಕರ ಪಾಲಾಗಿದೆ.
ಗೋಕಾಕ್ ಮೂಲದ ಉದ್ಯಮಿ ಬಾಬುರಾವ್ ಅವರಿಗೆ ಟೆಲಿಗ್ರಾಂ ಆ್ಯಪ್ನಲ್ಲಿ ವಂಚಕರು ಪರಿಚಯ ಆಗಿದ್ದಾರೆ. ವಂಚಕರು ನಯವಾದ ಮಾತುಗಳಿಂದ ಬಾಬುರಾವ್ ಅವರನ್ನು ನಂಬಿಸಿದ್ದು, ಬಾಬುರಾವ್ ಕೂಡ ವಂಚಕರು ಹೇಳಿದಂತೆ ನಡೆದುಕೊಂಡಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು 27.50 ಲಕ್ಷ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ.
ಇದೇ ರೀತಿ ಚಿಕ್ಕೋಡಿ ತಾಲೂಕಿನ ಕೆರೂರು ಗ್ರಾಮದ ಚಿದಾನಂದ್ ಸೋಶಿಯಲ್ ಮಿಡಿಯಾ ಮಾರ್ಕೆಟಿಂಗ್ ಕಂಪನಿಯಲ್ಲಿ ವರ್ಕ್ ಫ್ರಮ್ ಹೋಮ್ ಕೆಲಸ ಪಡೆಯಲು ಹೋಗಿ ಬರೋಬ್ಬರಿ 58.34 ಲಕ್ಷ ರೂಪಾಯಿ ಹಣ ಕಳೆದುಕೊಂಡಿದ್ದರು. ಇಂತಹದ್ದೇ ಮತ್ತೊಂದು ಪ್ರಕರಣ ಸೇರಿದಂತೆ ಮೂರು ಜನರು ಮೋಸ ಹೋಗಿ ಬೆಳಗಾವಿ ಜಿಲ್ಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು











Click it and Unblock the Notifications