ISIS ಸೇರಿದ್ದ ಬೆಂಗಳೂರಿನ ಯುವಕ ಸಿರಿಯಾದಲ್ಲಿ ಹತ್ಯೆ
ಬೆಂಗಳೂರು, ಸೆ.14: ಸಿರಿಯಾಕ್ಕೆ ತೆರಳಿ ಇರಾಕ್ ಉಗ್ರ ಸಂಘಟನೆ ಸೇರಿದ್ದ ಬೆಂಗಳೂರು ಮೂಲದ ಮ್ಯಾನೇಜ್ಮೆಂಟ್ ಸ್ಟಡೀಸ್ ಪದವಿಧರನ ಸಾವಿನ ಸುದ್ದಿಯನ್ನು ವೈದ್ಯ ಅಬ್ದುರ್ ರೆಹಮಾನ್ ಖಚಿತಪಡಿಸಿದ್ದಾನೆ.
ಇತ್ತೀಚೆಗೆ ಎಂಎಸ್ ರಾಮಯ್ಯದಲ್ಲಿ ಕಿರಿಯ ವೈದ್ಯನಾಗಿ ಕಾರ್ಯ ನಿರ್ವಹಿಸುತ್ತಿದ್ದ ಬಸವನಗುಡಿ ನಿವಾಸಿ ಡಾ. ಅಬ್ದುರ್ ರೆಹಮಾನ್ ಈ ಬಗ್ಗೆ ಪ್ರತಿಕ್ರಿಯಿಸಿ, ಫೈಜ್ ಮಸೂದ್ ಮೃತನಾಗಿದ್ದಾನೆ ಎಂದಿದ್ದಾನೆ.
ಸಿರಿಯಾ ಗಡಿಭಾಗದಲ್ಲಿರುವ ಅಟ್ಮೆ(atme) ಎಂಬ ಪಟ್ಟಣದಲ್ಲಿ ಮಸೂದ್ ನನ್ನು ಭೇಟಿ ಮಾಡಿದ್ದೆ. 2013ರಿಂದ ಟರ್ಕಿ ನಿರಾಶ್ರಿತ ಕ್ಯಾಂಪಿನಿಂದ ಹೊರಬಂದಿದ್ದೆವು ಎಂದು ವಿಚಾರಣೆ ವೇಳೆ ಹೇಳಿದ್ದಾನೆ.

ಬೆಂಗಳೂರಿನ ಶ್ರೀಮಂತ ಕುಟುಂಬದವನಾಗಿದ್ದ ಫೈಜ್ ಮಸೂದ್ ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ತೊರೆದು ಸಿರಿಯಾಕ್ಕೆ ತೆರಳಿದ್ದ. ಉಗ್ರರ ಸಂಪರ್ಕಕ್ಕೆ ಸೇರಿ ನಾಪತ್ತೆಯಾಗಿ ಏಳು ವರ್ಷಗಳು ಕಳೆದರೂ ಪೊಲೀಸರ ಬಳಿ ನಾಪತ್ತೆ ಪ್ರಕರಣದ ಒಂದು ದೂರು ದಾಖಲಾಗಿಲ್ಲ.
ಬಸವನಗುಡಿಯ ಅಪಾರ್ಟ್ಮೆಂಟ್ ನಲ್ಲಿ ವಾಸಿಸುತ್ತಿದ್ದ 28 ವರ್ಷ ವಯಸ್ಸಿನ ಕಣ್ಣು ವೈದ್ಯ (ophthalmologist) ಅಬ್ದುಲ್ ರೆಹಮಾನ್ 2014ರಿಂದ ಇರಾಕಿನ ಉಗ್ರ ಸಂಘಟನೆ ಐಎಸ್ಐಎಸ್ ಜೊತೆ ಸಂಪರ್ಕ ಹೊಂದಿದ್ದ ಎಂದು ಈ ಮುಂಚೆ ತಿಳಿದು ಬಂದಿದೆ.

ಜಹಾನ್ ಜೈಬ್ ವನಿ ಜೊತೆ ನಿರಂತರವಾಗಿ ಸಂಪರ್ಕ ಹೊಂದಿದ್ದೆ. 2014ರಲ್ಲಿ ಸಿರಿಯಾಕ್ಕೂ ಭೇಟಿ ಮಾಡಿದ್ದೆ. ಭಾರತದಲ್ಲಿ ಹಲವು ಸಂಚು ರೂಪಿಸಲು ಯೋಜನೆ ಹಾಕಿಕೊಂಡಿದ್ದೆವು. ಸಿರಿಯಾದಲ್ಲಿ ಗಾಯಗೊಂಡ ಉಗ್ರರ ನೆರವಿಗೆ ಮೆಡಿಕಲ್ ಅಪ್ಲಿಕೇಷನ್ ರೂಪಿಸುತ್ತಿದ್ದೆ. ಐಸೀಸ್ ಯೋಧರಿಗೆ ತಾಂತ್ರಿಕ, ವೈದ್ಯಕೀಯ ನೆರವು ನೀಡಿದ್ದೆ ಎಂದು ಅಬ್ದುರ್ ರೆಹಮಾನ್ ಹೇಳಿದ್ದಾನೆ.
Recommended Video
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications