Bengaluru Traffic:ವಾಹನ ಸವಾರರೇ ಗಮನಿಸಿ ಈ ಪ್ರಮುಖ ರಸ್ತೆಯಲ್ಲಿ ಒಂದು ವರ್ಷ ವಾಹನ ಸಂಚಾರ ನಿಷೇಧ
ಬೆಂಗಳೂರಿನ ವಾಹನ ಸವಾರರೇ ನೀವೇನಾದ್ರು ನಗರದಲ್ಲೆಡೆ ಸುತ್ತಾಡುತ್ತಿದ್ದರೆ, ಅಥವಾ ಬನ್ನೇರುಘಟ್ಟ ರಸ್ತೆಯನ್ನು ಹೆಚ್ಚಾಗಿ ಬಳಸುತ್ತಿದ್ದರೆ ಏಪ್ರಿಲ್ 1 ರಿಂದ ನಿಮ್ಮ ಸಂಚಾರ ಮಾರ್ಗ ಬದಲಾವಣೆಯಾಗಲಿದೆ. ಬನ್ನೇರುಘಟ್ಟ ರಸ್ತೆಯಲ್ಲಿ ಮೈಕೋ (MICO) ಸಿಗ್ನಲ್ನಿಂದ ಆನೆಪಾಳ್ಯ ಜಂಕ್ಷನ್ವರೆಗೆ ಒಂದು ವರ್ಷಗಳ ಕಾಲ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.
ನಮ್ಮ ಮೆಟ್ರೋ ಕಾಮಗಾರಿ ಭರದಿಂದ ನಡೆಯುತ್ತಿರುವ ಕಾರಣ, ಈ ರಸ್ತೆಯಲ್ಲಿ ಒಂದು ವರ್ಷಗಳ ಕಾಲ ವಾಹನ ಸಂಚಾರಕ್ಕೆ ಅನುಮತಿ ಇರುವುದಿಲ್ಲ. ನಮ್ಮ ಮೆಟ್ರೋ ಪಿಂಕ್ ಲೈನ್ನಲ್ಲಿ ಲಕ್ಕಸಂದ್ರ ಭೂಗತ ಮೆಟ್ರೋ ನಿಲ್ದಾಣದ ದಕ್ಷಿಣ ಭಾಗದ ಪ್ರವೇಶ ಮಾರ್ಗ ನಿರ್ಮಾಣವಾಗುತ್ತಿದ್ದು, ಕಾಮಗಾರಿಯ ಅನುಕೂಲಕ್ಕಾಗಿ ರಸ್ತೆಯಲ್ಲಿ ಸಂಚಾರ ನಿಷೇಧಿಸಲಾಗಿದೆ.

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಮೆಟ್ರೋ ನಿಲ್ದಾಣದ ನಿರ್ಮಾಣ ಕಾಮಗಾರಿಯನ್ನು ಸುಲಭವಾಗಿಸಲು ಈ ಕ್ರಮ ತೆಗೆದುಕೊಂಡಿರುವುದಾಗಿ ಹೇಳಿದೆ. ಇದರಿಂದ ಟ್ರಾಫಿಕ್ ಮೇಲೆ ಪರಿಣಾಮ ಬೀರಲಿದ್ದು, ವಾಹನ ಸವಾರರು ಈ ರಸ್ತೆಯಲ್ಲಿ ಸಂಚರಿಸುವ ಯೋಜನೆಯನ್ನು ತಪ್ಪಿಸುವಂತೆ ಕೇಳಿದೆ.
ಎಕ್ಸ್ನಲ್ಲಿ ಮಾಹಿತಿ ನೀಡಿದ ಬಿಎಂಆರ್ ಸಿಎಲ್
ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿಎಂಆರ್ ಸಿಎಲ್ ಈ ಮಾಹಿತಿಯನ್ನು ಹಂಚಿಕೊಂಡಿದೆ. "ಲಕ್ಕಸಂದ್ರ ಸುರಂಗ ಮೆಟ್ರೋ ನಿಲ್ದಾಣದ ದಕ್ಷಿಣ ಭಾಗದ ಕಾಮಗಾರಿ ನಿರ್ಮಾಣಕ್ಕೆ ಅನುಕೂಲವಾಗುವಂತೆ ಬನ್ನೇರುಘಟ್ಟ ಮುಖ್ಯರಸ್ತೆಯ ಉತ್ತರ ದಿಕ್ಕಿನ ರಸ್ತೆಯನ್ನು ಮೈಕೋ ಸಿಗ್ನಲ್ನಿಂದ ಆನೆಪಾಳ್ಯ ಜಂಕ್ಷನ್ವರೆಗೆ ಸಂಚಾರವನ್ನು ಏಪ್ರಿಲ್ 1ರಿಂದ ಒಂದು ವರ್ಷದ ಅವಧಿಗೆ ಮುಚ್ಚಲಾಗಿದೆ." ಎಂದು ಮಾಹಿತಿ ನೀಡಿದೆ.
ಈ ಸಂಬಂಧ ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ಡೈರಿ ಸರ್ಕಲ್ ಕಡೆಯಿಂದ ಚಲಿಸುವ ವಾಹನಗಳು, ಆನೆಪಾಳ್ಯ ಜಂಕ್ಷನ್ ಕಡೆಗೆ ಚಲಿಸಬೇಕಾದ ವಾಹನಗಳು ಮೈಕೋ ಸಿಗ್ನಲ್ನಲ್ಲಿ ಬಲಕ್ಕೆ ತಿರುಗಿ ಬೋಷ್ ಲಿಂಕ್ ರಸ್ತೆಯ ಮೂಲಕ ಆಡುಗೋಡಿ ತಲುಪಿ ಎಡಕ್ಕೆ ಚಲಿಸಬೇಕು ಎಂದು ಸೂಚನೆ ನೀಡಿದೆ.
ಆನೆಪಾಳ್ಯ ಜಂಕ್ಷನ್ನಿಂದ ಡೈರಿ ಸರ್ಕಲ್ ಕಡೆಗೆ ಚಲಿಸುವ ವಾಹನ ಸಂಚಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಡೈರಿ ಸರ್ಕಲ್ನಿಂದ ಶಾಂತಿನಗರದ ಕಡೆಗೆ ಚಲಿಸುವ ವಾಹನಗಳು ವಿಲ್ಸನ್ ಗಾರ್ಡನ್ನ 7ನೇ ಮುಖ್ಯರಸ್ತೆಯಲ್ಲಿ ಎಡಕ್ಕೆ ತಿರುವು ತೆಗೆದುಕೊಳ್ಳಬೇಕು ಎಂದು ಹೇಳಿದೆ.
ಪಿಂಕ್ ಲೈನ್ ಕಾಮಗಾರಿ
ಲಕ್ಕಸಂದ್ರ ಭೂಗತ ಮೆಟ್ರೋ ನಿಲ್ದಾಣವು ನಮ್ಮ ಮೆಟ್ರೋ ಯೋಜನೆಯ ಪಿಂಕ್ ಲೈನ್ನ ಭಾಗವಾಗಿದೆ. ಬೆಂಗಳೂರಿನ ಸಾರಿಗೆ ವ್ಯವಸ್ಥೆಯನ್ನು ಉತ್ತಮಗೊಳಿಸುವಲ್ಲಿ ನಮ್ಮ ಮೆಟ್ರೋ ಪಾತ್ರ ವಹಿಸುತ್ತದೆ. ಬಿಎಂಆರ್ ಸಿಎಲ್ ಕಾಮಗಾರಿ ವೇಗವನ್ನು ಹೆಚ್ಚಿಸಿದ್ದು, ಆದಷ್ಟು ಬೇಗ ಕಾಮಗಾರಿ ಮುಗಿಸಲು ಕೆಲಸ ಮಾಡುತ್ತಿದೆ.
-
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
Namma Metro: ಏರ್ಪೋರ್ಟ್ ಮೆಟ್ರೋ ನೀಲಿ ಮಾರ್ಗಕ್ಕೆ ಬರಲಿವೆ 2 ಡ್ರವರ್ಲೆಸ್ ರೈಲು -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications