Bengaluru's Double Decker Flyover: ಸಂಚಾರ ಮುಕ್ತ ಯಾವಾಗ?-ಇಲ್ಲಿದೆ ಅಪ್ಡೇಟ್ ಮಾಹಿತಿ
ಬೆಂಗಳೂರು, ಏಪ್ರಿಲ್, 02: ಬೆಂಗಳೂರಿನಲ್ಲಿ ರಸ್ತೆ, ಸೇತುವೆಗಳ ಅಭಿವೃದ್ಧಿ ಆಗುತ್ತಲೇ ಇವೆ. ಹಾಗೆಯೇ ರಾಗಿಗುಡ್ಡ ಹಾಗೂ ಸಿಲ್ಕ್ ಬೋರ್ಟ್ ನಡುವೆ ನಿರ್ಮಾಣ ಆಗುತ್ತಿರುವ ಡಬಲ್ ಡೆಕ್ಕರ್ ಮೇಲ್ಸೇತುವೆ ಯಾವಾಗ ಸಾರ್ವಜನಿಕರಿಗೆ ಮುಕ್ತವಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರಾಗಿಗುಡ್ಡ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್ ನಡುವೆ ನಿರ್ಮಾಣ ಆಗುತ್ತಿರುವ 3.3 ಕಿಲೋ ಮೀಟರ್ ಉದ್ದದ ಡಬಲ್ ಡೆಕ್ಕರ್ ಮೇಲ್ಸುತುವೆಯನ್ನು ಇದೇ ಜೂನ್ನಲ್ಲಿ ಸಾರ್ವಜನಿಕರಿಗೆ ಮುಕ್ತಗೊಳಿಸಲಾಗುತ್ತದೆ ಎಂದು ಬಿಎಂಆರ್ಸಿಎಲ್ನಿಂದ ಮಾಹಿತಿ ಲಭ್ಯವಾಗಿದೆ.

ಇದು ಸಾರ್ವಜನಿಕರಿಗೆ ಸಂಚಾರ ಮುಕ್ತವಾದರೆ ಸೆಂಟ್ರಲ್ ಸಿಲ್ಕ್ ಬೋರ್ಡ್ನಲ್ಲಿ ಟ್ರಾಫಿಕ್ ಸಮಸ್ಯೆಗೆ ಕಡಿವಾಣ ಹಾಕಿದಂತಾಗುತ್ತದೆ. ಸಿಗ್ನಲ್ ಮುಕ್ತ ಎಲಿವೇಟೆಡ್ ರಸ್ತೆಯು ಲೋಕಾರ್ಪಣೆ ಆದರೆ ಬಿಟಿಎಂ ಲೇಔಟ್ನಿಂದ ಕೆಆರ್ ಪುರಂ, ರಾಗಿಗುಡ್ಡದಿಂದ ಕೆಆರ್ ಪುರಂ ಮತ್ತು ರಾಗಿಗುಡ್ಡ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಬರುವ ವಾಹನ ಸವಾರರಿಗೆ ಪ್ರಯೋಜನಕಾರಿ ಆಗಲಿದೆ ಎನ್ನುವ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.
ಇದೇ ಮೇ ತಿಂಗಳ ಅಂತ್ಯದಲ್ಲಿ ಈ ರಸ್ತೆಯು ಸಾರ್ವಜನಿಕರಿಗೆ ಮುಕ್ತ ಆಗಲಿದೆ ಎಂದು ಈ ಹಿಂದೆ ತಿಳಿಸಲಾಗಿತ್ತು. ಡಬಲ್ ಡೆಕ್ಕರ್ ಮೇಲ್ಸುತುವೆಯಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ನಲ್ಲಿ ವಾಹನಗಳ ದಟ್ಟಣೆ ತಗ್ಗಿದಂತಾಗುತ್ತದೆ. ಇನ್ನು ಇಲ್ಲಿ ಪ್ರತಿ ಗಂಟೆಗೆ 15,000ಕ್ಕೂ ಹೆಚ್ಚು ವಾಹನಗಳು ಸಂಚಾರ ಮಾಡುತ್ತವೆ ಎನ್ನುವ ಮಾಹಿತಿ ಇದೆ.
ಮಾರ್ಚ್ 17ರಂದು 2,520 ಕ್ಯೂಬಿಕ್ ಮೀಟರ್ ಕಾಂಕ್ರೀಟ್ ಸ್ಲ್ಯಾಬ್ ಅನ್ನು 42 ಗಂಟೆಗಳ ಕಾಲ ತಡೆರಹಿತವಾಗಿ ಹಾಕಲಾಗಿತ್ತು. ಸ್ಲ್ಯಾಬ್ಗೆ ಇದೀಗ 28 ದಿನಗಳ ಕ್ಯೂರಿಂಗ್ ಅಗತ್ಯ ಇದ್ದು, ಏಪ್ರಿಲ್ 15ರ ವೇಳಗೆ ಸಿದ್ಧ ಆಗಲಿದೆ. ಬಳಿಜ ಮತ್ತೊಂದಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ಅಧಿಕಾರಿಕಾರಿಗಳಿಂದ ಮಾಹಿತಿ ಲಭ್ಯವಾಗಿದೆ.
ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ನಲ್ಲಿ 5 ಲೂಪ್ಗಳು ಮತ್ತು ರ್ಯಾಂಪ್ಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಅವುಗಳು ರಾಗಿಗುಡ್ಡದಿಂದ ಹೊಸೂರು ರಸ್ತೆ, ರಾಗಿಗುಡ್ಡದಿಂದ ಕೆಆರ್ ಪುರಂ, ಎಚ್ಎಸ್ಆರ್ ಲೇಔಟ್ನಿಂದ ರಾಗಿಗುಡ್ಡ, ಬಿಟಿಎಂ ಲೇಔಟ್ನ ನೆಲಮಟ್ಟದಿಂದ ಫ್ಲೈಓವರ್ ರಸ್ತೆಯ ಮೊದಲ ಹಂತ ಮತ್ತು ಮೊದಲ ಹಂತದ ಫ್ಲೈಓವರ್ ರಸ್ತೆಯ ಮೊದಲ ಹಂತದಿಂದ ಬಿಟಿಎಂ ಲೇಔಟ್ನ ನೆಲ ಮಟ್ಟದ ಕಡೆಗೆ ಕಾರ್ಯನಿರ್ವಹಿಸಲಿವೆ ಎಂದು ಅಧಿಕಾರಿಗಳಿ ಮಾಹಿತಿ ನೀಡಿದ್ದಾರೆ.
ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ಹೊರ ವರ್ತುಲ ರಸ್ತೆ (2ಎ ಹಂತ) ಮತ್ತು ಆರ್ವಿ ರಸ್ತೆಯಿಂದ ಬೊಮ್ಮಸಂದ್ರ ಮಾರ್ಗದ (ರೀಚ್) BMRCL 2ಎ ಮಾರ್ಗದ ಇಂಟರ್ ಚೆಂಜ್ ಆಗಲಿದೆ. ಡಿಸೆಂಬರ್ನಲ್ಲಿ ರಿಟರ್ನ್ ದಿಕ್ಕಿನ ರಸ್ತೆ ಕಾರ್ಯಾರಂಭ ಮಾಡಲಿದೆ. ಈ ಜಂಕ್ಷನ್ ದಕ್ಷಿಣ ಭಾರತದ ಅತ್ಯಂತ ಕೆಟ್ಟ ಚಾಕ್ ಪಾಯಿಂಟ್ ಎಂದು ಗುರುತಿಸಲಾಗಿದೆ.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ












Click it and Unblock the Notifications