Bengaluru's Double Decker Flyover: ಸಂಚಾರ ಮುಕ್ತ ಯಾವಾಗ?-ಇಲ್ಲಿದೆ ಅಪ್ಡೇಟ್ ಮಾಹಿತಿ
ಬೆಂಗಳೂರು, ಏಪ್ರಿಲ್, 02: ಬೆಂಗಳೂರಿನಲ್ಲಿ ರಸ್ತೆ, ಸೇತುವೆಗಳ ಅಭಿವೃದ್ಧಿ ಆಗುತ್ತಲೇ ಇವೆ. ಹಾಗೆಯೇ ರಾಗಿಗುಡ್ಡ ಹಾಗೂ ಸಿಲ್ಕ್ ಬೋರ್ಟ್ ನಡುವೆ ನಿರ್ಮಾಣ ಆಗುತ್ತಿರುವ ಡಬಲ್ ಡೆಕ್ಕರ್ ಮೇಲ್ಸೇತುವೆ ಯಾವಾಗ ಸಾರ್ವಜನಿಕರಿಗೆ ಮುಕ್ತವಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರಾಗಿಗುಡ್ಡ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್ ನಡುವೆ ನಿರ್ಮಾಣ ಆಗುತ್ತಿರುವ 3.3 ಕಿಲೋ ಮೀಟರ್ ಉದ್ದದ ಡಬಲ್ ಡೆಕ್ಕರ್ ಮೇಲ್ಸುತುವೆಯನ್ನು ಇದೇ ಜೂನ್ನಲ್ಲಿ ಸಾರ್ವಜನಿಕರಿಗೆ ಮುಕ್ತಗೊಳಿಸಲಾಗುತ್ತದೆ ಎಂದು ಬಿಎಂಆರ್ಸಿಎಲ್ನಿಂದ ಮಾಹಿತಿ ಲಭ್ಯವಾಗಿದೆ.

ಇದು ಸಾರ್ವಜನಿಕರಿಗೆ ಸಂಚಾರ ಮುಕ್ತವಾದರೆ ಸೆಂಟ್ರಲ್ ಸಿಲ್ಕ್ ಬೋರ್ಡ್ನಲ್ಲಿ ಟ್ರಾಫಿಕ್ ಸಮಸ್ಯೆಗೆ ಕಡಿವಾಣ ಹಾಕಿದಂತಾಗುತ್ತದೆ. ಸಿಗ್ನಲ್ ಮುಕ್ತ ಎಲಿವೇಟೆಡ್ ರಸ್ತೆಯು ಲೋಕಾರ್ಪಣೆ ಆದರೆ ಬಿಟಿಎಂ ಲೇಔಟ್ನಿಂದ ಕೆಆರ್ ಪುರಂ, ರಾಗಿಗುಡ್ಡದಿಂದ ಕೆಆರ್ ಪುರಂ ಮತ್ತು ರಾಗಿಗುಡ್ಡ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಬರುವ ವಾಹನ ಸವಾರರಿಗೆ ಪ್ರಯೋಜನಕಾರಿ ಆಗಲಿದೆ ಎನ್ನುವ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.
ಇದೇ ಮೇ ತಿಂಗಳ ಅಂತ್ಯದಲ್ಲಿ ಈ ರಸ್ತೆಯು ಸಾರ್ವಜನಿಕರಿಗೆ ಮುಕ್ತ ಆಗಲಿದೆ ಎಂದು ಈ ಹಿಂದೆ ತಿಳಿಸಲಾಗಿತ್ತು. ಡಬಲ್ ಡೆಕ್ಕರ್ ಮೇಲ್ಸುತುವೆಯಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ನಲ್ಲಿ ವಾಹನಗಳ ದಟ್ಟಣೆ ತಗ್ಗಿದಂತಾಗುತ್ತದೆ. ಇನ್ನು ಇಲ್ಲಿ ಪ್ರತಿ ಗಂಟೆಗೆ 15,000ಕ್ಕೂ ಹೆಚ್ಚು ವಾಹನಗಳು ಸಂಚಾರ ಮಾಡುತ್ತವೆ ಎನ್ನುವ ಮಾಹಿತಿ ಇದೆ.
ಮಾರ್ಚ್ 17ರಂದು 2,520 ಕ್ಯೂಬಿಕ್ ಮೀಟರ್ ಕಾಂಕ್ರೀಟ್ ಸ್ಲ್ಯಾಬ್ ಅನ್ನು 42 ಗಂಟೆಗಳ ಕಾಲ ತಡೆರಹಿತವಾಗಿ ಹಾಕಲಾಗಿತ್ತು. ಸ್ಲ್ಯಾಬ್ಗೆ ಇದೀಗ 28 ದಿನಗಳ ಕ್ಯೂರಿಂಗ್ ಅಗತ್ಯ ಇದ್ದು, ಏಪ್ರಿಲ್ 15ರ ವೇಳಗೆ ಸಿದ್ಧ ಆಗಲಿದೆ. ಬಳಿಜ ಮತ್ತೊಂದಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ಅಧಿಕಾರಿಕಾರಿಗಳಿಂದ ಮಾಹಿತಿ ಲಭ್ಯವಾಗಿದೆ.
ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ನಲ್ಲಿ 5 ಲೂಪ್ಗಳು ಮತ್ತು ರ್ಯಾಂಪ್ಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಅವುಗಳು ರಾಗಿಗುಡ್ಡದಿಂದ ಹೊಸೂರು ರಸ್ತೆ, ರಾಗಿಗುಡ್ಡದಿಂದ ಕೆಆರ್ ಪುರಂ, ಎಚ್ಎಸ್ಆರ್ ಲೇಔಟ್ನಿಂದ ರಾಗಿಗುಡ್ಡ, ಬಿಟಿಎಂ ಲೇಔಟ್ನ ನೆಲಮಟ್ಟದಿಂದ ಫ್ಲೈಓವರ್ ರಸ್ತೆಯ ಮೊದಲ ಹಂತ ಮತ್ತು ಮೊದಲ ಹಂತದ ಫ್ಲೈಓವರ್ ರಸ್ತೆಯ ಮೊದಲ ಹಂತದಿಂದ ಬಿಟಿಎಂ ಲೇಔಟ್ನ ನೆಲ ಮಟ್ಟದ ಕಡೆಗೆ ಕಾರ್ಯನಿರ್ವಹಿಸಲಿವೆ ಎಂದು ಅಧಿಕಾರಿಗಳಿ ಮಾಹಿತಿ ನೀಡಿದ್ದಾರೆ.
ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ಹೊರ ವರ್ತುಲ ರಸ್ತೆ (2ಎ ಹಂತ) ಮತ್ತು ಆರ್ವಿ ರಸ್ತೆಯಿಂದ ಬೊಮ್ಮಸಂದ್ರ ಮಾರ್ಗದ (ರೀಚ್) BMRCL 2ಎ ಮಾರ್ಗದ ಇಂಟರ್ ಚೆಂಜ್ ಆಗಲಿದೆ. ಡಿಸೆಂಬರ್ನಲ್ಲಿ ರಿಟರ್ನ್ ದಿಕ್ಕಿನ ರಸ್ತೆ ಕಾರ್ಯಾರಂಭ ಮಾಡಲಿದೆ. ಈ ಜಂಕ್ಷನ್ ದಕ್ಷಿಣ ಭಾರತದ ಅತ್ಯಂತ ಕೆಟ್ಟ ಚಾಕ್ ಪಾಯಿಂಟ್ ಎಂದು ಗುರುತಿಸಲಾಗಿದೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications