ಸಾರಕ್ಕಿ ಕೆರೆ ತೆರವು: 2 ಸಾವಿರ ಕೋಟಿ ಮೌಲ್ಯದ ಜಾಗ ವಶ
ಬೆಂಗಳೂರು, ಏ. 16: 'ಅಲ್ಲಾ ಸ್ವಾಮಿ, ನಮ್ಮನ್ನು ತೆರವು ಮಾಡಿ ಏನೂ ಪ್ರಯೋಜನ? ಹೆಂಡತಿ ಮಕ್ಕಳನ್ನು ಕಟ್ಟಿಕೊಂಡು ಎಲ್ಲಿಗೆ ಹೋಗಬೇಕು? ಕೆರೆ ಜಾಗವನ್ನು ಸೈಟ್ ಆಗಿ ಪರಿವರ್ತಿಸಿ ಮಾರಾಟ ಮಾಡಿ ಹಣ ಜೇಬಿಗಿಳಿಸಿಕೊಂಡವರನ್ನು ಮೊದಲು ಹಿಡಿಯಿರಿ' ಇದು ಕೆರೆ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಮನೆ ಕಳೆದುಕೊಂಡವರ ಆಕ್ರೋಶಭರಿತ ಮಾತುಗಳು.
ಬೆಂಗಳೂರು ನಗರ ಜಿಲ್ಲಾಧಿಕಾರಿ ಆದೇಶದಂತೆ ನಗರದ ಜೆಪಿ ನಗರ ಸಾರಕ್ಕಿ ಕೆರೆ, ಪುಟ್ಟೇನಳ್ಳಿ ಕರೆ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ 32 ಎಕರೆ ಜಾಗವನ್ನು ಪೊಲೀಸ್ ಭದ್ರತೆಯಲ್ಲಿ ತೆರವು ಮಾಡಲಾಗುತ್ತಿದೆ. ಒಟ್ಟು 82 ಎಕರೆ ವ್ಯಾಪ್ತಿಯಲ್ಲಿ ಇದ್ದ ಕೆರೆಯ ಕಾಲು ಭಾಗಕ್ಕಿಂತ ಹೆಚ್ಚಿನದನ್ನು ಒತ್ತುವರಿ ಮಾಡಲಾಗಿತ್ತು.[ಮೊದಲಿನ ಸೌಂದರ್ಯಕ್ಕೆ ಮರಳಲಿದೆ ಪುಟ್ಟೇನಹಳ್ಳಿ ಕೆರೆ]

ಕರೆ ಒತ್ತುವರಿ ಕಾರ್ಯಾಚರಣೆ ಇನ್ನು ಎರಡು ದಿನ ಮುಂದುವರಿಯಲಿದೆ. ಪೊಲೀಸ್ ಇಲಾಖೆ, ಅರೆ ಸೇನಾ ತುಕಡಿ ಎಲ್ಲ ನೆರವು ಪಡೆದುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವಿ. ಶಂಕರ್ ತಿಳಿಸಿದ್ದಾರೆ.[ಯಡಿಯೂರು ಕೆರೆ ಮೇಲೊಂದು ಪಕ್ಷಿ ನೋಟ]
'ನಿಮ್ಮ ಕೆರೆ ನೀವು ರಕ್ಷಿಸಿ, ನಾಳೆಯ ನಿಮ್ಮ ಪೀಳಿಗೆಗೆ' , ಎಂಬ ಹೆಸರಿನಲ್ಲಿ ತೆರವು ಕಾರ್ಯಾಚರಣೆ ಕೈಗೊಂಡಿರುವ ಜಿಲ್ಲಾಡಳಿತ ಈ ಮೊದಲು ನ್ಯಾಯಾಲಯದ ಅನುಮತಿಯನ್ನು ಪಡೆದಿತ್ತು. ಅಲ್ಲದೇ ಒತ್ತುವರಿದಾರರಿಗೆ ಸ್ವಯಂ ಪ್ರೇರಿತವಾಗಿ ತೆರವು ಮಾಡಲು ದಿನಾಂಕವನ್ನು ನಿಗದಿ ಮಾಡಿತ್ತು.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion












Click it and Unblock the Notifications