ನೋಡನೊಡುತ್ತಿದ್ದಂತೆ ನಡು ರಸ್ತೆಯಲ್ಲಿ ಧಗಧಗಿಸಿದ ಕಾರು: ಬೆಂಗಳೂರಿನಲ್ಲಿ ವಾಹನ ಸವಾರರ ಪರದಾಟ
ಬೆಂಗಳೂರು ಜನವರಿ 12: ಬೆಂಗಳೂರಿನಲ್ಲಿ ನೋಡನೋಡುತ್ತಿದ್ದಂತೆ ಕಾರೊಂದು ಹೊತ್ತಿ ಉರಿದಿದೆ. ಕಳೆದ ದಿನ ರಾತ್ರಿ ನಡು ರಸ್ತೆಯಲ್ಲಿ ಚಲಿಸುತ್ತಿದ್ದ ಕಾರೊಂದಕ್ಕೆ ಬೆಂಕಿ ಹೊತ್ತುಕೊಂಡಿದ್ದು ಇದರಿಂದಾಗಿ ಎರಡು ಗಂಟೆಗಳ ಕಾಲ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ.
ಆಗ್ನೇಯ ಬೆಂಗಳೂರಿನ ದೊಡ್ಡನೆಕುಂಡಿ (Doddanekundi) ಬಳಿಯ ಹೊರ ವರ್ತುಲ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರೊಂದಕ್ಕೆ ಮಂಗಳವಾರ ರಾತ್ರಿ ಬೆಂಕಿ ಹೊತ್ತಿ ಉರಿದಿದೆ. ರಾತ್ರಿ 7.30 ರ ಸುಮಾರಿಗೆ ಬಿಳಿ ಮಾರುತಿ ಸುಜುಕಿ ಎರ್ಟಿಗಾ ಇದ್ದಕ್ಕಿದ್ದಂತೆ ಧಗಧಗಿಸಿದೆ. ಸಂಚಾರ ಪೊಲೀಸರ ಪ್ರಕಾರ, ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಶಾರ್ಟ್ ಸರ್ಕ್ಯೂಟ್ ನಿಂದ ಇದು ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಬೆಂಕಿಯ ಜ್ವಾಲೆಗೆ ರಸ್ತೆಯಲ್ಲಿ ಇದ್ದ ವಾಹನ ಸವಾರರು ರಸ್ತೆ ಬದಿ ಓಡಿ ಬಂದಿದ್ದಾರೆ. ಕಣ್ಣೆದುರೇ ಕಾರು ಸುಟ್ಟು ಕರಕಲಾಗಿದೆ.

ರಾತ್ರಿ 7.30ಕ್ಕೆ ಅಗ್ನಿಶಾಮಕ ನಿಯಂತ್ರಣ ಕೊಠಡಿಗೆ ಕರೆ ಮಾಡಲಾಯಿತು. ಮಹದೇವಪುರ ಅಗ್ನಿಶಾಮಕ ಠಾಣೆಯಿಂದ ಅಗ್ನಿಶಾಮಕ ದಳದ ವಾಹನವನ್ನು ಕಳುಹಿಸಲಾಯಿತು. ಒಂದು ಗಂಟೆಯೊಳಗೆ ಬೆಂಕಿಯನ್ನು ನಂದಿಸಲಾಯಿತು. ಆದರೆ ಅಷ್ಟು ಹೊತ್ತಿಗಾಗಲೇ ಕಾರು ಸುಟ್ಟು ಭಸ್ಮವಾಗಿದೆ. ಅಲ್ಲದೆ ಸಾಲುಗಟ್ಟಿ ವಾಹನಗಳು ನಿಂತು ಸವಾರರು ಪರದಾಡುವಂತಾಗಿದೆ.
ಅಗ್ನಿಶಾಮಕ ಸುರಕ್ಷತಾ ಅಧಿಕಾರಿಗಳು ಬೆಂಕಿಯನ್ನು ನಂದಿಸಿ ಕಾರನ್ನು ತೆರವುಗೊಳಿಸುವಷ್ಟರಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಒಂದು ಗಂಟೆಗೂ ಹೆಚ್ಚು ಕಾಲ ವಾಹನಗಳು ನಿಲ್ಲಬೇಕಾದ ಸ್ಥಿತಿ ನಿರ್ಮಾಣವಾಗಿತ್ತು. ರಾತ್ರಿ 8.30ರ ಹೊತ್ತಿಗೆ ವಾಹನ ಸಂಚಾರ ನಿಧಾನವಾಗಿ ಪುನರಾರಂಭವಾಯಿತು ಮತ್ತು ರಾತ್ರಿ 10 ಗಂಟೆಯ ಹೊತ್ತಿಗೆ ಎಲ್ಲಾ ವಾಹನಗಳು ಎಂದಿನಂತೆ ಪ್ರಯಾಣಿಸಲಾರಂಭಿಸಿದವು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications