ನೋಡನೊಡುತ್ತಿದ್ದಂತೆ ನಡು ರಸ್ತೆಯಲ್ಲಿ ಧಗಧಗಿಸಿದ ಕಾರು: ಬೆಂಗಳೂರಿನಲ್ಲಿ ವಾಹನ ಸವಾರರ ಪರದಾಟ
ಬೆಂಗಳೂರು ಜನವರಿ 12: ಬೆಂಗಳೂರಿನಲ್ಲಿ ನೋಡನೋಡುತ್ತಿದ್ದಂತೆ ಕಾರೊಂದು ಹೊತ್ತಿ ಉರಿದಿದೆ. ಕಳೆದ ದಿನ ರಾತ್ರಿ ನಡು ರಸ್ತೆಯಲ್ಲಿ ಚಲಿಸುತ್ತಿದ್ದ ಕಾರೊಂದಕ್ಕೆ ಬೆಂಕಿ ಹೊತ್ತುಕೊಂಡಿದ್ದು ಇದರಿಂದಾಗಿ ಎರಡು ಗಂಟೆಗಳ ಕಾಲ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ.
ಆಗ್ನೇಯ ಬೆಂಗಳೂರಿನ ದೊಡ್ಡನೆಕುಂಡಿ (Doddanekundi) ಬಳಿಯ ಹೊರ ವರ್ತುಲ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರೊಂದಕ್ಕೆ ಮಂಗಳವಾರ ರಾತ್ರಿ ಬೆಂಕಿ ಹೊತ್ತಿ ಉರಿದಿದೆ. ರಾತ್ರಿ 7.30 ರ ಸುಮಾರಿಗೆ ಬಿಳಿ ಮಾರುತಿ ಸುಜುಕಿ ಎರ್ಟಿಗಾ ಇದ್ದಕ್ಕಿದ್ದಂತೆ ಧಗಧಗಿಸಿದೆ. ಸಂಚಾರ ಪೊಲೀಸರ ಪ್ರಕಾರ, ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಶಾರ್ಟ್ ಸರ್ಕ್ಯೂಟ್ ನಿಂದ ಇದು ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಬೆಂಕಿಯ ಜ್ವಾಲೆಗೆ ರಸ್ತೆಯಲ್ಲಿ ಇದ್ದ ವಾಹನ ಸವಾರರು ರಸ್ತೆ ಬದಿ ಓಡಿ ಬಂದಿದ್ದಾರೆ. ಕಣ್ಣೆದುರೇ ಕಾರು ಸುಟ್ಟು ಕರಕಲಾಗಿದೆ.

ರಾತ್ರಿ 7.30ಕ್ಕೆ ಅಗ್ನಿಶಾಮಕ ನಿಯಂತ್ರಣ ಕೊಠಡಿಗೆ ಕರೆ ಮಾಡಲಾಯಿತು. ಮಹದೇವಪುರ ಅಗ್ನಿಶಾಮಕ ಠಾಣೆಯಿಂದ ಅಗ್ನಿಶಾಮಕ ದಳದ ವಾಹನವನ್ನು ಕಳುಹಿಸಲಾಯಿತು. ಒಂದು ಗಂಟೆಯೊಳಗೆ ಬೆಂಕಿಯನ್ನು ನಂದಿಸಲಾಯಿತು. ಆದರೆ ಅಷ್ಟು ಹೊತ್ತಿಗಾಗಲೇ ಕಾರು ಸುಟ್ಟು ಭಸ್ಮವಾಗಿದೆ. ಅಲ್ಲದೆ ಸಾಲುಗಟ್ಟಿ ವಾಹನಗಳು ನಿಂತು ಸವಾರರು ಪರದಾಡುವಂತಾಗಿದೆ.
ಅಗ್ನಿಶಾಮಕ ಸುರಕ್ಷತಾ ಅಧಿಕಾರಿಗಳು ಬೆಂಕಿಯನ್ನು ನಂದಿಸಿ ಕಾರನ್ನು ತೆರವುಗೊಳಿಸುವಷ್ಟರಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಒಂದು ಗಂಟೆಗೂ ಹೆಚ್ಚು ಕಾಲ ವಾಹನಗಳು ನಿಲ್ಲಬೇಕಾದ ಸ್ಥಿತಿ ನಿರ್ಮಾಣವಾಗಿತ್ತು. ರಾತ್ರಿ 8.30ರ ಹೊತ್ತಿಗೆ ವಾಹನ ಸಂಚಾರ ನಿಧಾನವಾಗಿ ಪುನರಾರಂಭವಾಯಿತು ಮತ್ತು ರಾತ್ರಿ 10 ಗಂಟೆಯ ಹೊತ್ತಿಗೆ ಎಲ್ಲಾ ವಾಹನಗಳು ಎಂದಿನಂತೆ ಪ್ರಯಾಣಿಸಲಾರಂಭಿಸಿದವು.
-
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ












Click it and Unblock the Notifications