Rameshwaram Cafe Income: ರಾಮೇಶ್ವರಂ ಕೆಫೆಯ ತಿಂಗಳ ಆದಾಯ ಬರೋಬ್ಬರಿ ₹4.5 ಕೋಟಿ-ಇದು ಹೇಗೆ ಸಾಧ್ಯ?-ಮಾಹಿತಿ ಇಲ್ಲಿದೆ
ಬೆಂಗಳೂರಿನ ಹೆಚ್ಎಎಲ್ ಬಳಿಯ ರಾಮೇಶ್ವರಂ ಕೆಫೆಯು ತಿಂಗಳಿಗೆ ₹4.5 ಕೋಟಿ, ವಾರ್ಷಿಕವಾಗಿ ₹50 ಕೋಟಿಗೂ ಹೆಚ್ಚು ಆದಾಯವನ್ನು ಗಳಿಸುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಇದು ಹೇಗೆ ಹಾಗೂ ಇಷ್ಟು ದೊಡ್ಡ ಮಟ್ಟದ ಆದಾಯ ಗಳಿಸುವ ಮಟ್ಟಕ್ಕೆ ಬೆಳೆಯಲು ಹೇಗೆ ಸಾಧ್ಯ ಎನ್ನುವ ಇಂಚಿಂಚು ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬೆಂಗಳೂರಿನಲ್ಲಿರುವ ರಾಮೇಶ್ವರಂ ಕೆಫೆಯನ್ನು ಇಂಟರ್ನೆಟ್ ಬಳಕೆದಾರರು ಹೇಗೆ ಪ್ರಾರಂಭಿಸಿದರು ಮತ್ತು ಅದರ ಖ್ಯಾತಿಯ ಪ್ರಯಾಣದ ವಿವರಗಳನ್ನು ಹಂಚಿಕೊಂಡ ನಂತರ ಮತ್ತೆ ಸುದ್ದಿಯಲ್ಲಿದೆ. ಆದರೆ ಎಲ್ಲಕ್ಕಿಂತ ಮುಖ್ಯವಾಗಿ ಸಾಮಾಜಿಕ ಜಾಲತಾಣ ಬಳಕೆದಾರರ ಕಣ್ಣಿಗೆ ಬಿದ್ದದ್ದು ಅದರ ಮಾಸಿಕ ಗಳಿಕೆ!

ಈ ರೆಸ್ಟೋರೆಂಟ್ ತಿಂಗಳಿಗೆ ₹4.5 ಕೋಟಿ, ವಾರ್ಷಿಕವಾಗಿ ₹50 ಕೋಟಿಗೂ ಹೆಚ್ಚು ಆದಾಯವನ್ನು ಗಳಿಸುತ್ತದೆ. ಬೆಂಗಳೂರಿನ ಗ್ರಾಹಕರ ಬೇಡಿಕೆಗೆ ತಕ್ಕಂತೆ ಆಹಾರವನ್ನು "ರಾಮೇಶ್ವರಂ ಕೆಫೆ" ನೀಡುತ್ತದೆ. ಇನ್ನು ಇದನ್ನು ಪ್ರಾರಂಭಿಸಿದ ಸಿಎ ಮತ್ತು ಫುಟ್ ಕಾರ್ಟ್ ಮಾಲೀಕರ ಬಗ್ಗೆ ಇಲ್ಲಿ ತಿಳಿಯಿರಿ. ಈ ರಾಮೇಶ್ವರಂ ಕೆಫೆಯು ಪ್ರತಿ ತಿಂಗಳು ₹4.5 ಕೋಟಿ ಆದಾಯ ಗಳಿಸುತ್ತಿದೆ ಎಂದು ಬಳಕೆದಾರ, ಸೇಜಲ್ ಸುದ್ ಎನ್ನುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
Meet the CA & Foot Cart Owner who started Bangalore’s most coveted food chain “Rameshwaram Cafe”
— Sejal Sud (@SejalSud) December 11, 2023
It is said to do a ₹4.5 Crore/ Monthly business per store.
A thread 🧵 pic.twitter.com/cZ9kozFs6G
ಈ ರೆಸ್ಟೋರೆಂಟ್ ತುಪ್ಪದ ಪೋಡಿ ಇಡ್ಲಿ ಮತ್ತು ಮಸಾಲೆ ದೋಸೆ ಸೇರಿದಂತೆ ದಕ್ಷಿಣ ಭಾರತದ ಸಾಂಪ್ರದಾಯಿಕ ಉಪಹಾರಕ್ಕಾಗಿ ಹೆಸರುವಾಸಿಯಾಗಿದೆ. ಇದರ ಸಂಸ್ಥಾಪಕರಾದ ದಿವ್ಯಾ ಮತ್ತು ರಾಘವೇಂದ್ರ ರಾವ್ ಅವರು ಪರಸ್ಪರ ಸ್ನೇಹಿತರ ಮೂಲಕ ಭೇಟಿಯಾಗಿ 2021ರಲ್ಲಿ ಇಂದಿರಾನಗರದಲ್ಲಿ ರೆಸ್ಟೋರೆಂಟ್ನ ಮೊದಲ ಶಾಖೆಯನ್ನು ಪ್ರಾರಂಭಿಸಿದರು.
ದಿವ್ಯಾ ಅವರು ಐಐಎಂ ಅಹಮದಾಬಾದ್ನಲ್ಲಿ ಸ್ನಾತಕೋತ್ತರ ಪದವಿ ಪಡೆದರು ಸಿಎ ಆಗಿದ್ದರು. ಇನ್ನು ರಾಘವೇಂದ್ರ ಅವರು ಶೇಷಾದ್ರಿಪುರಂನಲ್ಲಿ ಆಹಾರ ಕಾರ್ಟ್ನಿಂದ ದೋಸೆ ಮತ್ತು ಇಡ್ಲಿಗಳನ್ನು ಬಡಿಸುತ್ತಾ 15 ವರ್ಷಗಳಿಂದ ಆಹಾರ ಉದ್ಯಮದಲ್ಲಿ ಕೆಲಸ ಮಾಡುತ್ತಿದ್ದರು.
ಈ ರೆಸ್ಟೋರೆಂಟ್ನ ಪ್ರಾರಂಭ ಮತ್ತು ವಿಸ್ತರಣೆಯ ಕುರಿತು ಈ ಟ್ವೀಟ್ನಲ್ಲಿ ಮಾಹಿತಿ ನೀಡಿದ್ದಾರೆ. ಇವರು ಉತ್ತಮ ಆಹಾರಗಳನ್ನು ನೀಡುವ ಮೂಲಕ ಜನರ ಹೃದಯಗಳನ್ನು ಗೆದ್ದಿದ್ದಾರೆ. ಅಲ್ಲದೆ, 200ಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡುವ ಮೂಲಕ ಗಮನ ಸೆಳೆದಿದ್ದಾರೆ.
"ಇನ್ನು ಬೆಂಗಳೂರಿನಲ್ಲಿ ಹೆಚ್ಚಿನ ಮಳಿಗೆಗಳನ್ನು ತೆರೆದಿದ್ದಾರೆ ಮತ್ತು ಭಾರತ, ವಿದೇಶಗಳಲ್ಲಿನ ಇತರ ನಗರಗಳಲ್ಲೂ ಮಳಿಗೆಗಳನ್ನು ತೆರೆಯಲು ಯೋಜನೆ ರೂಪಿಸಿದ್ದಾರೆ. ಇದರ ಸಂಸ್ಥಾಪಕರು ತಮ್ಮ ಬ್ರ್ಯಾಂಡ್ ಅನ್ನು ಜಾಗತಿಕ ಉಪಸ್ಥಿತಿಯೊಂದಿಗೆ ಫ್ರಾಂಚೈಸ್ ಮಾಡುವ ದೊಡ್ಡ ಗುರಿಯನ್ನು ಹೊಂದಿದ್ದಾರೆ. ಅವರು ಹೆಚ್ಚು ಹೊಸ ಮತ್ತು ಆರೋಗ್ಯಕರ ಭಕ್ಷ್ಯಗಳನ್ನು ಪರಿಚಯಿಸುವ ಗುರಿಯನ್ನು ಹೊಂದಿದ್ದಾರೆ" ಎಂದು ಸುದ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
"ರಾಮೇಶ್ವರಂ ಕೆಫೆಯು ಆಹಾರದ ಮೇಲಿನ ಉತ್ಸಾಹ, ಶ್ರೇಷ್ಠತೆಯ ದೃಷ್ಟಿ ಮತ್ತು ವಿಶ್ವಾಸದ ಪಾಲುದಾರಿಕೆಯು ಲಕ್ಷಾಂತರ ಜನರ ಹೃದಯವನ್ನು ಗೆದ್ದಿದ್ದಾರೆ. ಮತ್ತು ಗಮನಾರ್ಹ ಬ್ರ್ಯಾಂಡ್ ಅನ್ನು ಹೇಗೆ ರಚಿಸಬಹುದು ಎಂಬುದಕ್ಕೆ ಒಂದು ಉಜ್ವಲ ಉದಾಹರಣೆಯಾಗಿದೆ" ಎಂದು ಅವರು ತಮ್ಮ ಕೊನೆಯ ಪೋಸ್ಟ್ನಲ್ಲಿ ಹೇಳಿದ್ದಾರೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications