Nandi Hills: ನಂದಿ ಹಿಲ್ಸ್ನಲ್ಲೂ ಭಾರಿ ಟ್ರಾಫಿಕ್: ಪ್ರವಾಸಿಗರು ಹೈರಾಣ
ಭಾರಿ ಟ್ರಾಫಿಕ್ನಿಂದ ಬೆಂಗಳೂರಿಗರು ಹೈರಾಣಾಗಿದ್ದಾರೆ, ಸುಧೀರ್ಘ ವಾರಾಂತ್ಯ ಇದೆ ಎಂದು ರಿಲೀಫ್ ಆಗಲು ಬೆಂಗಳೂರಿನಿಂದ ಹೊರ ಹೋದರೆ ಅಲ್ಲೂ ಟ್ರಾಫಿಕ್ ಕಿರಿ ಕಿರಿ ಕಾಡಿದೆ. ಹೌದು, ಬೆಂಗಳೂರಿಗೆ ಸಮೀಪವಿರುವ ನಂದಿ ಹಿಲ್ಸ್ನಲ್ಲಿ ಭಾರಿ ಟ್ರಾಫಿಕ್ ಉಂಟಾಗಿದ್ದು ಪ್ರವಾಸಿಗರು ಹೈರಾಣಾಗಿದ್ದಾರೆ.
ಸುದೀರ್ಘ ವಾರಾಂತ್ಯದಲ್ಲಿ ಐಕಾನಿಕ್ ಪ್ರವಾಸಿ ತಾಣಕ್ಕೆ ಭಾರಿ ಜನಸಾಗರ ಹರಿದು ಬಂದ ಹಿನ್ನೆಲೆಯಲ್ಲಿ ಶನಿವಾರ ಮತ್ತು ಭಾನುವಾರ ಭಾರಿ ಸಂಚಾರ ದಟ್ಟಣೆ ಉಂಟಾಗಿತ್ತು. ನಂದಿ ಬೆಟ್ಟದ ಮೇಲಿನ ಭಾರಿ ಟ್ರಾಫಿಕ್ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬೆಟ್ಟದ ತುದಿಯನ್ನು ತಲುಪುವ ಮಾರ್ಗದಲ್ಲಿ ವಾಹನಗಳು ಗಿಜಿಗುಡುತ್ತಿವೆ.

ಸಾಮಾನ್ಯವಾಗಿ ಸೂರ್ಯೋದಯದ ಸಮಯದಲ್ಲಿ ಬೆಟ್ಟದ ತುದಿಯನ್ನು ತಲುಪಲು ಬೈಕರ್ಗಳು ಮತ್ತು ಕಾರು ಚಾಲಕರು ಗಂಟೆಗಳ ಕಾಲ ಕಾಯಬೇಕಾಯಿತು. ಪ್ರತಿ ವಾರಾಂತ್ಯದಲ್ಲಿ ನಂದಿ ಬೆಟ್ಟದಲ್ಲಿ ಭಾರಿ ಟ್ರಾಫಿಕ್ ಜಾಮ್ ಸಾಮಾನ್ಯ ಸಂಗತಿಯಾಗಿದೆ, ಏಕೆಂದರೆ ಸಾವಿರಾರು ಜನರು ಈ ಸ್ಥಳವನ್ನು ವಿಹಾರಕ್ಕೆ ಆಯ್ಕೆ ಮಾಡುತ್ತಾರೆ ಆದರೆ ಶನಿವಾರ ಮತ್ತು ಭಾನುವಾರದಂದು ಟ್ರಾಫಿಕ್ ಉಸಿರುಗಟ್ಟಿಸುವುದು ಇತ್ತೀಚಿನ ದಿನಗಳಲ್ಲಿ ಅತ್ಯಂತ ನಿರಾಶಾದಾಯಕವಾಗಿದೆ ಎಂದು ಹೇಳಲಾಗುತ್ತದೆ.
ನಂದಿ ಬೆಟ್ಟಕ್ಕೆ ವಾಹನ ಸಂಚಾರವನ್ನು ನಿರ್ಬಂಧಿಸಬೇಕು ಮತ್ತು ಬೆಟ್ಟದ ತುದಿಗೆ ಸಾರ್ವಜನಿಕ ಸಾರಿಗೆಯನ್ನು ಸೇರಿಸಬೇಕೆಂದು ಪರಿಸರ ಹೋರಾಟಗಾರರ ಬಹುಕಾಲದ ಬೇಡಿಕೆಯಾಗಿದೆ. ಶೀಘ್ರದಲ್ಲೇ ಇದನ್ನು ಜಾರಿ ಮಾಡುವುದಾಗಿ ಸರ್ಕಾರ ಕೂಡ ಭರವಸೆ ನೀಡಿದೆ.
Bengaluru Traffic: Over A Kilometre Long Traffic Seen At Nandi Hills As Extended Weekend Gets Underway (WATCH)
— Balanced Report (@reportbalanced) October 1, 2023
Nandi Hills which is nearly 60 kilometers away from the main city witnessed a huge crowd with an influx of visitors and their vehicles.pic.twitter.com/kZqULAz9Jn
ಬೆಂಗಳೂರು ಟ್ರಾಫಿಕ್ನಿಂದ ಸುಸ್ತಾದ ಜನ
ಬೆಂಗಳೂರಿನ ಹೊರ ವರ್ತುಲ ರಸ್ತೆಯಲ್ಲಿ ಸೆಪ್ಟೆಂಬರ್ 27 ರಂದು ಸಂಭವಿಸಿದ ಟ್ರಾಫಿಕ್ ಜಾಮ್ ಐದು ಕಿಲೋಮೀಟರ್ಗಳಿಗಿಂತ ಕಡಿಮೆ ದೂರವನ್ನು ಕ್ರಮಿಸಲು ಎರಡರಿಂದ ಮೂರು ಗಂಟೆಗಳನ್ನು ತೆಗೆದುಕೊಂಡಿದ್ದರಿಂದ ಪ್ರಯಾಣಿಕರು ಭಾರಿ ತೊಂದರೆ ಅನುಭವಿಸಿದರು.
ಸಾಮಾನ್ಯವಾಗಿ ಬುಧವಾರದಂದು ವಾಹನಗಳ ಸಂಖ್ಯೆ 150,000 ರಿಂದ 200,000 ವರೆಗೆ ಇರುತ್ತದೆ. ಆದಾಗ್ಯೂ, ಸೆಪ್ಟೆಂಬರ್ 27 ರಂದು, ರಾತ್ರಿ 7.30 ರ ಹೊತ್ತಿಗೆ ರಸ್ತೆಯಲ್ಲಿ ವಾಹನಗಳ ಸಂಖ್ಯೆಯು 350,000 ಕ್ಕೆ ಏರಿತು ಎಂದು ಪೊಲೀಸರು ತಿಳಿಸಿದ್ದರು.
ಹೊರ ವರ್ತುಲ ರಸ್ತೆ ಕಂಪನಿಗಳ ಸಂಘದ (ಒಆರ್ಆರ್ಸಿಎ) ಸದಸ್ಯರು ಶನಿವಾರ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ನಗರದ ಒಆರ್ಆರ್ ಸ್ಟ್ರೆಚ್ನಲ್ಲಿ ಪೀಕ್ ಅವರ್ನಲ್ಲಿ ಟ್ರಾಫಿಕ್ ದಟ್ಟಣೆಯನ್ನು ತಪ್ಪಿಸುವ ಯೋಜನೆ ಕುರಿತು ಚರ್ಚಿಸಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications