ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ "ಬೆಂಗಳೂರು ಉತ್ಸವ"
ಬೆಂಗಳೂರು, ಮೇ 1: ಗ್ರಾಂಡ್ ಫ್ಲಿಯಾ ಮಾರ್ಕೇಟ್ ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ ಮೇ 3 ರಿಂದ ಮೇ 12 ರ ವರೆಗೆ ದೇಶದ ಎಲ್ಲಾ ಭಾಗಗಳ ಕಲಾವಿದರ ಕಲಾಕೃತಿಗಳ ಪ್ರದರ್ಶನ ಹಾಗೂ ಮಾರಾಟ ಮೇಳ "ಬೆಂಗಳೂರು ಉತ್ಸವ" ವನ್ನು ಆಯೋಜಿಸಿದೆ.
ಬೆಂಗಳೂರು ಉತ್ಸವದ ಮೂಲಕ ನೇಕಾರರು ಮತ್ತು ಕುಶಲಕರ್ಮಿಗಳು ಉತ್ಪಾದಿಸುವ ಉತ್ಪನ್ನಗಳಿಗೆ ದೇಶದ ಮುಖ್ಯ ನಗರಗಳಲ್ಲಿ ಮಾರಾಟ ಮೇಳವನ್ನು ಆಯೋಜಿಸುವ ಮೂಲಕ ನೇರವಾಗಿ ಅವರ ಉತ್ಪನ್ನಗಳು ಗ್ರಾಹಕರಿಗೆ ತಲುಪಿಸುವಂತೆ ವ್ಯವಸ್ಥೆ ಮಾಡುವುದು ಮತ್ತು ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇಕಾರರೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಿ ಲಾಭವನ್ನು ಹೆಚ್ಚು ಗಳಿಸುವಂತೆ ಮಾಡುವ ಉದ್ದೇಶವನ್ನು ಈ ಮೇಳವು ಹೊಂದಿದೆ.
ಅದರಂತೆ ಬೆಂಗಳೂರಿನಲ್ಲಿ ಬೇಸಿಗೆ ರಜಾವನ್ನು ಗಮನದಲ್ಲಿಟ್ಟುಕೊಂಡು "ಬೆಂಗಳೂರು ಉತ್ಸವ-2019" ಸಮ್ಮರ್ ಶಾಪಿಂಗ್ ಕಾರ್ನಿವಲ್ ಮೇಳವನ್ನು ಮೇ 3 ರಿಂದ ಮೇ 12 ರ ವರೆಗೆ 10 ದಿವಸಗಳ ಕಾಲ ಚಿತ್ರಕಲಾ ಪರಿಷತ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿಗೆ ಭೇಟಿ ನೀಡುವ ಪ್ರವಾಸಿಗರು ಹಾಗೂ ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರು 10 ದಿವಸಗಳ ಈ ವಿಶಿಷ್ಟ ಬೆಂಗಳೂರು ಉತ್ಸವ ಮೇಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿ ಉತ್ಪಾದಕರನ್ನು ಪ್ರೋತ್ಸಾಹಿಸಬೇಕೆಂದು ಈ ಮೂಲಕ ಕೋರಲಾಗಿದೆ. ಮೇಳಕ್ಕೆ ಪ್ರವೇಶವನ್ನು ಉಚಿತವಾಗಿ ಕಲ್ಪಿಸಲಾಗಿದೆ.

ಕಾಶ್ಮೀರದಿಂದ ಕಾಂಚಿಪುರಂವರೆಗಿನ ರೇಷ್ಮೆ ಸೀರೆ
ಈ ಮೇಳದಲ್ಲಿ ಕಾಶ್ಮೀರದಿಂದ ಕಾಂಚಿಪುರಂವರೆಗಿನ ರೇಷ್ಮೆ ಸೀರೆ ಉತ್ಪಾದಕರು, ರೇಷ್ಮೆ ಸೀರೆ ವಿನ್ಯಾಸಗಾರರು ಮತ್ತು ರೇಷ್ಮೆ ಸಹಕಾರ ಸಂಘಗಳು 100 ಕ್ಕೂ ಹೆಚ್ಚಿನ ಮಳಿಗೆಗಳಲ್ಲಿ ತಮ್ಮ ರಾಜ್ಯದ ಸಾಂಪ್ರದಾಯಿಕ ರೇಷ್ಮೆ ಸೀರೆ ಮತ್ತು ಕರಕುಶಲ ಉತ್ಪನ್ನಗಳನ್ನು ಬೆಂಗಳೂರು ಜನತೆಯ ಮುಂದೆ ಪ್ರತಿದಿನ ಬೆಳಿಗ್ಗೆ 11 ರಿಂದ ರಾತ್ರಿ 7.30 ರವರೆಗೆ ಪ್ರದರ್ಶಿಸಿ ಮಾರಾಟ ಮಾಡುವರು.ಮೇಳಕ್ಕೆ ಪ್ರವೇಶವನ್ನು ಉಚಿತವಾಗಿ ಕಲ್ಪಿಸಲಾಗಿದೆ.

ಬೆಳ್ಳಿಯ ಸೂಕ್ಷ ಕೆತ್ತನೆಯ ಆಭರಣಗಳು
ಇಲ್ಲಿ ಹುಲ್ಲಿನ ಹಾಸು, ಬೆಳ್ಳಿಯ ಸೂಕ್ಷ ಕೆತ್ತನೆಯ ಆಭರಣಗಳು, ಸೆಣಬಿನ ಚಪ್ಪಲಿ, ಅಂದದ ಆಟಿಕೆಗಳು, ಜವಳಿ ಮತ್ತು ಕಚೇರಿಗೆ ಉಪಯುಕ್ತ ಸಾಮಾಗ್ರಿಗಳು ಸೇರಿದಂತೆ ಅನೇಕ ಕರಕುಶಲ ವಸ್ತುಗಳು ಲಭ್ಯವಿದೆ. ಈ ಮೇಳದ ಮುಖ್ಯ ಉದ್ದೇಶ ಸಾಂಪ್ರದಾಯಿಕ ಕಲಾಕೌಶಲ್ಯವನ್ನು ಬಳಸಿ ಆಧುನಿಕ ಜೀವನ ಶೈಲಿಗೆ ತಕ್ಕ ಉತ್ಪನ್ನಗಳನ್ನು ತಯಾರಿಸುವುದಾಗಿದೆ. ಪುರಾನಾ ಸಾಹು ಅವರ ಕಣ್ಮನಸೆಳೆಯುವ ಪುರಾತನ ಹಿತ್ತಾಳೆಯ ಕರಕುಶಲವಸ್ತುಗಳು. ಅಲ್ಲದೆ ಅವರ ಸೌರ ಚಿತ್ರಕಲಾಕೃತಿಗಳು ಇಲ್ಲಿ ಲಭ್ಯ. ಪೌರ್ಣ ಚಂದ್ರ ಮೊಹಪಾತ್ರ ಅವರ ಬೆಳ್ಳಿಯ ಆಭರಣಗಳು ಆಧುನಿಕತೆಯ ಹಿನ್ನಲೆಯಲ್ಲಿ ಪುರಾತನ ಸೊಬಗನ್ನು ಬಿಂಬಿಸಲಿವೆ. ಪೆಂಡೆಟ್ಗಳು, ಬಳೆಗಳು, ಹೇರ್ ಪಿನ್ಗಳು ಅಲ್ಲದೆ ಮುತ್ತಿನ ಆಭರಣದ ಕುಂಕುಮ ಬಾಕ್ಸ್ಗಳು ಇಲ್ಲಿ ಲಭ್ಯವಿವೆ.

ಪರಿಸರ ಸ್ನೇಹಿ ಕರಕುಶಲ ವಸ್ತು
ಪರಿಸರ ಸ್ನೇಹಿ ಕರಕುಶಲ ವಸ್ತುಗಳಾದ ಮಧುಕಾಟಿ ಗ್ರಾಸ್ ರನ್ನರ್ಸ್, ಟೇಬಲ್ ಮತ್ತು ನೆಲದ ಮೇಲೆ ಹಾಸುವಂತಹ ಮ್ಯಾಟ್ಗಳು ಹಾಗೂ ಗೋಡೆಯ ಮೇಲೆ ನೇತು ಹಾಕುವ ಮ್ಯಾಟ್ಗಳು ಇಲ್ಲಿ ಲಭ್ಯವಿವೆ. ಮಧುಬನಿ ಕಲಾ ಪ್ರಕಾರದ ವಸ್ತುಗಳು ಇಲ್ಲಿ ಲಭ್ಯವಿವೆ. ರಾಹುಲ್ ಸೇನ್ಗುಪ್ತ ಅವರ ರಚಿತ ಸೆಣಬಿನಿಂದ ತಯಾರಿಸಲ್ಪಟ್ಟ ಚಪ್ಪಲಿಗಳು ಇಲ್ಲಿ ಲಭ್ಯವಿವೆ.

ನ್ಯಾಯಯುತ ಬೆಲೆಯಲ್ಲಿ ದೊರಕುತ್ತದೆ
ಇದಲ್ಲದೆ ಕುರ್ತಾ, ಸ್ಟೋಲ್ಸ್, ಶಾಲುಗಳು, ಸಲ್ವಾರ್ ಕಮೀಜ್ ಮತ್ತು ಉಡುಪಿನ ಬಟ್ಟೆಗಳು, ಕುಶನ್ ಕವರ್ಗಳು ಮತ್ತು ಬೆಡ್ಶೀಟ್ಗಳನ್ನು ಈ ವಸ್ತು ಪ್ರದರ್ಶನದಲ್ಲಿ ಪ್ರದರ್ಶಿಸಿ ಮಾರಾಟ ಮಾಡುವರು. ಈ ವಸ್ತುಗಳನ್ನು ಉತ್ವಾದಕರೆ ನೇರವಾಗಿ ಗ್ರಾಹಕರಿಗೆ ತಲುಪಿಸುತ್ತಿರುವುದರಿಂದ ವಸ್ತುಗಳು ನ್ಯಾಯಯುತ ಬೆಲೆಯಲ್ಲಿ ದೊರಕುತ್ತದೆ.
-
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ












Click it and Unblock the Notifications