Namma Metro: 6ನೇ ಡ್ರೈವರ್ಲೆಸ್ ಮೆಟ್ರೋ ಆಗಮನ, ರೈಲಿಗೆ ಕಾಯುವ ಸಮಯ 12 ನಿಮಿಷಕ್ಕೆ ಇಳಿಕೆ..
ಬೆಂಗಳೂರು, ಡಿಸೆಂಬರ್ 03: ಬೆಂಗಳೂರು ಮೆಟ್ರೋ ರೈಲು ಜಾಲ ವಿಸ್ತರಣೆ ಆಗುತ್ತಿದೆ. ಆದರೆ ಅದಕ್ಕೆ ಅಗತ್ಯವಾದ ರೈಲುಗಳ ಪೂರೈಕೆಯಲ್ಲಿನ ವಿಳಂಬದಿಂದಾಗಿ ಹಳದಿ ಮಾರ್ಗದಲ್ಲಿ ಹೆಚ್ಚು ಸಮಯ ಪ್ರಯಾಣಿಕರು ರೈಲಿಗಾಗಿ ಕಾಯುವಂತಾಗಿದೆ. ಇದಕ್ಕೆ ಮುಕ್ತಿ ನೀಡಲು ಟಿಟಾಘರ್ನಿಂದ 6ನೇ ಡ್ರೈವರ್ಲೆಸ್ ರೈಲು ಬೋಗಿಗಳು ನಗರದ ಹೆಬ್ಬಗೋಡಿಗೆ ಆಗಮಿಸಿದೆ. ಇದೇ ತಿಂಗಳಾಂತ್ಯಕ್ಕೆ ವಾಣಿಜ್ಯ ಸೇವೆಗೆ ನಿಯೋಜನೆಗೊಳ್ಳಲಿದೆ.
ಕಳೆದ ನವೆಂಬರ್ 18ರಂದು ಕೊಲ್ಕತ್ತಾದ ಟಿಟಾಘರ್ ನಿಂದ ಆರ್.ವಿ.ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗದ 6ನೇ ಮೆಟ್ರೋ ರೈಲು ಸೆಟ್ ಅನ್ನು ಲಾರಿ ಮೂಲಕ ಕಳುಹಿಸಲಾಗಿತ್ತು. ಎರಡು ವಾರಗಳ ರಸ್ತೆ ಹೆದ್ದಾರಿ ಪ್ರಯಾಣ ಮುಗಿಸಿದ ಲಾರಿಗಳೂ ಬೆಂಗಳೂರಿನ ಹೆಬ್ಬಗೋಡಿ ಮೆಟ್ರೋ ಡಿಪೋಗೆ ವಾರಾಂತ್ಯಕ್ಕೆ ಆಗಮಿಸಿವೆ. ಒಟ್ಟು 06ಬೋಗಿಗಳ ಪೈಕಿ ಮೂರು ಮೆಟ್ರೋ ಬೋಗಿಗಳು ಆಗಮಿಸಿವೆ.

ಉಳಿದ ಮೂರು ಬೋಗಿಗಳು ಶೀಘ್ರವೇ ಹೆಬ್ಬಗೋಡಿ ಡಿಪೋಗೆ ಬರಲಿವೆ ಎಂದು ಬಿಎಂಆರ್ಸಿಎಲ್ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ರೈಲು ಸೆಟ್ ಸೇವೆ ನಿಯೋಜನೆಗೊಂಡರೆ ಹಳದಿ ಮಾರ್ಗದಲ್ಲಿನ ಮೆಟ್ರೋ ಆವರ್ತನ ಸಮಯ ಇಳಿಕೆ ಆಗಲಿದೆ.
ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ಅಧಿಕಾರಿಗಳು ರೈಲಿನಲ್ಲಿ ಸ್ಥಿರ ಮತ್ತು ಕ್ರಿಯಾತ್ಮಕ ಪರೀಕ್ಷೆಗಳನ್ನು ನಡೆಸಲಿದ್ದಾರೆ. ವಿವಿಧ ಪರೀಕ್ಷೆಗಳು ಪೂರ್ಣಗೊಂಡ ನಂತರ ಅದು ಡಿಸೆಂಬರ್ ಮೂರನೇ ವಾರದಲ್ಲಿ ಪ್ರಯಾಣಿಕರ ಸೇವೆಗೆ ಲಭ್ಯವಾಗಲಿದೆ. ಡಿಸೆಂಬರ್ ಅಂತ್ಯದ ಹೊತ್ತಿಗೆ ಮತ್ತೊಂದು ರೈಲು ಸೇಟ್ ಕೊಲ್ಕತ್ತದಿಂದ ಹೊರಡುವ ನಿರೀಕ್ಷೆ ಇದೆ.
ರೈಲಿಗೆ ಕಾಯುವ ಸಮಯ 12 ನಿಮಿಷಕ್ಕೆ ಇಳಿಕೆ..
ಸದ್ಯ 15-17 ನಿಮಿಷಗಳ ಅಂತರದಲ್ಲಿ ಹಳದಿ ಮಾರ್ಗದಲ್ಲಿ ಮೆಟ್ರೋ ಕಾರ್ಯಾಚರಣೆ ಆಗುತ್ತಿದೆ. ಈ ಆರನೇ ರೈಲಿನ ನಿಯೋಜನೆ ಬಳಿಕ ಅದರ ಆವರ್ತನ ಸಮಯ ಸುಮಾರು 12 ನಿಮಿಷಗಳಿಗೆ ಇಳಿಯುವ ನಿರೀಕ್ಷೆ ಇದೆ. ಡಿಸೆಂಬರ್, ಜನರಿಗೆ ಅಂದುಕೊಂಡಂತೆ ತಿಂಗಳಿಗೆ ಒಂದು ಸೆಟ್ ರೈಲು ಬೆಂಗಳೂರಿಗೆ ಬಂದರೆ, ಫೆಬ್ರವರಿ 2026ರ ಹೊತ್ತಿಗೆ ಎಂಟು ರೈಲುಗಳು ಸಂಚಾರ ಮಾಡಬಹುದೆಂದು ಅಂದಾಜಿಸಲಾಗಿದೆ.
ನಮ್ಮ ಮೆಟ್ರೋ ಜಾಲದ ಪೈಕಿ ನೇರಳೆ ಮಾರ್ಗದಲ್ಲಿ ಮತ್ತು ಹಸಿರು ಮಾರ್ಗಗಳಲ್ಲಿ ಬೆಳಗ್ಗೆ ನಿತ್ಯ 5 ಗಂಟೆಗೆ ಬದಲಾಗಿ ಬೆಳಗ್ಗೆ 6 ಗಂಟೆಗೆ ರೈಲು ಸೇವೆಗಳು ಪ್ರಾರಂಭವಾಗುತ್ತಿವೆ. ಭಾನುವಾರ ಮಾತ್ರ 6 ಗಂಟೆಗೆ ಬದಲಾಗಿ 7 ಗಂಟೆಗೆ ಮೆಟ್ರೋ ಸೇವೆ ಆರಂಭವಾಗುತ್ತದೆ. ಕಳೆದ ಸೋಮವಾರ (ಡಿ.1) ಈ ಹಳದಿ ಮಾರ್ಗದಲ್ಲೂ ಎರಡು ರೈಲು ಸೇವೆ ಬೆಳಗ್ಗೆ 5.5ಗಂಟೆಗೆ ಸೇವೆ ಪ್ರಾರಂಭಿಸಲಾಗಿತ್ತು.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications