ದುಬಾರಿ 'ಬಡ್ಡಿ' ಮಕ್ಕಳ ಮೇಲೆ ಪೊಲೀಸರ ವಿಶೇಷ ಕಾರ್ಯಾಚರಣೆ
ಬೆಂಗಳೂರು, ಜೂನ್ 29: ಕಾನೂನುಬಾಹಿರವಾಗಿ ಬಡ್ಡಿ ವ್ಯವಹಾರದಲ್ಲಿ ತೊಡಗಿದ್ದವರ ಮೇಲೆ, ಬೆಂಗಳೂರು ಉತ್ತರ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ, ಆರು ಜನರನ್ನು ಬಂಧಿಸಿದ್ದಾರೆ, ಜೊತೆಗೆ ಹತ್ತು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಮಲ್ಲೇಶ್ವರಂ, ಯಶವಂತಪುರ ಮತ್ತು ಜೆ ಸಿ ನಗರದ ಎಸಿಪಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಬಂಧಿತರಿಂದ 13ಲಕ್ಷಕ್ಕೂ ಅಧಿಕ ಮೊತ್ತದ ಹಣವನ್ನು ವಶಪಡಿಸಿಕೊಂಡಿದ್ದಾರೆ.
ಹೆಣ್ಣುಮಕ್ಕಳಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದವ ಅಂದರ್
ಅಲ್ಲದೇ, ವಿವಿಧ ಬ್ಯಾಂಕುಗಳ 145 ಖಾಲಿ ಚೆಕ್, ಸ್ಟ್ಯಾಂಪ್ ಪತ್ರ, ಆಸ್ತಿಯ ಶುದ್ದ ಕ್ರಯಪತ್ರ, ಬಾಂಡ್ ಪೇಪರ್, ಜಿಪಿಎ ಪತ್ರ, ವಾಹನ ಅಡಮಾನ ಪತ್ರ ಮತ್ತು ಇತರ ದಾಖಲಾತಿಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.
ಈ ಕಾರ್ಯಾಚರಣೆಯ ವೇಳೆ, ಇನ್ನೂ ಹಲವರು ತಲೆಮರೆಸಿಕೊಂಡಿದ್ದು ಆರೋಪಿಗಳ ಪತ್ತೆ ಕಾರ್ಯ ಪ್ರಗತಿಯಲ್ಲಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬೆಂಗಳೂರು ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಸಭೆ
ಸುಬ್ರಮಣ್ಯ ನಗರ, ಮಹಾಲಕ್ಷ್ಮೀ ಲೇಔಟ್, ನಂದಿನಿ ಲೇಔಟ್, ರಾಜಗೋಪಾಲ ನಗರ, ಆರ್ ಎಂ ಸಿ ಯಾರ್ಡ್, ಸೋಲದೇವನ ಹಳ್ಳಿ, ಬಾಗಲಕುಂಟೆ, ಜಾಲಹಳ್ಳಿ, ಪೀಣ್ಯ ಮತ್ತು ಆರ್ ಟಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
ಚಕ್ರಬಡ್ಡಿ, ಮೀಟರ್ ಬಡ್ಡಿ ದಂಧೆ ಅವ್ಯಾಹುತವಾಗಿ ನಡೆಯುತ್ತಿರುವ ಬಗ್ಗೆ ದೂರುಗಳು ಬಂದಿದ್ದರಿಂದ, ಪೊಲೀಸರಿಂದ ಈ ವಿಶೇಷ ಕಾರ್ಯಾಚರಣೆ ನಡೆದಿದೆ.