ಅಪಾರ್ಟ್ಮೆಂಟ್ ನಿವಾಸಿಗಳಿಗೆ ಎಚ್ಚರಿಕೆ ನೀಡಿದ ಬೆಸ್ಕಾಂ
ಬೆಂಗಳೂರು, ಸೆ. 08 : ಬೆಂಗಳೂರಿನಲ್ಲಿ ಮಳೆಯಿಂದ ಪ್ರವಾಹ ಪೀಡಿತವಾಗುವ ಪ್ರದೇಶಗಳಲ್ಲಿ ಸಂಭವಿಸಬಹುದಾದ ವಿದ್ಯುತ್ ಅಪಘಾತಗಳನ್ನು ತಡೆಗಟ್ಟಲು ಬೆಸ್ಕಾಂ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.
ಅಪಾರ್ಟ್ಮೆಂಟ್ ಗಳ ನೆಲಮಾಳಿಗೆಗಳಲ್ಲಿ ವಿದ್ಯುತ್ ಮೀಟರ್, ಟ್ರಾನ್ಸ್ ಫಾರ್ಮರ್ ಗಳಿದ್ದರೆ ಆರು ತಿಂಗಳೊಳಗೆ ಬೇರೆಡೆಗೆ ಸ್ಥಳಾಂತರಿಸಬೇಕು ಇಲ್ಲದಿದ್ದರೆ ಸಂಪರ್ಕವನ್ನು ಅಕ್ರಮ ಎಂದು ಪರಿಗಣಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ನೆಲಮಹಡಿಯಲ್ಲಿರುವ ವಿದ್ಯುತ್ ಮೀಟರ್ ಗಳ ಸ್ಥಳಾಂತರಕ್ಕೆ ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರು ಕೂಡಾ ಕರೆ ನೀಡಿದ್ದಾರೆ. ನಗರದ ತಗ್ಗುಪ್ರದೇಶಗಳಲ್ಲಿ ನಿರ್ಮಿಸಲಾಗಿರುವ ಅಪಾರ್ಟ್ಮೆಂಟ್ ಗಳಲ್ಲಿ ನೀರು ನುಗ್ಗುತ್ತಿದ್ದು, ಸುರಕ್ಷತೆ ದೃಷ್ಟಿಯಿಂದ ಬೇಸ್ ಮೆಂಟ್ ಗಳಲ್ಲಿ ಮೀಟರ್ ಅಳವಡಿಸುವಂತಿಲ್ಲ.

ನೆಲ ಮಾಳಿಗೆಯಲ್ಲಿ ವಿದ್ಯುತ್ ಮೀಟರ್, ಟ್ರಾನ್ಸ್ ಫಾರ್ಮರ್ ಹೊಂದಿರುವ ವಸತಿ ಸಮುಚ್ಚಯಗಳನ್ನು ಗುರುತಿಸಿ ನೋಟಿಸ್ ಜಾರಿಗೊಳಿಸಲಾಗುವುದು. ಎಲ್ಲೆಲ್ಲಿ ಟ್ರಾನ್ಸ್ ಫಾರ್ಮರ್ ಗಳನ್ನು ಅಳವಡಿಸಬಹುದು ಎಂಬುದರ ಬಗ್ಗೆ ನಿವಾಸಿಗಳಿಗೆ ಬೆಸ್ಕಾಂ ಅಧಿಕಾರಿಗಳು ನೆರವು ನೀಡಲಿದ್ದಾರೆ.
ಬೆಂಗಳೂರಿನ ಮಹಾಮಳೆಗೆ ಎಚ್ ಎಸ್ ಆರ್ ಲೇಔಟಿನ 6ನೇ ಸೆಕ್ಟರ್ ನ 50 ಕಟ್ಟಡಗಳು, ಕೋರಮಂಗಲ ನಾಲ್ಕನೇ ಬ್ಲಾಕಿನ 40 ಕಟ್ಟಡಗಳು ನೀರಿನಿಂದ ಆವರಿಸಿಕೊಂಡಿದ್ದವು, ಸುರಕ್ಷತಾ ದೃಷ್ಟಿಯಿಂದ ಪವರ್ ಕಟ್ ಮಾಡಿ, ನೀರನ್ನು ಸಂಪೂರ್ಣವಾಗಿ ಹೊರಕ್ಕೆ ಹಾಕಿದ ಬಳಿಕ ವಿದ್ಯುತ್ ಪೂರೈಕೆ ಎಂದಿನಂತೆ ನೀಡಲಾಯಿತು ಎಂದು ಸಚಿವ ಡಿಕೆ ಶಿವಕುಮಾರ್ ಅವರು ಹೇಳಿದರು.
ಹವಾಮಾನ ಇಲಾಖೆ ವರದಿಗಳ ಪ್ರಕಾರ ಬೆಂಗಳೂರಿನಲ್ಲಿ ಈ ವಾರಾಂತ್ಯ ಕೂಡಾ ಸಿಕ್ಕಾಪಟ್ಟೆ ಮಳೆಯಾಗಲಿದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ











Click it and Unblock the Notifications