ಬೆಸ್ಕಾಂನಿಂದ ಸಿಹಿ ಸುದ್ದಿ: ಪ್ರತಿ ಯುನಿಟ್ ವಿದ್ಯುತ್ಗೆ ₹50 ಪೈಸೆ ರಿಯಾಯಿತಿ ಘೋಷಣೆ, ಯಾರು ಅರ್ಹರು?
ಬೆಂಗಳೂರು, 28: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಮಧ್ಯಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಅರ್ಹ ಎಂಎಸ್ಎಂಇ ಗ್ರಾಹಕರಿಗೆ ವಿದ್ಯುತ್ ಪೂರೈಕೆಯಲ್ಲಿ ರಿಯಾಯಿತಿ ಘೋಷಿಸಿದೆ. ಈ ಮೂಲಕ ಎಂಎಸ್ಎಂಇ (MSME) ವಲಯವನ್ನು ಪ್ರೋತ್ಸಾಹಿಸುತ್ತಿದೆ.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ವ್ಯಾಪ್ತಿಯಲ್ಲಿರುವ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯದ ಗ್ರಾಹಕರಿಗೆ ಬೆಸ್ಕಾಂ ವಿದ್ಯುತ್ ಶುಲ್ಕದಲ್ಲಿ ಪ್ರತಿ ಯುನಿಟ್ಇ ವಿದ್ಯುತ್ ಗೆ 50 ಪೈಸೆ ರಿಯಾಯಿತಿ ಘೋಷಣೆ ಮಾಡಿದೆ. ಈ ಕುರಿತು ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

ಈ ಹಿಂದೆ ಚಂದ್ರಯಾನ 3 ಯಶಸ್ವಿಯಾಗಿದ್ದಕ್ಕೆ ವಿಬಿನ್ನವಾಗಿ ಬೆಸ್ಕಾಂ ಇಸ್ರೋಗೆ ಅಭಿನಂದನೆ ಸಲ್ಲಿಸುವ ಜೊತೆಗೆ ಹೆಮ್ಮೆ ವ್ಯಕ್ತಪಡಿಸಿತ್ತು. 'ಭೂಮಿಯೇ ಆಗಿರಲಿ, ಇಲ್ಲ ಚಂದ್ರನ ಅಂಗಳವೇ ಆಗಿರಲಿ ವಿದ್ಯುತ್ ಸೇವೆಯೊಂದೆ ನಮ್ಮ ಗುರಿ' ಎಂದು ಚಂದ್ರಯಾನದ ಯಶಸ್ಸಿನ ಕುರಿತು ಬೆಸ್ಕಾಂ ಪೋಸ್ಟ್ ಹಾಕಿತ್ತು. ಈ ಮೂಲಕ ಭೂಮಿ ಮಾತ್ರವಲ್ಲದೇ ಚಂದ್ರನ ಮೇಲೂ ನಾವು ವಿದ್ಯುತ್ ಪೂರೈಕೆ ಸಿದ್ಧರಿದ್ದೇವೆ ಎಂದು ತಿಳಿಸುವ ಮೂಲಕ ಹರ್ಷ ವ್ಯಕ್ತಪಡಿಸಿತ್ತು.
ಬೆಸ್ಕಾಂ ನೀಡಿದ ವಿಶೇಷ ಸೂಚನೆ ಹೀಗಿದೆ
ಇದರ ಬೆನ್ನಲ್ಲೆ ಇದೀಗ ಎಂಎಸ್ಎಂಇ ಗ್ರಾಹಕರಿಗೆ ವಿದ್ಯುತ್ ಪೂರೈಕೆಯಲ್ಲಿ ಪ್ರತಿ ಯುನಿಟ್ಗೆ 50 ಪೈಸೆ ರಿಯಾಯಿತಿ ಘೋಷಣೆ ಮಾಡಿದೆ. ಯಾರು ಯಾರು ಬೆಸ್ಕಾಂ ವ್ಯಾಪ್ತಿಯ ಎಲ್ಟಿ ಜಕಾತಿಯ ಎಂಎಸ್ಎಂಇ ಗ್ರಾಹಕರಿಗೆ ವಿದ್ಯುತ್ ರಿಯಾಯಿತಿ ಸೌಲಭ್ಯ ದೊರೆಯಲಿದೆ.
ಈ ಸಂಬಂಧ ಅರ್ಜಿ ಸಲ್ಲಿಸುವ ಗ್ರಾಹಕರು ಭಾರತ ಸರ್ಕಾರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ವರ್ಗದ ಕೈಗಾರಿಕೆ ಇಲ್ಲವೇ ಉದ್ಯಮ್ ಪ್ರಯಾಣ ಪತ್ರವನ್ನು ಹೊಂದಿರಬೇಕು. ಅಂತವರು ವಿದ್ಯುತ್ ರಿಯಾಯಿತಿ ಪಡೆಯಲು ಈ ಕೂಡಲೇ ಅರ್ಜಿ ಸಲ್ಲಿಸಬೇಕು ಎಂದು ಬೆಸ್ಕಾಂ ತಿಳಿಸಿದೆ.

ಕಾಂಗ್ರೆಸ್ ಸರ್ಕಾರ ತಾನು ಅಧಿಕಾರಕ್ಕೆ ಬರುತ್ತಿದ್ದಂತೆ ರಾಜ್ಯದ ಜನರಿಗೆ 200 ಯುನಿಟ್ರೆಗೆ ವಿದ್ಯುತ್ ಅನ್ನು 'ಗೃಹ ಜ್ಯೋತಿ' ಯೋಜನೆಯಡಿ ಪೂರೈಸುವುದಾಗಿ ತಿಳಿಸಿದೆ. ಇದೀಗ ಇದರ ಬೆನ್ನಲ್ಲೆ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯ (MSME) ಬೆಸ್ಕಾಂ ಗ್ರಾಹಕರಿಗೆ ಪ್ರತಿ ಯುನಿಟ್ ವಿದ್ಯುತ್ಗೆ 50 ಪೈಸೆ ರಿಯಾಯಿತಿ ಘೋಷಣೆ ಮಾಡಿದೆ.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ












Click it and Unblock the Notifications