ಇವಿ-ಚಾರ್ಜಿಂಗ್ ಸ್ಟೇಷನ್ ಹುಡುಕಲು ಬೆಸ್ಕಾಂನಿಂದ ಆ್ಯಪ್ ಬಿಡುಗಡೆ
ಬೆಂಗಳೂರು, ಡಿಸೆಂಬರ್ 23: ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಸ್ಟೇಷನ್ಗಳನ್ನು ಹುಡುಕಲು ಸುಲಭವಾಗುವಂತೆ 'ಇವಿ ಮಿತ್ರ' ಎನ್ನುವ ಅಪ್ಲಿಕೇಷನ್ ಒಂದನ್ನು ಬೆಸ್ಕಾಂ ಬಿಡುಗಡೆ ಮಾಡಿದೆ.
ಬೆಸ್ಕಾಂ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ, ಎಲೆಕ್ಟ್ರಿಕಲ್ ವಾಹನ ಚಾರ್ಜಿಂಗ್ಗಾಗಿ ನಗರದಲ್ಲಿ 74 ಸ್ಥಳಗಳಲ್ಲಿ 136 ಪೋರ್ಟ್ಸ್ಗಳನ್ನು ಹೊಂದಿದೆ. ಮೊಬೈಲ್ ಅಪ್ಲಿಕೇಷನ್ ಮೂಲಕ ಹತ್ತಿರದ ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೇಷನ್ಗಳು ಎಲ್ಲಿವೆ ಎಂಬುದರ ಕುರಿತು ಮಾಹಿತಿ ಲಭ್ಯವಾಗಲಿದೆ.
ಈ ಸ್ಟೇಷನ್ಗಳು ಬೆಳಗ್ಗೆ 6 ರಿಂದ ರಾತ್ರಿ 10ರವರೆಗೂ ತೆರೆದಿರುತ್ತವೆ, ಆದರೆ ಎಲೆಕ್ಟ್ರಿಕ್ ವಾಹನಗಳನ್ನು ಹೊಂದಿರುವವರಿಗೆ ಈ ಮಾಹಿತಿ ಲಭ್ಯವಿಲ್ಲ. ಈ ಅಪ್ಲಿಕೇಷನ್ ಮೂಲಕ ವಾಹನಗಳ ಚಾರ್ಜಿಂಗ್ ಕುರಿತು ಅರಿವು ಮೂಡಿಸಲು ನೆರವಾಗುತ್ತದೆ. ಸ್ಟೇಷನ್ಗಳಲ್ಲಿ AC001 ಹಾಗೂ DC001 ಚಾರ್ಜರ್ ಮಾಡೆಲ್ಗಳು ಲಭ್ಯವಿದೆ.

ಇವಿ ಮಿತ್ರ ಅಪ್ಲಿಕೇಷನ್ ಆಂಡ್ರಾಯ್ಡ್ ಹಾಗೂ ಐಒಎಸ್ ಮೊಬೈಲ್ಗಳಲ್ಲಿ ಲಭ್ಯವಿದೆ. ಮುಂದಿನ ಕೆಲವು ತಿಂಗಳುಗಳಲ್ಲಿ ನಗರದಲ್ಲಿ 300 ಇವಿ ಚಾರ್ಜಿಂಗ್ ಸ್ಟೇಷನ್ಗಳನ್ನು ತೆರೆಯಲಾಗುತ್ತದೆ.
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ 1 ಸಾವಿರ ರೀಚಾರ್ಜಿಂಗ್ ಸೆಂಟರ್ ತೆರೆಯುತ್ತೇವೆ. ಈ ಪೈಕಿ ಬೆಂಗಳೂರು ಒಂದರಲ್ಲೇ 500 ಸೆಂಟರ್ ತೆರೆಯುವ ಸಾಧ್ಯತೆಯಿದೆ ಎಂದು ಬೆಂಗಳೂರಲ್ಲಿ ಇಂಧನ ಸಚಿವ ಸುನಿಲ್ ಕುಮಾರ್ ತಿಳಿಸಿದರು. ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಬೇಕಾಗಿದೆ. ಹೀಗಾಗಿ ಕೇಂದ್ರ, ರಾಜ್ಯ ಸರ್ಕಾರ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ.
ಅಪಾರ್ಟ್ಮೆಂಟ್, ಮಾಲ್, ಸರ್ಕಾರಿ ಕಚೇರಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿ, ಪ್ರವಾಸೋದ್ಯಮ ಜಾಗಗಳಲ್ಲಿ ರೀಚಾರ್ಜಿಂಗ್ ಸೆಂಟರ್ ಮಾಡಬೇಕು ಎಂದು ಆಲೋಚನೆಯಿದೆ. ಹೀಗಾಗಿ ವಾಹನಗಳನ್ನು ತಯಾರಿಸುವ ಮಾಲೀಕರ ಜತೆ ಕಾರ್ಯಾಗಾರ ಮಾಡುವ ಮೂಲಕ ಮಾತುಕತೆ ನಡೆಸಲಾಗುತ್ತಿದೆ ಎಂದು ಅವರು ವಿವರಿಸಿದರು.
ವಿದ್ಯುತ್ ಚಾಲಿತ ವಾಹನ ಇನ್ನು ಮುಂದೆ ಅನಿವಾರ್ಯ: ವಿದ್ಯುತ್ ಚಾಲಿತ ವಾಹನಗಳಿಗೆ ಪ್ರೋತ್ಸಾಹ ನೀಡಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಬೆಂಗಳೂರಿನಲ್ಲಿ 136 ಕಡೆ ವಿದ್ಯುತ್ ರೀ ಚಾರ್ಜಿಂಗ್ ಸೆಂಟರ್ ಆರಂಭವಾಗುತ್ತಿದೆ. ಮುಂದಿನ ದಿನಗಳಲ್ಲಿ 500ಕ್ಕೂ ಹೆಚ್ಚು ಸೆಂಟರ್ ನಿರ್ಮಾಣವಾಗಲಿದೆ.
ವಿದ್ಯುತ್ ಚಾಲಿತ ವಾಹನಗಳು ಭವಿಷ್ಯಕ್ಕೆ ಅನಿವಾರ್ಯವಾಗಿರುವ ಕಾರಣ ನಾವು ವಿದ್ಯುತ್ ಚಾಲಿತ ವಾಹನಗಳಿಗೆ ಹೆಚ್ಚು ಪ್ರೋತ್ಸಾಹ ನೀಡಲಿದ್ದೇವೆ ಎಂದು ಬೆಂಗಳೂರಿನಲ್ಲಿ ಇಂಧನ ಸಚಿವ ಸುನಿಲ್ಕುಮಾರ್ ಸೆಪ್ಟೆಂಬರ್ 9ರಂದು ಸಹ ಹೇಳಿಕೆ ನೀಡಿದ್ದರು.
Recommended Video
ವಿದ್ಯುತ್ ಚಾಲಿತ ವಾಹನಗಳಿಗೆ ಬೇಕಾದ ಅಗತ್ಯ ಸೌಕರ್ಯ ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಯೋಜನೆಗಳನ್ನು ರೂಪಿಸಲಿದೆ. ಈ ವಾಹನಗಳ ಬಳಕೆ ಹೆಚ್ಚಾಗಲಿದ್ದು, ಭವಿಷ್ಯದಲ್ಲಿ ಇದು ಅನಿವಾರ್ಯವಾಗಲಿದೆ. ಹೀಗಾಗಿ ರೀ ಚಾರ್ಜಿಂಗ್ ಸೆಂಟರ್ ಸ್ಥಾಪಿಸಲು ಹೆಚ್ಚು ಒತ್ತು ನೀಡಲಿದ್ದೇವೆ. ಇದು ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.
-
"ನಾನು ಔಟ್ ಆಗಿದ್ದಕ್ಕೇ ತುಂಬಾ ಖುಷಿಯಾಯ್ತು": ಸಿಎಸ್ಕೆ ಎದುರು ರನ್ ಮಳೆ ಹರಿಸಿದ ಬಳಿಕ ಪಡಿಕ್ಕಲ್ ಹೀಗಂದಿದ್ದೇಕೆ? -
2026ರ PUC ಫಲಿತಾಂಶಕ್ಕೆ ಕ್ಷಣಗಣನೆ; ಈ ಬಾರಿ ಡಿಜಿಲಾಕರ್ನಲ್ಲೂ ರಿಸಲ್ಟ್ ಲಭ್ಯ, ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru: ನಸುಕಿನ ಜಾವ 3 ಗಂಟೆಗೆ ರಾಪಿಡೋ ರೈಡರ್ ತೋರಿದ ಮಾನವೀಯತೆಗೆ ಮಹಿಳೆ ಫಿದಾ, Video Viral -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
Virat Kohli: ನಾನೇನು ವಿದೇಶಿ ಆಟಗಾರನಾ?: ಲಂಡನ್ ವಾಸ್ತವ್ಯದ ಬಗ್ಗೆ ಟೀಕಾಕಾರರಿಗೆ ವಿರಾಟ್ ಕೊಹ್ಲಿ ತಿರುಗೇಟು -
ಒರಾಕಲ್ನಲ್ಲಿ ಕೆಲಸ ಕಳೆದುಕೊಂಡ ಟೆಕ್ಕಿ ಊರಿಗೆ ಮರಳಿ ಉಬರ್ ಓಡಿಸುತ್ತಿರುವ ಸ್ಫೂರ್ತಿದಾಯಕ ಕಥೆ Viral -
Silk Board: ಹಳದಿ-ನೀಲಿ ಮೆಟ್ರೋ ಲೈನ್ ಪ್ರಯಾಣಿಕರಿಗಾಗಿ 'ಟ್ರಾವೆಲೇಟರ್-ಕನೆಕ್ಟಿಂಗ್ ವಾಕ್ವೇ ಸಂಪರ್ಕ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
ಹುಡುಗಿಯರೇ ಎಚ್ಚರ: ಟಾಕ್ಸಿಕ್ ಗಂಡಸರ ಲಕ್ಷಣಗಳಿವು, ಮೆಚ್ಚಿ ಒಲಿದರೆ ಬಲಿಯಾಗುವಿರಿ -ಡಾ ರೂಪಾ ರಾವ್ ಬರಹ












Click it and Unblock the Notifications